ದೇವಸ್ಥಾನದ ಸುತ್ತಮುತ್ತ ಪ್ರದೇಶಗಳಲ್ಲಿ ಭಿಕ್ಷೆ ಬೇಡಿ ಉಳಿದ ಒಂದು ಲಕ್ಷ ರೂಪಾಯಿ ಹಣವನ್ನು ವೃದ್ಧೆಯೊಬ್ಬರು ಬಪ್ಪನಾಡು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿ ಮಾದರಿಯಾಗಿದ್ದಾರೆ.
80 ಹರೆಯದ ವೃದ್ಧೆ ಇಲ್ಲಿ ತನಕ ಭಿಕ್ಷೆ ಬೇಡಿ ಬಂದಿರುವ ಹಣದಲ್ಲಿ ವಿವಿಧ ದೇವಸ್ಥಾನಗಳಿಗೆ ಸುಮಾರು 9 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ 80ರ ವೃದ್ಧೆ ಅಶ್ವತ್ಥಮ್ಮ ಈ ಮಾದರಿ ಕೆಲಸ ಮಾಡಿದವರು.
ಸೋಮವಾರ ಮಂಗಳೂರಿನ ಹೊರವಲಯದ ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಆಗಮಿಸಿ ದೇವಸ್ಥಾನದ ಅನ್ನದಾನಕ್ಕೆ 1 ಲಕ್ಷ ರೂಪಾಯಿ ದೇಣಿಗೆಯಾಗಿ ನೀಡಿದ್ದಾರೆ. ದೇಣಿಗೆ ಸ್ವೀಕರಿಸಿದ ಬಳಿಕ ದೇವಳದ ಅರ್ಚಕ ನರಸಿಂಹ ಭಟ್ ಅವರು ಅಶ್ವತ್ಥಮ್ಮ ಅವರಿಗೆ ಪ್ರಸಾದ ನೀಡಿ ಹರಸಿದರು.
ಆಡಳಿತ ಮೊಕ್ತೇಸರರಾದ ಮನೋಹರ್ ಶೆಟ್ಟಿ ದೇವಳದ ವತಿಯಿಂದ ಗೌರವಿಸಿದರು. ಅರ್ಚಕ ಪ್ರಸಾದ್ ಭಟ್, ಅಕೌಂಟೆಂಟ್ ಶಿವಶಂಕರ್ ವರ್ಮ, ಕಾರ್ತಿಕ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
ಶಿವಮೊಗ್ಗ ಜಿಲ್ಲೆಯ ಸುಜನಾ ಸ್ತ್ರೀಶಕ್ತಿ ಸ್ವಸಹಾಯ ಸಂಘ ಕಳೆದ 23 ವರ್ಷಗಳಿಂದ ಎಳ್ಳು–ಬೆಲ್ಲ…
ನಕಲಿ ಹಾಗೂ ಕಳಪೆ ಬೀಜಗಳ ಮಾರಾಟ ತಡೆಗೆ ನೂತನ ಬೀಜ ಕಾಯ್ದೆ–2026ನ್ನು ಬಜೆಟ್…
ಉತ್ತರ ಕನ್ನಡದ ದಾಂಡೇಲಿಯಲ್ಲಿ ಹಾರ್ನ್ಬಿಲ್ ಹಬ್ಬಕ್ಕೆ ಚಾಲನೆ ನೀಡಲಾಗಿದ್ದು, ಶಾಲಾ ಮಕ್ಕಳು ಹಾಗೂ…
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಕಾಮಗಾರಿಯನ್ನು ಸಚಿವ ಕೃಷ್ಣಭೈರೇಗೌಡ…
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ಒತ್ತಾಯಿಸಿ ಸಂಯುಕ್ತ…