ಇನ್ನು ಮುಂದೆ ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ 3,500 ರೂ ಹಾಗೂ ಅದರಲ್ಲಿ 1,500 ಚಿಕಿತ್ಸೆ ವೆಚ್ಚಕ್ಕೆ ನೀಡಲಾಗುವುದು. ಇನ್ನು ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟವರಿಗೆ 5 ಲಕ್ಷ ರೂ ಪರಿಹಾರ ನೀಡಲಾಗುತ್ತದೆ ಎಂದು ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ.
ಬೀದಿ ನಾಯಿಗಳನ್ನು ಸಂತಾನಹರಣ ಮಾಡುವುದು ಮತ್ತು ಲಸಿಕೆ ಹಾಕುವುದನ್ನು ಬೆಂಬಲಿಸಬೇಕು. ಈ ರೀತಿ ಮಾಡಿದ ನಾಯಿಗಳನ್ನು ಅದರ ವಾಸಸ್ಥಾನಗಳಿಗೆ ಬಿಡಬೇಕು ಹೊರತು ಸಾರ್ವಜನಿಕ ಸ್ಥಳಗಳಲ್ಲಿ ಬಿಡಬಾರದು ಎಂಬ ನಿಯಮವನ್ನು ಸುಪ್ರಿಂ ಕೋರ್ಟ್ ಆದೇಶವನ್ನು ಜಾರಿಗೊಳಿಸಿದರೂ ಏನೂ ಪ್ರಯೋಜನಕಾರಿಯಾಗಿಲ್ಲ. ಬೀದಿ ನಾಯಿಗಳ ಕಾಟ ಇತ್ತೀಚಿಗೆ ಹೆಚ್ಚಾಗಿದ್ದು, ಅದೇಷ್ಟೋ ಮಕ್ಕಳ ಮೇಲೆಯೂ ದಾಳಿ ಮಾಡುತ್ತಿದೆ.
ಇದೀಗ, ರಾಜ್ಯ ಸರ್ಕಾರ ಹೊಸ ಆದೇಶವನ್ನು ಹೊರಡಿಸಿದೆ. ಅದೇನೆಂದರೆ ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ 3,500 ರೂ ಹಾಗೂ ಅದರಲ್ಲಿ 1,500 ಚಿಕಿತ್ಸೆ ವೆಚ್ಚಕ್ಕೆ ನೀಡಲಾಗುವುದು. ಇನ್ನು ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟವರಿಗೆ 5 ಲಕ್ಷ ರೂ ಪರಿಹಾರ ನೀಡಲಾಗುತ್ತದೆ ಎಂದು ಘೋಷಣೆ ಮಾಡಿದೆ. ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಡಿತಕ್ಕೆ ಒಳಗಾಗುವ ನಾಗರಿಕರಿಗೆ ಸಂಬಂಧಿಸಿದಂತೆ, ಪರಿಶೀಲನಾ ಮತ್ತು ಪರಿಹಾರಧನ ವಿತರಿಸುವ ಸಮಿತಿಯನ್ನು ರಚಿಸಲಾಗುತ್ತದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…