Advertisement
ಸುದ್ದಿಗಳು

ಅಧಿಕೃತವಾಗಿ ಕಾಂಗ್ರೆಸ್ ಸೇರಿದ ದೊಡ್ಮನೆ ಸೊಸೆ ಗೀತಾ ಶಿವರಾಜ್ ಕುಮಾರ್

Share

ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್  ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಗೆ  ಅಧಿಕೃತವಾಗಿ ಸೇರ್ಪಡೆಗೊಂಡರು. ಕಾಂಗ್ರೆಸ್ ತತ್ವ ಮತ್ತು ಸಿದ್ಧಾಂತವನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ಹೇಳಿದ್ದಾರೆ. ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಧ್ವಜ ನೀಡುವ ಮೂಲಕ ಅವರನ್ನು ಸ್ವಾಗತಿಸಿದರು. ಮಧು ಬಂಗಾರಪ್ಪ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು.

Advertisement
Advertisement

Advertisement

 ‘ಇಂದು ಗೀತಾ ಕಾಂಗ್ರೆಸ್ ಪಕ್ಷ ಸೇರಿ, ನಾಳೆಯಿಂದ ಸೊರಬದಲ್ಲಿ ಪ್ರಚಾರಕ್ಕೆ ತೆರಳುತ್ತಾರೆ. ಅವರ ಜೊತೆ ನಾನೂ ತೆರಳುತಿದ್ದೇನೆ. ಸೊರಬದಲ್ಲಿ ಮಧು ಹಾಗೂ ಅವರ ಮಾವ ಭೀಮ ನಾಯಕ್ ಸಿರಸಿಯಲ್ಲಿ ಚುನಾವಣೆಗೆ ಸ್ಪರ್ಧಿಸುತಿದ್ದಾರೆ. ಇಬ್ಬರೂ ಗೆಲ್ಲಲಿ ಎಂದು ಹಾರೈಸುತ್ತೇನೆ’ ಎಂದು ಚಿತ್ರನಟ ಶಿವರಾಜ್ ಕುಮಾರ್ ಹೇಳಿದರು.

ಮುಂದುವರೆದು ಮಾತನಾಡಿದ ಶಿವರಾಜ್ ಕುಮಾರ್, ‘ಬಂಗಾರಪ್ಪ ಅವರ ಮಕ್ಕಳಾದ ಮಧು ಹಾಗೂ ಗೀತಾರಿಗೆ ರಾಜಕೀಯ ಹೇಳಿಕೊಡೊದು ಬೇಡ. ತಾಯಿ ಹೋದ ಬಳಿಕ ಎರಡು ವರ್ಷದಿಂದ ಶಕ್ತಿ ಧಾಮದ ಪ್ರೆಸಿಡೆಂಟ್ ಆಗಿದ್ದಾರೆ ಗೀತೆ. ಮಕ್ಕಳಿಗೆ ಸ್ಕಿಲ್ ಡೆವಲಪ್ಮೆಂಟ್ ಮಾಡುತಿದ್ದಾರೆ. ಸುತ್ತಮುತ್ತ ಫ್ರೀ ಬೇಕಿಂಗ್ ಕ್ಯಾಂಪ್ ಮಾಡಿ ಅವೇರ್ ನೆಸ್ ಕೂಡ ಮಾಡಿದ್ದಾರೆ. ಸಮಾಜಮುಖಿ ಕೆಲಸಗಳ ಬಗ್ಗೆ ಅವರಿಗೆ ಆಸಕ್ತಿ ಇದೆ’ ಎಂದು ಹೇಳಿದರು.

Advertisement

ಗೀತಾ ಶಿವರಾಜ್ ಕುಮಾರ್ ರ ಕಿರಿಯ ಸಹೋದರ ಮಧು ಬಂಗಾರಪ್ಪ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಸ್ವತಃ ಸಹೋದರ ಕುಮಾರ್ ಬಂಗಾರಪ್ಪ ಅವರ ವಿರುದ್ಧವೇ ಸೊರಬ ಕ್ಷೇತ್ರದಲ್ಲಿ ಅಖಾಡಕ್ಕೆ ಇಳಿದಿದ್ದಾರೆ. ಕಿರಿಯ ಸಹೋದರನನ್ನು ಬೆಂಬಲಿಸುವುದಕ್ಕಾಗಿ ಗೀತಾ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ | ದಕ್ಷಿಣ ಕನ್ನಡದಲ್ಲೂ ಯಶಸ್ವಿಯಾಗಿ ಅನುಷ್ಟಾನ |

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ ದೇಶದಾದ್ಯಂತ ಚಾಲನೆಗೊಂಡಿದೆ. ಈ ಯೋಜನೆಯಡಿ “ಮಾದರಿ ಸೌರ…

13 hours ago

ಹಾಲಿನ ದರ ಹೆಚ್ಚಳ ಚರ್ಚೆ| ಹೈನುಗಾರರಿಗೆ ಪ್ರಯೋಜನವೇನು…? |

ಹಾಲಿನ ದರ ಹೆಚ್ಚಳದ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳೂ…

14 hours ago