ಭಿಕ್ಷೆ ಬೇಡಿ ಉಳಿದ ಒಂದು ಲಕ್ಷ ರೂ. ಬಪ್ಪನಾಡು ದೇವಸ್ಥಾನಕ್ಕೆ ದೇಣಿಗೆ ನೀಡಿದ ವೃದ್ಧೆ

October 19, 2022
5:00 PM

ದೇವಸ್ಥಾನದ ಸುತ್ತಮುತ್ತ ಪ್ರದೇಶಗಳಲ್ಲಿ ಭಿಕ್ಷೆ ಬೇಡಿ ಉಳಿದ ಒಂದು ಲಕ್ಷ ರೂಪಾಯಿ ಹಣವನ್ನು ವೃದ್ಧೆಯೊಬ್ಬರು ಬಪ್ಪನಾಡು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿ ಮಾದರಿಯಾಗಿದ್ದಾರೆ.

80 ಹರೆಯದ ವೃದ್ಧೆ ಇಲ್ಲಿ ತನಕ ಭಿಕ್ಷೆ ಬೇಡಿ ಬಂದಿರುವ ಹಣದಲ್ಲಿ ವಿವಿಧ ದೇವಸ್ಥಾನಗಳಿಗೆ ಸುಮಾರು 9 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ 80ರ ವೃದ್ಧೆ ಅಶ್ವತ್ಥಮ್ಮ ಈ ಮಾದರಿ ಕೆಲಸ ಮಾಡಿದವರು.

ಸೋಮವಾರ ಮಂಗಳೂರಿನ ಹೊರವಲಯದ ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಆಗಮಿಸಿ ದೇವಸ್ಥಾನದ ಅನ್ನದಾನಕ್ಕೆ 1 ಲಕ್ಷ ರೂಪಾಯಿ ದೇಣಿಗೆಯಾಗಿ ನೀಡಿದ್ದಾರೆ. ದೇಣಿಗೆ ಸ್ವೀಕರಿಸಿದ ಬಳಿಕ ದೇವಳದ ಅರ್ಚಕ ನರಸಿಂಹ ಭಟ್‌ ಅವರು ಅಶ್ವತ್ಥಮ್ಮ ಅವರಿಗೆ ಪ್ರಸಾದ ನೀಡಿ ಹರಸಿದರು.

ಆಡಳಿತ ಮೊಕ್ತೇಸರರಾದ ಮನೋಹರ್‌ ಶೆಟ್ಟಿ ದೇವಳದ ವತಿಯಿಂದ ಗೌರವಿಸಿದರು. ಅರ್ಚಕ ಪ್ರಸಾದ್‌ ಭಟ್‌, ಅಕೌಂಟೆಂಟ್‌ ಶಿವಶಂಕರ್‌ ವರ್ಮ, ಕಾರ್ತಿಕ್‌ ಕೋಟ್ಯಾನ್‌ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror