ದೇವಸ್ಥಾನದ ಸುತ್ತಮುತ್ತ ಪ್ರದೇಶಗಳಲ್ಲಿ ಭಿಕ್ಷೆ ಬೇಡಿ ಉಳಿದ ಒಂದು ಲಕ್ಷ ರೂಪಾಯಿ ಹಣವನ್ನು ವೃದ್ಧೆಯೊಬ್ಬರು ಬಪ್ಪನಾಡು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿ ಮಾದರಿಯಾಗಿದ್ದಾರೆ.
80 ಹರೆಯದ ವೃದ್ಧೆ ಇಲ್ಲಿ ತನಕ ಭಿಕ್ಷೆ ಬೇಡಿ ಬಂದಿರುವ ಹಣದಲ್ಲಿ ವಿವಿಧ ದೇವಸ್ಥಾನಗಳಿಗೆ ಸುಮಾರು 9 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ 80ರ ವೃದ್ಧೆ ಅಶ್ವತ್ಥಮ್ಮ ಈ ಮಾದರಿ ಕೆಲಸ ಮಾಡಿದವರು.
ಸೋಮವಾರ ಮಂಗಳೂರಿನ ಹೊರವಲಯದ ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಆಗಮಿಸಿ ದೇವಸ್ಥಾನದ ಅನ್ನದಾನಕ್ಕೆ 1 ಲಕ್ಷ ರೂಪಾಯಿ ದೇಣಿಗೆಯಾಗಿ ನೀಡಿದ್ದಾರೆ. ದೇಣಿಗೆ ಸ್ವೀಕರಿಸಿದ ಬಳಿಕ ದೇವಳದ ಅರ್ಚಕ ನರಸಿಂಹ ಭಟ್ ಅವರು ಅಶ್ವತ್ಥಮ್ಮ ಅವರಿಗೆ ಪ್ರಸಾದ ನೀಡಿ ಹರಸಿದರು.
ಆಡಳಿತ ಮೊಕ್ತೇಸರರಾದ ಮನೋಹರ್ ಶೆಟ್ಟಿ ದೇವಳದ ವತಿಯಿಂದ ಗೌರವಿಸಿದರು. ಅರ್ಚಕ ಪ್ರಸಾದ್ ಭಟ್, ಅಕೌಂಟೆಂಟ್ ಶಿವಶಂಕರ್ ವರ್ಮ, ಕಾರ್ತಿಕ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…