Advertisement
ಸುದ್ದಿಗಳು

ಲಿಂಗಾಯತ ಅಭ್ಯರ್ಥಿಯನ್ನೇ ಸಿಎಂ ಮಾಡುತ್ತಾ..? ಧೈರ್ಯ ಬಿಜೆಪಿಗಿದೆಯಾ?: ಜಗದೀಶ್ ಶೆಟ್ಟರ್

Share

ಮುಂದೆಯೂ ಲಿಂಗಾಯತ ಅಭ್ಯರ್ಥಿಯನ್ನೇ ಸಿಎಂ ಮಾಡುತ್ತೇವೆ ಎಂದು ಹೇಳುವ ಧೈರ್ಯ ಬಿಜೆಪಿಯವರಿಗೆ ಇದೆಯಾ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರಶ್ನೆ ಮಾಡಿದರು.

ಧಾರವಾಡದಲ್ಲಿ ಮಾತನಾಡಿದ ಅವರು, ಬಿಜೆಪಿ ಈಗ ಯಾರ ಕೈಯಲ್ಲಿ ಇದೆ ಎಂಬುದು ಎಲ್ಲರಿಗೂ ಗೊತ್ತಾಗುತ್ತಿದೆ. ಇದರಿಂದ ಉಳಿದ ಸಮಯದಾಯದವರು ನೊಂದಿದ್ದಾರೆ. ಇದಕ್ಕೆ ತಕ್ಕ ಪಾಠ ಬಿಜೆಪಿಗೆ ಚುನಾವಣೆಯಲ್ಲಿ ಸಿಗಲಿದೆ. ಲಿಂಗಾಯತ ಸಮುದಾಯ ಹೊರಗಿಟ್ಟು ಅದರ ಬೆಂಬಲ ಇಲ್ಲದೇ ಬಿಜೆಪಿಯವರು ಸರ್ಕಾರ ರಚನೆ ಮಾಡಲು ಹೊರಟಿದ್ದಾರೆ. ಅವಸರವೇ ಬಿಜೆಪಿಗೆ ಅಪಘಾತವನ್ನುಂಟು ಮಾಡಲಿದೆ ಎಂದರು.

ರಾಜ್ಯದಲ್ಲಿ 25 ಸಂಸದರಿದ್ದರೂ ಪ್ರಹ್ಲಾದ್ ಜೋಶಿ ಒಬ್ಬರನ್ನೇ ಕ್ಯಾಬಿನೆಟ್ ದರ್ಜೆಯ ಸಚಿವರನ್ನಾಗಿ ಮಾಡಲಾಗಿದೆ. ನಾರಾಯಣಸ್ವಾಮಿ ದಲಿತ ಜನಾಂಗದವರು ಅವರು ರಾಜ್ಯಮಂತ್ರಿಯಾಗಿದ್ದಾರೆ. ಶೋಭಾ ಕರಂದ್ಲಾಜೆ ಒಕ್ಕಲಿಗರು ಅವರು ಕೂಡ ರಾಜ್ಯಮಂತ್ರಿಯಾಗಿದ್ದಾರೆ. ಲಿಂಗಾಯತ ಸಮಾಜದ ಭಗವಂತ ಖೂಬಾ ಹಾಗೂ ಸುರೇಶ್ ಅಂಗಡಿ ಯವರನ್ನೂ ರಾಜ್ಯಮಂತ್ರಿಯನ್ನಾಗಿ ಮಾಡಲಾಗಿತ್ತು. ಇಲ್ಲೇ ತಾರತಮ್ಯ ಎದ್ದು ಕಾಣುತ್ತಿದೆ ಎಂದು ಹೇಳಿದರು.

ವಿನಯ್ ಕುಲಕರ್ಣಿ  ಅವರಿಗೆ ನೇರವಾಗಿ ಬಂದು ಪ್ರಚಾರ ಮಾಡಲು ಆಗುತ್ತಿಲ್ಲ. ಅವರ ಮೇಲೆ ದೊಡ್ಡ ಷಡ್ಯಂತ್ರವೇ ನಡೆದಿದೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಅವರ ಬೆಂಬಲಿಗರಿಗೆ ಪ್ರಚಾರ ಮಾಡುವ ಹಕ್ಕಿದೆ. ಆದರೆ ಅವರ ಬೆಂಬಲಿಗರ ಮೇಲೂ ಐಟಿ ದಾಳಿ ನಡೆಸಿ ಹೆದರಿಸುವ ತಂತ್ರ ನಡೆದಿದೆ. ಇದು ಬಹಳ ದಿನ ನಡೆಯುವುದಿಲ್ಲ. ಕೇಂದ್ರದಲ್ಲಿ ಅಧಿಕಾರ ಇದೆ ಎಂದು ಇಲ್ಲಿನ ಕೇಂದ್ರ ಸಚಿವರು ಈ ರೀತಿ ದಾಳಿ ಮಾಡಿಸುತ್ತಿದ್ದಾರೆ. ಇದನ್ನು ಮೆಟ್ಟಿ ನಿಲ್ಲುವ ಶಕ್ತಿ ನಮಗಿದೆ. ಇದೆಲ್ಲದಕ್ಕೂ ಮೇ.13 ರಂದು ಜನ ಉತ್ತರ ಕೊಡುತ್ತಾರೆ ಎಂದು ಶೆಟ್ಟರ್ ಹೇಳಿದರು.

ನಿನ್ನೆ ನಾನು ರೋಣ, ಹಾವೇರಿ, ಗಜೇಂದ್ರಗಡ ಸೇರಿದಂತೆ ಹಲವು ಕಡೆ ಪ್ರಚಾರ ಮಾಡಿದ್ದೇನೆ. ಮಧ್ಯಾಹ್ನ ಉರಿಬಿಸಿಲಿನಲ್ಲೂ ಜನ ಸೇರಿದ್ದರು. ಇದನ್ನು ನೋಡಿದರೆ ನಮಗೆ ಉತ್ತಮ ಬೆಂಬಲ ಸಿಗುತ್ತಿದೆ. ಬಿಜೆಪಿಯಲ್ಲಿ ನನಗೆ ಅಪಮಾನ ಮಾಡಿದ್ದಕ್ಕೆ ಹೊರ ಬಂದಿದ್ದೇನೆ. ನಾನು ಕಟ್ಟಿದ ಮನೆಯಿಂದ ನನ್ನನ್ನು ಹೊರ ಹಾಕುವ ಕೆಲಸ ನಡೆಯಿತು ಎಂದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

3 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

12 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

20 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

20 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago