Advertisement
ಸುದ್ದಿಗಳು

ಎಲ್ಲೇ ಇದ್ದರೂ ಸ್ವಭಾಷೆ, ಸಂಸ್ಕೃತಿ ಮರೆಯಬೇಡಿ : ರಾಘವೇಶ್ವರ ಶ್ರೀ

Share

ಜಗತ್ತಿನ ಯಾವುದೇ ಕಡೆಗಳಲ್ಲಿ ನೆಲೆಸಿದರೂ ನಮ್ಮ ಭಾಷೆ- ಸಂಸ್ಕೃತಿ, ಸಂಸ್ಕಾರಗಳನ್ನು ಮರೆಯಬಾರದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀಮಹಾಸ್ವಾಮೀಜಿ ಹೇಳಿದರು.

ಅಶೋಕೆಯಲ್ಲಿ ಸ್ವಭಾಷಾ ಚಾತುಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 42ನೇ ದಿನವಾದ ಬುಧವಾರ ಬ್ರಿಟನ್ (ಯುಕೆ) ವಲಯದ ಶಿಷ್ಯರಿಂದ ಭಿಕ್ಷಾಸೇವೆ ಸ್ವೀಕರಿಸಿ ಆಶೀರ್ವಚನ ಅನುಗ್ರಹಿಸಿದರು.  ಹವ್ಯಕ ಸಮುದಾಯಕ್ಕೆ ವಿಶಿಷ್ಟ ಪರಂಪರೆ ಇದೆ. ಅದನ್ನು ಉಳಿಸಿ ಬೆಳೆಸುವ ಮೂಲಕ ಮುಂದಿನ ಪೀಳಿಗೆಗೆ ಉಳಿಸಿಕೊಂಡು ಹೋಗುವ ಹೊಣೆ ನಮ್ಮೆಲ್ಲರದು ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…

ಎಲ್ಲೇ ಇದ್ದರೂ ಸ್ವಧರ್ಮದ ಆಚರಣೆ, ಸ್ವಭಾಷೆಯೇ ಶ್ರೇಷ್ಠ. ವ್ಯವಹಾರಕ್ಕೆ ಯಾವುದೇ ಭಾಷೆಗಳನ್ನು ಅನಿವಾರ್ಯವಾಗಿ ಬಳಸಿದರೂ ನಮ್ಮ ಮನೆಯಲ್ಲಿ ಮಾತೃಭಾಷೆಯನ್ನೇ ಬಳಸುವುದನ್ನು ಮರೆಯಬಾರದು. ಭಾಷೆ ಕೇವಲ ಸಂವಹನ ಮಾಧ್ಯಮವಲ್ಲ; ಅದು ನಮ್ಮ ಸಂಸ್ಕೃತಿ- ಪರಂಪರೆಯ ವಾಹಕವೂ ಹೌದು. ಭಾಷೆ ಅಳಿದರೆ ಅದು ಪ್ರತಿನಿಧಿಸುವ ಸಂಸ್ಕೃತಿಯೇ ನಾಶವಾಗುತ್ತದೆ ಎಂದು ಎಚ್ಚರಿಸಿದರು.

ವಿಶ್ವದ ಅತ್ಯಂತ ಪ್ರಾಚೀನ ಭಾಷೆಗಳಲ್ಲೊಂದಾದ ಕನ್ನಡದಲ್ಲಿ ಇಂದು ಬಹಳಷ್ಟು ಅಂಗ್ಲ ಹಾಗೂ ಇತರ ಭಾಷೆಯ ಶಬ್ದಗಳು ತುಂಬಿದ್ದು, ಮರೆತು ಹೋಗಿರುವ ಕನ್ನಡ ಪದಗಳನ್ನು ಮತ್ತೆ ಆಚರಣೆ ತರುವ ಮೂಲಕ ಮುಂದಿನ ಪೀಳಿಗೆಗೆ ಶುದ್ಧ ಭಾಷೆಯನ್ನು ಉಳಿಸಿಹೋಗೋಣ ಎಂದರು.

ಕೇರಳ ಬಿಜೆಪಿ ಉತ್ತರ ವಲಯ ಅಧ್ಯಕ್ಷ ಮತ್ತು ಹಿರಿಯ ವಕೀಲ ಶ್ರೀಕಾಂತ್, ಪ್ರಧಾನ ಕಾರ್ಯದರ್ಶಿ ಸುಧಾನ ಗೋಸಾಡ, ಪಕ್ಷದ ಮುಖಂಡರಾದ ವಿಜಯ ಕುಮಾರ್ ರೈ, ಮಂಜೇಶ್ವರ ಮಂಡಲ ಸಮಿತಿ ಸದಸ್ಯ ಸುಬ್ರಹ್ಮಣ್ಯ ಭಟ್ ನಾಯರ್‌ಪಳ್ಳ ಅವರು ಶ್ರೀಗಳಿಂದ ಆಶೀರ್ವಾದ ಪಡೆದರು. ವಿವಿವಿ ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಚಾತುರ್ಮಾಸ್ಯ ತಂಡದ ಅರವಿಂದ ಧರ್ಬೆ, ನಿಖಿಲ್, ಪಿಆರ್‍ಓ ಎಂ.ಎನ್.ಮಹೇಶ ಭಟ್ಟ, ಎಂಜಿನಿಯರ್ ವಿಷ್ಣು ಬನಾರಿ, ಸುಚೇತನ ಶಾಸ್ತ್ರಿ ಮತ್ತಿತರರು ಉಪಸ್ಥಿತರಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

6 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

16 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

17 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

17 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

23 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago