ಇನ್ನು ಮುಂದೆ ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ 3,500 ರೂ ಹಾಗೂ ಅದರಲ್ಲಿ 1,500 ಚಿಕಿತ್ಸೆ ವೆಚ್ಚಕ್ಕೆ ನೀಡಲಾಗುವುದು. ಇನ್ನು ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟವರಿಗೆ 5 ಲಕ್ಷ ರೂ ಪರಿಹಾರ ನೀಡಲಾಗುತ್ತದೆ ಎಂದು ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ.
ಬೀದಿ ನಾಯಿಗಳನ್ನು ಸಂತಾನಹರಣ ಮಾಡುವುದು ಮತ್ತು ಲಸಿಕೆ ಹಾಕುವುದನ್ನು ಬೆಂಬಲಿಸಬೇಕು. ಈ ರೀತಿ ಮಾಡಿದ ನಾಯಿಗಳನ್ನು ಅದರ ವಾಸಸ್ಥಾನಗಳಿಗೆ ಬಿಡಬೇಕು ಹೊರತು ಸಾರ್ವಜನಿಕ ಸ್ಥಳಗಳಲ್ಲಿ ಬಿಡಬಾರದು ಎಂಬ ನಿಯಮವನ್ನು ಸುಪ್ರಿಂ ಕೋರ್ಟ್ ಆದೇಶವನ್ನು ಜಾರಿಗೊಳಿಸಿದರೂ ಏನೂ ಪ್ರಯೋಜನಕಾರಿಯಾಗಿಲ್ಲ. ಬೀದಿ ನಾಯಿಗಳ ಕಾಟ ಇತ್ತೀಚಿಗೆ ಹೆಚ್ಚಾಗಿದ್ದು, ಅದೇಷ್ಟೋ ಮಕ್ಕಳ ಮೇಲೆಯೂ ದಾಳಿ ಮಾಡುತ್ತಿದೆ.
ಇದೀಗ, ರಾಜ್ಯ ಸರ್ಕಾರ ಹೊಸ ಆದೇಶವನ್ನು ಹೊರಡಿಸಿದೆ. ಅದೇನೆಂದರೆ ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ 3,500 ರೂ ಹಾಗೂ ಅದರಲ್ಲಿ 1,500 ಚಿಕಿತ್ಸೆ ವೆಚ್ಚಕ್ಕೆ ನೀಡಲಾಗುವುದು. ಇನ್ನು ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟವರಿಗೆ 5 ಲಕ್ಷ ರೂ ಪರಿಹಾರ ನೀಡಲಾಗುತ್ತದೆ ಎಂದು ಘೋಷಣೆ ಮಾಡಿದೆ. ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಡಿತಕ್ಕೆ ಒಳಗಾಗುವ ನಾಗರಿಕರಿಗೆ ಸಂಬಂಧಿಸಿದಂತೆ, ಪರಿಶೀಲನಾ ಮತ್ತು ಪರಿಹಾರಧನ ವಿತರಿಸುವ ಸಮಿತಿಯನ್ನು ರಚಿಸಲಾಗುತ್ತದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದೆ.




