ದೇವಸ್ಥಾನದ ಸುತ್ತಮುತ್ತ ಪ್ರದೇಶಗಳಲ್ಲಿ ಭಿಕ್ಷೆ ಬೇಡಿ ಉಳಿದ ಒಂದು ಲಕ್ಷ ರೂಪಾಯಿ ಹಣವನ್ನು ವೃದ್ಧೆಯೊಬ್ಬರು ಬಪ್ಪನಾಡು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿ ಮಾದರಿಯಾಗಿದ್ದಾರೆ.
80 ಹರೆಯದ ವೃದ್ಧೆ ಇಲ್ಲಿ ತನಕ ಭಿಕ್ಷೆ ಬೇಡಿ ಬಂದಿರುವ ಹಣದಲ್ಲಿ ವಿವಿಧ ದೇವಸ್ಥಾನಗಳಿಗೆ ಸುಮಾರು 9 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ 80ರ ವೃದ್ಧೆ ಅಶ್ವತ್ಥಮ್ಮ ಈ ಮಾದರಿ ಕೆಲಸ ಮಾಡಿದವರು.
ಸೋಮವಾರ ಮಂಗಳೂರಿನ ಹೊರವಲಯದ ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಆಗಮಿಸಿ ದೇವಸ್ಥಾನದ ಅನ್ನದಾನಕ್ಕೆ 1 ಲಕ್ಷ ರೂಪಾಯಿ ದೇಣಿಗೆಯಾಗಿ ನೀಡಿದ್ದಾರೆ. ದೇಣಿಗೆ ಸ್ವೀಕರಿಸಿದ ಬಳಿಕ ದೇವಳದ ಅರ್ಚಕ ನರಸಿಂಹ ಭಟ್ ಅವರು ಅಶ್ವತ್ಥಮ್ಮ ಅವರಿಗೆ ಪ್ರಸಾದ ನೀಡಿ ಹರಸಿದರು.
ಆಡಳಿತ ಮೊಕ್ತೇಸರರಾದ ಮನೋಹರ್ ಶೆಟ್ಟಿ ದೇವಳದ ವತಿಯಿಂದ ಗೌರವಿಸಿದರು. ಅರ್ಚಕ ಪ್ರಸಾದ್ ಭಟ್, ಅಕೌಂಟೆಂಟ್ ಶಿವಶಂಕರ್ ವರ್ಮ, ಕಾರ್ತಿಕ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…