ಭಿಕ್ಷೆ ಬೇಡಿ ಉಳಿದ ಒಂದು ಲಕ್ಷ ರೂ. ಬಪ್ಪನಾಡು ದೇವಸ್ಥಾನಕ್ಕೆ ದೇಣಿಗೆ ನೀಡಿದ ವೃದ್ಧೆ

October 19, 2022
5:00 PM

ದೇವಸ್ಥಾನದ ಸುತ್ತಮುತ್ತ ಪ್ರದೇಶಗಳಲ್ಲಿ ಭಿಕ್ಷೆ ಬೇಡಿ ಉಳಿದ ಒಂದು ಲಕ್ಷ ರೂಪಾಯಿ ಹಣವನ್ನು ವೃದ್ಧೆಯೊಬ್ಬರು ಬಪ್ಪನಾಡು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿ ಮಾದರಿಯಾಗಿದ್ದಾರೆ.

Advertisement
Advertisement

80 ಹರೆಯದ ವೃದ್ಧೆ ಇಲ್ಲಿ ತನಕ ಭಿಕ್ಷೆ ಬೇಡಿ ಬಂದಿರುವ ಹಣದಲ್ಲಿ ವಿವಿಧ ದೇವಸ್ಥಾನಗಳಿಗೆ ಸುಮಾರು 9 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ 80ರ ವೃದ್ಧೆ ಅಶ್ವತ್ಥಮ್ಮ ಈ ಮಾದರಿ ಕೆಲಸ ಮಾಡಿದವರು.

ಸೋಮವಾರ ಮಂಗಳೂರಿನ ಹೊರವಲಯದ ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಆಗಮಿಸಿ ದೇವಸ್ಥಾನದ ಅನ್ನದಾನಕ್ಕೆ 1 ಲಕ್ಷ ರೂಪಾಯಿ ದೇಣಿಗೆಯಾಗಿ ನೀಡಿದ್ದಾರೆ. ದೇಣಿಗೆ ಸ್ವೀಕರಿಸಿದ ಬಳಿಕ ದೇವಳದ ಅರ್ಚಕ ನರಸಿಂಹ ಭಟ್‌ ಅವರು ಅಶ್ವತ್ಥಮ್ಮ ಅವರಿಗೆ ಪ್ರಸಾದ ನೀಡಿ ಹರಸಿದರು.

ಆಡಳಿತ ಮೊಕ್ತೇಸರರಾದ ಮನೋಹರ್‌ ಶೆಟ್ಟಿ ದೇವಳದ ವತಿಯಿಂದ ಗೌರವಿಸಿದರು. ಅರ್ಚಕ ಪ್ರಸಾದ್‌ ಭಟ್‌, ಅಕೌಂಟೆಂಟ್‌ ಶಿವಶಂಕರ್‌ ವರ್ಮ, ಕಾರ್ತಿಕ್‌ ಕೋಟ್ಯಾನ್‌ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!
June 8, 2025
7:25 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ
June 7, 2025
1:48 PM
by: ಸಾಯಿಶೇಖರ್ ಕರಿಕಳ
ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!
June 7, 2025
6:58 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group