ದೇವಸ್ಥಾನದ ಸುತ್ತಮುತ್ತ ಪ್ರದೇಶಗಳಲ್ಲಿ ಭಿಕ್ಷೆ ಬೇಡಿ ಉಳಿದ ಒಂದು ಲಕ್ಷ ರೂಪಾಯಿ ಹಣವನ್ನು ವೃದ್ಧೆಯೊಬ್ಬರು ಬಪ್ಪನಾಡು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿ ಮಾದರಿಯಾಗಿದ್ದಾರೆ.
80 ಹರೆಯದ ವೃದ್ಧೆ ಇಲ್ಲಿ ತನಕ ಭಿಕ್ಷೆ ಬೇಡಿ ಬಂದಿರುವ ಹಣದಲ್ಲಿ ವಿವಿಧ ದೇವಸ್ಥಾನಗಳಿಗೆ ಸುಮಾರು 9 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ 80ರ ವೃದ್ಧೆ ಅಶ್ವತ್ಥಮ್ಮ ಈ ಮಾದರಿ ಕೆಲಸ ಮಾಡಿದವರು.
ಸೋಮವಾರ ಮಂಗಳೂರಿನ ಹೊರವಲಯದ ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಆಗಮಿಸಿ ದೇವಸ್ಥಾನದ ಅನ್ನದಾನಕ್ಕೆ 1 ಲಕ್ಷ ರೂಪಾಯಿ ದೇಣಿಗೆಯಾಗಿ ನೀಡಿದ್ದಾರೆ. ದೇಣಿಗೆ ಸ್ವೀಕರಿಸಿದ ಬಳಿಕ ದೇವಳದ ಅರ್ಚಕ ನರಸಿಂಹ ಭಟ್ ಅವರು ಅಶ್ವತ್ಥಮ್ಮ ಅವರಿಗೆ ಪ್ರಸಾದ ನೀಡಿ ಹರಸಿದರು.
ಆಡಳಿತ ಮೊಕ್ತೇಸರರಾದ ಮನೋಹರ್ ಶೆಟ್ಟಿ ದೇವಳದ ವತಿಯಿಂದ ಗೌರವಿಸಿದರು. ಅರ್ಚಕ ಪ್ರಸಾದ್ ಭಟ್, ಅಕೌಂಟೆಂಟ್ ಶಿವಶಂಕರ್ ವರ್ಮ, ಕಾರ್ತಿಕ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…