ದೇವಸ್ಥಾನದ ಸುತ್ತಮುತ್ತ ಪ್ರದೇಶಗಳಲ್ಲಿ ಭಿಕ್ಷೆ ಬೇಡಿ ಉಳಿದ ಒಂದು ಲಕ್ಷ ರೂಪಾಯಿ ಹಣವನ್ನು ವೃದ್ಧೆಯೊಬ್ಬರು ಬಪ್ಪನಾಡು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿ ಮಾದರಿಯಾಗಿದ್ದಾರೆ.
80 ಹರೆಯದ ವೃದ್ಧೆ ಇಲ್ಲಿ ತನಕ ಭಿಕ್ಷೆ ಬೇಡಿ ಬಂದಿರುವ ಹಣದಲ್ಲಿ ವಿವಿಧ ದೇವಸ್ಥಾನಗಳಿಗೆ ಸುಮಾರು 9 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ 80ರ ವೃದ್ಧೆ ಅಶ್ವತ್ಥಮ್ಮ ಈ ಮಾದರಿ ಕೆಲಸ ಮಾಡಿದವರು.
ಸೋಮವಾರ ಮಂಗಳೂರಿನ ಹೊರವಲಯದ ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಆಗಮಿಸಿ ದೇವಸ್ಥಾನದ ಅನ್ನದಾನಕ್ಕೆ 1 ಲಕ್ಷ ರೂಪಾಯಿ ದೇಣಿಗೆಯಾಗಿ ನೀಡಿದ್ದಾರೆ. ದೇಣಿಗೆ ಸ್ವೀಕರಿಸಿದ ಬಳಿಕ ದೇವಳದ ಅರ್ಚಕ ನರಸಿಂಹ ಭಟ್ ಅವರು ಅಶ್ವತ್ಥಮ್ಮ ಅವರಿಗೆ ಪ್ರಸಾದ ನೀಡಿ ಹರಸಿದರು.
ಆಡಳಿತ ಮೊಕ್ತೇಸರರಾದ ಮನೋಹರ್ ಶೆಟ್ಟಿ ದೇವಳದ ವತಿಯಿಂದ ಗೌರವಿಸಿದರು. ಅರ್ಚಕ ಪ್ರಸಾದ್ ಭಟ್, ಅಕೌಂಟೆಂಟ್ ಶಿವಶಂಕರ್ ವರ್ಮ, ಕಾರ್ತಿಕ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…