ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಅವೈಜ್ಞಾನಿಕ ಕಾಮಗಾರಿ ಕಾರಣದಿಂದ ನಿರ್ಮಾಣವಾಗಿದ್ದ ಕೃತಕ ಕೆರೆಯ ಕಟ್ಟೆ ಗುರುವಾರ ಬೆಳಗ್ಗೆ ಒಡೆದಿದೆ. ಹೀಗಾಗಿ ಅಪಾರ ಪ್ರಮಾಣದ ಕೃಷಿ ಹಾನಿ ಸಂಭವಿಸಿದೆ. ರಸ್ತೆಯ ಅಂಚಿಗೆ ಸದ್ಯ ಯಾವುದೇ ಅಪಾಯವಿಲ್ಲದಿದ್ದರೂ ಇನ್ನಷ್ಟು ಮಣ್ಣು ಕುಸಿದರೆ ಅಪಾಯವಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಚತುಷ್ಫಥ ರಸ್ತೆ ಕಾಮಗಾರಿ ನಿರ್ಮಾಣದ ಸಂದರ್ಭ ಮಣ್ಣು ರಾಶಿ ಹಾಕಲಾಗಿತ್ತು. ಆದರೆ ಮೋರಿ ಅಳವಡಿಕೆ ಮಾಡದ ಕಾರಣ ಕೃತಕ ಕೆರೆ ನಿರ್ಮಾಣವಾಗಿತ್ತು. ಇದೀಗ ನೀರಿನ ಒತ್ತಡಕ್ಕೆ ಕೆರೆ ಕಟ್ಟೆ ಒಡೆದಿದೆ. ಕಾಫಿ, ಭತ್ತ, ಅಡಿಕೆ ಕೃಷಿಗೆ ಹಾನಿಯಾಗಿದೆ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…