ದೇವಸ್ಥಾನದ ಸುತ್ತಮುತ್ತ ಪ್ರದೇಶಗಳಲ್ಲಿ ಭಿಕ್ಷೆ ಬೇಡಿ ಉಳಿದ ಒಂದು ಲಕ್ಷ ರೂಪಾಯಿ ಹಣವನ್ನು ವೃದ್ಧೆಯೊಬ್ಬರು ಬಪ್ಪನಾಡು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿ ಮಾದರಿಯಾಗಿದ್ದಾರೆ.
80 ಹರೆಯದ ವೃದ್ಧೆ ಇಲ್ಲಿ ತನಕ ಭಿಕ್ಷೆ ಬೇಡಿ ಬಂದಿರುವ ಹಣದಲ್ಲಿ ವಿವಿಧ ದೇವಸ್ಥಾನಗಳಿಗೆ ಸುಮಾರು 9 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ 80ರ ವೃದ್ಧೆ ಅಶ್ವತ್ಥಮ್ಮ ಈ ಮಾದರಿ ಕೆಲಸ ಮಾಡಿದವರು.
ಸೋಮವಾರ ಮಂಗಳೂರಿನ ಹೊರವಲಯದ ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಆಗಮಿಸಿ ದೇವಸ್ಥಾನದ ಅನ್ನದಾನಕ್ಕೆ 1 ಲಕ್ಷ ರೂಪಾಯಿ ದೇಣಿಗೆಯಾಗಿ ನೀಡಿದ್ದಾರೆ. ದೇಣಿಗೆ ಸ್ವೀಕರಿಸಿದ ಬಳಿಕ ದೇವಳದ ಅರ್ಚಕ ನರಸಿಂಹ ಭಟ್ ಅವರು ಅಶ್ವತ್ಥಮ್ಮ ಅವರಿಗೆ ಪ್ರಸಾದ ನೀಡಿ ಹರಸಿದರು.
ಆಡಳಿತ ಮೊಕ್ತೇಸರರಾದ ಮನೋಹರ್ ಶೆಟ್ಟಿ ದೇವಳದ ವತಿಯಿಂದ ಗೌರವಿಸಿದರು. ಅರ್ಚಕ ಪ್ರಸಾದ್ ಭಟ್, ಅಕೌಂಟೆಂಟ್ ಶಿವಶಂಕರ್ ವರ್ಮ, ಕಾರ್ತಿಕ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…