ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಅವೈಜ್ಞಾನಿಕ ಕಾಮಗಾರಿ ಕಾರಣದಿಂದ ನಿರ್ಮಾಣವಾಗಿದ್ದ ಕೃತಕ ಕೆರೆಯ ಕಟ್ಟೆ ಗುರುವಾರ ಬೆಳಗ್ಗೆ ಒಡೆದಿದೆ. ಹೀಗಾಗಿ ಅಪಾರ ಪ್ರಮಾಣದ ಕೃಷಿ ಹಾನಿ ಸಂಭವಿಸಿದೆ. ರಸ್ತೆಯ ಅಂಚಿಗೆ ಸದ್ಯ ಯಾವುದೇ ಅಪಾಯವಿಲ್ಲದಿದ್ದರೂ ಇನ್ನಷ್ಟು ಮಣ್ಣು ಕುಸಿದರೆ ಅಪಾಯವಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಚತುಷ್ಫಥ ರಸ್ತೆ ಕಾಮಗಾರಿ ನಿರ್ಮಾಣದ ಸಂದರ್ಭ ಮಣ್ಣು ರಾಶಿ ಹಾಕಲಾಗಿತ್ತು. ಆದರೆ ಮೋರಿ ಅಳವಡಿಕೆ ಮಾಡದ ಕಾರಣ ಕೃತಕ ಕೆರೆ ನಿರ್ಮಾಣವಾಗಿತ್ತು. ಇದೀಗ ನೀರಿನ ಒತ್ತಡಕ್ಕೆ ಕೆರೆ ಕಟ್ಟೆ ಒಡೆದಿದೆ. ಕಾಫಿ, ಭತ್ತ, ಅಡಿಕೆ ಕೃಷಿಗೆ ಹಾನಿಯಾಗಿದೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…