Advertisement
ಸುದ್ದಿಗಳು

ಲಿಂಗಾಯತ ಅಭ್ಯರ್ಥಿಯನ್ನೇ ಸಿಎಂ ಮಾಡುತ್ತಾ..? ಧೈರ್ಯ ಬಿಜೆಪಿಗಿದೆಯಾ?: ಜಗದೀಶ್ ಶೆಟ್ಟರ್

Share

ಮುಂದೆಯೂ ಲಿಂಗಾಯತ ಅಭ್ಯರ್ಥಿಯನ್ನೇ ಸಿಎಂ ಮಾಡುತ್ತೇವೆ ಎಂದು ಹೇಳುವ ಧೈರ್ಯ ಬಿಜೆಪಿಯವರಿಗೆ ಇದೆಯಾ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರಶ್ನೆ ಮಾಡಿದರು.

ಧಾರವಾಡದಲ್ಲಿ ಮಾತನಾಡಿದ ಅವರು, ಬಿಜೆಪಿ ಈಗ ಯಾರ ಕೈಯಲ್ಲಿ ಇದೆ ಎಂಬುದು ಎಲ್ಲರಿಗೂ ಗೊತ್ತಾಗುತ್ತಿದೆ. ಇದರಿಂದ ಉಳಿದ ಸಮಯದಾಯದವರು ನೊಂದಿದ್ದಾರೆ. ಇದಕ್ಕೆ ತಕ್ಕ ಪಾಠ ಬಿಜೆಪಿಗೆ ಚುನಾವಣೆಯಲ್ಲಿ ಸಿಗಲಿದೆ. ಲಿಂಗಾಯತ ಸಮುದಾಯ ಹೊರಗಿಟ್ಟು ಅದರ ಬೆಂಬಲ ಇಲ್ಲದೇ ಬಿಜೆಪಿಯವರು ಸರ್ಕಾರ ರಚನೆ ಮಾಡಲು ಹೊರಟಿದ್ದಾರೆ. ಅವಸರವೇ ಬಿಜೆಪಿಗೆ ಅಪಘಾತವನ್ನುಂಟು ಮಾಡಲಿದೆ ಎಂದರು.

ರಾಜ್ಯದಲ್ಲಿ 25 ಸಂಸದರಿದ್ದರೂ ಪ್ರಹ್ಲಾದ್ ಜೋಶಿ ಒಬ್ಬರನ್ನೇ ಕ್ಯಾಬಿನೆಟ್ ದರ್ಜೆಯ ಸಚಿವರನ್ನಾಗಿ ಮಾಡಲಾಗಿದೆ. ನಾರಾಯಣಸ್ವಾಮಿ ದಲಿತ ಜನಾಂಗದವರು ಅವರು ರಾಜ್ಯಮಂತ್ರಿಯಾಗಿದ್ದಾರೆ. ಶೋಭಾ ಕರಂದ್ಲಾಜೆ ಒಕ್ಕಲಿಗರು ಅವರು ಕೂಡ ರಾಜ್ಯಮಂತ್ರಿಯಾಗಿದ್ದಾರೆ. ಲಿಂಗಾಯತ ಸಮಾಜದ ಭಗವಂತ ಖೂಬಾ ಹಾಗೂ ಸುರೇಶ್ ಅಂಗಡಿ ಯವರನ್ನೂ ರಾಜ್ಯಮಂತ್ರಿಯನ್ನಾಗಿ ಮಾಡಲಾಗಿತ್ತು. ಇಲ್ಲೇ ತಾರತಮ್ಯ ಎದ್ದು ಕಾಣುತ್ತಿದೆ ಎಂದು ಹೇಳಿದರು.

ವಿನಯ್ ಕುಲಕರ್ಣಿ  ಅವರಿಗೆ ನೇರವಾಗಿ ಬಂದು ಪ್ರಚಾರ ಮಾಡಲು ಆಗುತ್ತಿಲ್ಲ. ಅವರ ಮೇಲೆ ದೊಡ್ಡ ಷಡ್ಯಂತ್ರವೇ ನಡೆದಿದೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಅವರ ಬೆಂಬಲಿಗರಿಗೆ ಪ್ರಚಾರ ಮಾಡುವ ಹಕ್ಕಿದೆ. ಆದರೆ ಅವರ ಬೆಂಬಲಿಗರ ಮೇಲೂ ಐಟಿ ದಾಳಿ ನಡೆಸಿ ಹೆದರಿಸುವ ತಂತ್ರ ನಡೆದಿದೆ. ಇದು ಬಹಳ ದಿನ ನಡೆಯುವುದಿಲ್ಲ. ಕೇಂದ್ರದಲ್ಲಿ ಅಧಿಕಾರ ಇದೆ ಎಂದು ಇಲ್ಲಿನ ಕೇಂದ್ರ ಸಚಿವರು ಈ ರೀತಿ ದಾಳಿ ಮಾಡಿಸುತ್ತಿದ್ದಾರೆ. ಇದನ್ನು ಮೆಟ್ಟಿ ನಿಲ್ಲುವ ಶಕ್ತಿ ನಮಗಿದೆ. ಇದೆಲ್ಲದಕ್ಕೂ ಮೇ.13 ರಂದು ಜನ ಉತ್ತರ ಕೊಡುತ್ತಾರೆ ಎಂದು ಶೆಟ್ಟರ್ ಹೇಳಿದರು.

ನಿನ್ನೆ ನಾನು ರೋಣ, ಹಾವೇರಿ, ಗಜೇಂದ್ರಗಡ ಸೇರಿದಂತೆ ಹಲವು ಕಡೆ ಪ್ರಚಾರ ಮಾಡಿದ್ದೇನೆ. ಮಧ್ಯಾಹ್ನ ಉರಿಬಿಸಿಲಿನಲ್ಲೂ ಜನ ಸೇರಿದ್ದರು. ಇದನ್ನು ನೋಡಿದರೆ ನಮಗೆ ಉತ್ತಮ ಬೆಂಬಲ ಸಿಗುತ್ತಿದೆ. ಬಿಜೆಪಿಯಲ್ಲಿ ನನಗೆ ಅಪಮಾನ ಮಾಡಿದ್ದಕ್ಕೆ ಹೊರ ಬಂದಿದ್ದೇನೆ. ನಾನು ಕಟ್ಟಿದ ಮನೆಯಿಂದ ನನ್ನನ್ನು ಹೊರ ಹಾಕುವ ಕೆಲಸ ನಡೆಯಿತು ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

4 minutes ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

13 minutes ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

28 minutes ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

11 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

11 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

11 hours ago