ಸುದ್ದಿಗಳು

ಭಿಕ್ಷೆ ಬೇಡಿ ಉಳಿದ ಒಂದು ಲಕ್ಷ ರೂ. ಬಪ್ಪನಾಡು ದೇವಸ್ಥಾನಕ್ಕೆ ದೇಣಿಗೆ ನೀಡಿದ ವೃದ್ಧೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇವಸ್ಥಾನದ ಸುತ್ತಮುತ್ತ ಪ್ರದೇಶಗಳಲ್ಲಿ ಭಿಕ್ಷೆ ಬೇಡಿ ಉಳಿದ ಒಂದು ಲಕ್ಷ ರೂಪಾಯಿ ಹಣವನ್ನು ವೃದ್ಧೆಯೊಬ್ಬರು ಬಪ್ಪನಾಡು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿ ಮಾದರಿಯಾಗಿದ್ದಾರೆ.

Advertisement
Advertisement

80 ಹರೆಯದ ವೃದ್ಧೆ ಇಲ್ಲಿ ತನಕ ಭಿಕ್ಷೆ ಬೇಡಿ ಬಂದಿರುವ ಹಣದಲ್ಲಿ ವಿವಿಧ ದೇವಸ್ಥಾನಗಳಿಗೆ ಸುಮಾರು 9 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ 80ರ ವೃದ್ಧೆ ಅಶ್ವತ್ಥಮ್ಮ ಈ ಮಾದರಿ ಕೆಲಸ ಮಾಡಿದವರು.

ಸೋಮವಾರ ಮಂಗಳೂರಿನ ಹೊರವಲಯದ ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಆಗಮಿಸಿ ದೇವಸ್ಥಾನದ ಅನ್ನದಾನಕ್ಕೆ 1 ಲಕ್ಷ ರೂಪಾಯಿ ದೇಣಿಗೆಯಾಗಿ ನೀಡಿದ್ದಾರೆ. ದೇಣಿಗೆ ಸ್ವೀಕರಿಸಿದ ಬಳಿಕ ದೇವಳದ ಅರ್ಚಕ ನರಸಿಂಹ ಭಟ್‌ ಅವರು ಅಶ್ವತ್ಥಮ್ಮ ಅವರಿಗೆ ಪ್ರಸಾದ ನೀಡಿ ಹರಸಿದರು.

ಆಡಳಿತ ಮೊಕ್ತೇಸರರಾದ ಮನೋಹರ್‌ ಶೆಟ್ಟಿ ದೇವಳದ ವತಿಯಿಂದ ಗೌರವಿಸಿದರು. ಅರ್ಚಕ ಪ್ರಸಾದ್‌ ಭಟ್‌, ಅಕೌಂಟೆಂಟ್‌ ಶಿವಶಂಕರ್‌ ವರ್ಮ, ಕಾರ್ತಿಕ್‌ ಕೋಟ್ಯಾನ್‌ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…

10 hours ago

ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490  

13 hours ago

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

1 day ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

1 day ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

1 day ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

1 day ago