Advertisement
ಸುದ್ದಿಗಳು

ಲಿಂಗಾಯತ ಅಭ್ಯರ್ಥಿಯನ್ನೇ ಸಿಎಂ ಮಾಡುತ್ತಾ..? ಧೈರ್ಯ ಬಿಜೆಪಿಗಿದೆಯಾ?: ಜಗದೀಶ್ ಶೆಟ್ಟರ್

Share

ಮುಂದೆಯೂ ಲಿಂಗಾಯತ ಅಭ್ಯರ್ಥಿಯನ್ನೇ ಸಿಎಂ ಮಾಡುತ್ತೇವೆ ಎಂದು ಹೇಳುವ ಧೈರ್ಯ ಬಿಜೆಪಿಯವರಿಗೆ ಇದೆಯಾ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರಶ್ನೆ ಮಾಡಿದರು.

ಧಾರವಾಡದಲ್ಲಿ ಮಾತನಾಡಿದ ಅವರು, ಬಿಜೆಪಿ ಈಗ ಯಾರ ಕೈಯಲ್ಲಿ ಇದೆ ಎಂಬುದು ಎಲ್ಲರಿಗೂ ಗೊತ್ತಾಗುತ್ತಿದೆ. ಇದರಿಂದ ಉಳಿದ ಸಮಯದಾಯದವರು ನೊಂದಿದ್ದಾರೆ. ಇದಕ್ಕೆ ತಕ್ಕ ಪಾಠ ಬಿಜೆಪಿಗೆ ಚುನಾವಣೆಯಲ್ಲಿ ಸಿಗಲಿದೆ. ಲಿಂಗಾಯತ ಸಮುದಾಯ ಹೊರಗಿಟ್ಟು ಅದರ ಬೆಂಬಲ ಇಲ್ಲದೇ ಬಿಜೆಪಿಯವರು ಸರ್ಕಾರ ರಚನೆ ಮಾಡಲು ಹೊರಟಿದ್ದಾರೆ. ಅವಸರವೇ ಬಿಜೆಪಿಗೆ ಅಪಘಾತವನ್ನುಂಟು ಮಾಡಲಿದೆ ಎಂದರು.

ರಾಜ್ಯದಲ್ಲಿ 25 ಸಂಸದರಿದ್ದರೂ ಪ್ರಹ್ಲಾದ್ ಜೋಶಿ ಒಬ್ಬರನ್ನೇ ಕ್ಯಾಬಿನೆಟ್ ದರ್ಜೆಯ ಸಚಿವರನ್ನಾಗಿ ಮಾಡಲಾಗಿದೆ. ನಾರಾಯಣಸ್ವಾಮಿ ದಲಿತ ಜನಾಂಗದವರು ಅವರು ರಾಜ್ಯಮಂತ್ರಿಯಾಗಿದ್ದಾರೆ. ಶೋಭಾ ಕರಂದ್ಲಾಜೆ ಒಕ್ಕಲಿಗರು ಅವರು ಕೂಡ ರಾಜ್ಯಮಂತ್ರಿಯಾಗಿದ್ದಾರೆ. ಲಿಂಗಾಯತ ಸಮಾಜದ ಭಗವಂತ ಖೂಬಾ ಹಾಗೂ ಸುರೇಶ್ ಅಂಗಡಿ ಯವರನ್ನೂ ರಾಜ್ಯಮಂತ್ರಿಯನ್ನಾಗಿ ಮಾಡಲಾಗಿತ್ತು. ಇಲ್ಲೇ ತಾರತಮ್ಯ ಎದ್ದು ಕಾಣುತ್ತಿದೆ ಎಂದು ಹೇಳಿದರು.

ವಿನಯ್ ಕುಲಕರ್ಣಿ  ಅವರಿಗೆ ನೇರವಾಗಿ ಬಂದು ಪ್ರಚಾರ ಮಾಡಲು ಆಗುತ್ತಿಲ್ಲ. ಅವರ ಮೇಲೆ ದೊಡ್ಡ ಷಡ್ಯಂತ್ರವೇ ನಡೆದಿದೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಅವರ ಬೆಂಬಲಿಗರಿಗೆ ಪ್ರಚಾರ ಮಾಡುವ ಹಕ್ಕಿದೆ. ಆದರೆ ಅವರ ಬೆಂಬಲಿಗರ ಮೇಲೂ ಐಟಿ ದಾಳಿ ನಡೆಸಿ ಹೆದರಿಸುವ ತಂತ್ರ ನಡೆದಿದೆ. ಇದು ಬಹಳ ದಿನ ನಡೆಯುವುದಿಲ್ಲ. ಕೇಂದ್ರದಲ್ಲಿ ಅಧಿಕಾರ ಇದೆ ಎಂದು ಇಲ್ಲಿನ ಕೇಂದ್ರ ಸಚಿವರು ಈ ರೀತಿ ದಾಳಿ ಮಾಡಿಸುತ್ತಿದ್ದಾರೆ. ಇದನ್ನು ಮೆಟ್ಟಿ ನಿಲ್ಲುವ ಶಕ್ತಿ ನಮಗಿದೆ. ಇದೆಲ್ಲದಕ್ಕೂ ಮೇ.13 ರಂದು ಜನ ಉತ್ತರ ಕೊಡುತ್ತಾರೆ ಎಂದು ಶೆಟ್ಟರ್ ಹೇಳಿದರು.

ನಿನ್ನೆ ನಾನು ರೋಣ, ಹಾವೇರಿ, ಗಜೇಂದ್ರಗಡ ಸೇರಿದಂತೆ ಹಲವು ಕಡೆ ಪ್ರಚಾರ ಮಾಡಿದ್ದೇನೆ. ಮಧ್ಯಾಹ್ನ ಉರಿಬಿಸಿಲಿನಲ್ಲೂ ಜನ ಸೇರಿದ್ದರು. ಇದನ್ನು ನೋಡಿದರೆ ನಮಗೆ ಉತ್ತಮ ಬೆಂಬಲ ಸಿಗುತ್ತಿದೆ. ಬಿಜೆಪಿಯಲ್ಲಿ ನನಗೆ ಅಪಮಾನ ಮಾಡಿದ್ದಕ್ಕೆ ಹೊರ ಬಂದಿದ್ದೇನೆ. ನಾನು ಕಟ್ಟಿದ ಮನೆಯಿಂದ ನನ್ನನ್ನು ಹೊರ ಹಾಕುವ ಕೆಲಸ ನಡೆಯಿತು ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

23 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

1 day ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

1 day ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago