Advertisement
ಸುದ್ದಿಗಳು

ಲಿಂಗಾಯತ ಅಭ್ಯರ್ಥಿಯನ್ನೇ ಸಿಎಂ ಮಾಡುತ್ತಾ..? ಧೈರ್ಯ ಬಿಜೆಪಿಗಿದೆಯಾ?: ಜಗದೀಶ್ ಶೆಟ್ಟರ್

Share

ಮುಂದೆಯೂ ಲಿಂಗಾಯತ ಅಭ್ಯರ್ಥಿಯನ್ನೇ ಸಿಎಂ ಮಾಡುತ್ತೇವೆ ಎಂದು ಹೇಳುವ ಧೈರ್ಯ ಬಿಜೆಪಿಯವರಿಗೆ ಇದೆಯಾ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರಶ್ನೆ ಮಾಡಿದರು.

ಧಾರವಾಡದಲ್ಲಿ ಮಾತನಾಡಿದ ಅವರು, ಬಿಜೆಪಿ ಈಗ ಯಾರ ಕೈಯಲ್ಲಿ ಇದೆ ಎಂಬುದು ಎಲ್ಲರಿಗೂ ಗೊತ್ತಾಗುತ್ತಿದೆ. ಇದರಿಂದ ಉಳಿದ ಸಮಯದಾಯದವರು ನೊಂದಿದ್ದಾರೆ. ಇದಕ್ಕೆ ತಕ್ಕ ಪಾಠ ಬಿಜೆಪಿಗೆ ಚುನಾವಣೆಯಲ್ಲಿ ಸಿಗಲಿದೆ. ಲಿಂಗಾಯತ ಸಮುದಾಯ ಹೊರಗಿಟ್ಟು ಅದರ ಬೆಂಬಲ ಇಲ್ಲದೇ ಬಿಜೆಪಿಯವರು ಸರ್ಕಾರ ರಚನೆ ಮಾಡಲು ಹೊರಟಿದ್ದಾರೆ. ಅವಸರವೇ ಬಿಜೆಪಿಗೆ ಅಪಘಾತವನ್ನುಂಟು ಮಾಡಲಿದೆ ಎಂದರು.

ರಾಜ್ಯದಲ್ಲಿ 25 ಸಂಸದರಿದ್ದರೂ ಪ್ರಹ್ಲಾದ್ ಜೋಶಿ ಒಬ್ಬರನ್ನೇ ಕ್ಯಾಬಿನೆಟ್ ದರ್ಜೆಯ ಸಚಿವರನ್ನಾಗಿ ಮಾಡಲಾಗಿದೆ. ನಾರಾಯಣಸ್ವಾಮಿ ದಲಿತ ಜನಾಂಗದವರು ಅವರು ರಾಜ್ಯಮಂತ್ರಿಯಾಗಿದ್ದಾರೆ. ಶೋಭಾ ಕರಂದ್ಲಾಜೆ ಒಕ್ಕಲಿಗರು ಅವರು ಕೂಡ ರಾಜ್ಯಮಂತ್ರಿಯಾಗಿದ್ದಾರೆ. ಲಿಂಗಾಯತ ಸಮಾಜದ ಭಗವಂತ ಖೂಬಾ ಹಾಗೂ ಸುರೇಶ್ ಅಂಗಡಿ ಯವರನ್ನೂ ರಾಜ್ಯಮಂತ್ರಿಯನ್ನಾಗಿ ಮಾಡಲಾಗಿತ್ತು. ಇಲ್ಲೇ ತಾರತಮ್ಯ ಎದ್ದು ಕಾಣುತ್ತಿದೆ ಎಂದು ಹೇಳಿದರು.

ವಿನಯ್ ಕುಲಕರ್ಣಿ  ಅವರಿಗೆ ನೇರವಾಗಿ ಬಂದು ಪ್ರಚಾರ ಮಾಡಲು ಆಗುತ್ತಿಲ್ಲ. ಅವರ ಮೇಲೆ ದೊಡ್ಡ ಷಡ್ಯಂತ್ರವೇ ನಡೆದಿದೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಅವರ ಬೆಂಬಲಿಗರಿಗೆ ಪ್ರಚಾರ ಮಾಡುವ ಹಕ್ಕಿದೆ. ಆದರೆ ಅವರ ಬೆಂಬಲಿಗರ ಮೇಲೂ ಐಟಿ ದಾಳಿ ನಡೆಸಿ ಹೆದರಿಸುವ ತಂತ್ರ ನಡೆದಿದೆ. ಇದು ಬಹಳ ದಿನ ನಡೆಯುವುದಿಲ್ಲ. ಕೇಂದ್ರದಲ್ಲಿ ಅಧಿಕಾರ ಇದೆ ಎಂದು ಇಲ್ಲಿನ ಕೇಂದ್ರ ಸಚಿವರು ಈ ರೀತಿ ದಾಳಿ ಮಾಡಿಸುತ್ತಿದ್ದಾರೆ. ಇದನ್ನು ಮೆಟ್ಟಿ ನಿಲ್ಲುವ ಶಕ್ತಿ ನಮಗಿದೆ. ಇದೆಲ್ಲದಕ್ಕೂ ಮೇ.13 ರಂದು ಜನ ಉತ್ತರ ಕೊಡುತ್ತಾರೆ ಎಂದು ಶೆಟ್ಟರ್ ಹೇಳಿದರು.

ನಿನ್ನೆ ನಾನು ರೋಣ, ಹಾವೇರಿ, ಗಜೇಂದ್ರಗಡ ಸೇರಿದಂತೆ ಹಲವು ಕಡೆ ಪ್ರಚಾರ ಮಾಡಿದ್ದೇನೆ. ಮಧ್ಯಾಹ್ನ ಉರಿಬಿಸಿಲಿನಲ್ಲೂ ಜನ ಸೇರಿದ್ದರು. ಇದನ್ನು ನೋಡಿದರೆ ನಮಗೆ ಉತ್ತಮ ಬೆಂಬಲ ಸಿಗುತ್ತಿದೆ. ಬಿಜೆಪಿಯಲ್ಲಿ ನನಗೆ ಅಪಮಾನ ಮಾಡಿದ್ದಕ್ಕೆ ಹೊರ ಬಂದಿದ್ದೇನೆ. ನಾನು ಕಟ್ಟಿದ ಮನೆಯಿಂದ ನನ್ನನ್ನು ಹೊರ ಹಾಕುವ ಕೆಲಸ ನಡೆಯಿತು ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

8 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

8 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

17 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

22 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

1 day ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 day ago