Advertisement
MIRROR FOCUS

ವ್ಯಾಪ್ತಿ ಮೀರಿ ಕಬ್ಬು ಕಟಾವು ಮಾಡಬಾರದು | ಮಂಡ್ಯ ರೈತರಿಗೆ ಜಿಲ್ಲಾಧಿಕಾರಿ ಎಚ್ಚರಿಕೆ

Share

ಮಂಡ್ಯ(Mandya) ಜಿಲ್ಲೆಯಲ್ಲಿರುವ ಎಲ್ಲಾ ಸಕ್ಕರೆ ಕಾರ್ಖಾನೆಗಳು(Sugarcane Industry) ಮ್ಯಾಪಿಂಗ್ ಆಗಿರುವ ಪ್ರದೇಶವನ್ನು ಹೊರತುಪಡಿಸಿ ಬೇರೆ ಪ್ರದೇಶದ ಕಬ್ಬನ್ನು ಕಟಾವು(Sugar cane crop) ಮಾಡಬಾರದು. ಈ ಕುರಿತಂತೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಇದೇ ಮರುಕಳಿಸಿದರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಜಿಲ್ಲಾಧಿಕಾರಿ(DC) ಡಾ ಕುಮಾರ ಅವರು ಎಚ್ಚರಿಕೆ  ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಂಡ್ಯ ಜಿಲ್ಲೆಯ 2024 ನೇ ಸಾಲಿನ ಸಕ್ಕರೆ ಕಾರ್ಖಾನೆಗಳ ಪ್ರಗತಿ ಪರಿಶೀಲನೆ ಹಾಗೂ ಇತರೆ ವಿಷಯಗಳ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 2024 – 25 ನೇ ಸಾಲಿನ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲೆಯಲ್ಲಿರುವ 5 ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ಅರೆಯುವ ಪ್ರಕ್ರಿಯೆ ನಡೆಯುತ್ತಿದೆ. ಕಾರ್ಖಾನೆಗಳು ತಮ್ಮ ವ್ಯಾಪ್ತಿ ಮೀರಿ ಕಬ್ಬನ್ನು ಖರೀದಿ ಮಾಡುತ್ತಿರುವ ಬಗ್ಗೆ ಸಾಕಷ್ಟು ದೂರು ಕೇಳಿ ಬರುತ್ತಿವೆ ಎಂದರು.

ಜಿಲ್ಲೆಯ 5 ಸಕ್ಕರೆ ಕಾರ್ಖಾನೆಗಳು ಒಗ್ಗೂಡಿ ಸಾಮರಸ್ಯದಿಂದ ಕಾರ್ಯ ನಿರ್ವಹಿಸಿ. ಜೊತೆಗೆ ರೈತರಿಗೆ ಸಕಾಲದಲ್ಲಿ ಎಫ್‌ಆರ್‌ಪಿ ಪ್ರಕಾರವೇ 14 ದಿನದೊಳಗಾಗಿ ಕಬ್ಬು ಖರೀದಿ ವೆಚ್ಚವನ್ನು ಪಾವತಿಸಿ ಎಂದರು. ಮಂಡ್ಯ ಜಿಲ್ಲೆಗೆ ಹೊರ ಜಿಲ್ಲೆಯಿಂದ ಕಬ್ಬು ಕಟಾವು ಮಾಡಲು ಬರುವ ಕೂಲಿ ಕಾರ್ಮಿಕರಿಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಕಾರ್ಖಾನೆಯ ಮಾಲೀಕರ ಕರ್ತವ್ಯವಾಗಿದ್ದು, ಅವರಿಗೆ ಮೂಲಭೂತ ವ್ಯವಸ್ಥೆ ಕಲ್ಪಿಸಿ ಎಂದರು. ಮೈಶುಗರ್ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಡಾ: ಹೆಚ್ ಎಲ್ ನಾಗರಾಜು ಅವರು ಮಾತನಾಡಿ ಮೈಶುಗರ್ ಸಕ್ಕರೆ ಕಾರ್ಖಾನೆ ಸರ್ಕಾರಿ ಸೌಮ್ಯದ ಕಾರ್ಖಾನೆಯಾಗಿದ್ದು, ಸೇವಾ ವಲಯದಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ.

ಸೆಪ್ಟೆಂಬರ್ ಅಂತ್ಯದೊಳಗೆ 2.50 ಲಕ್ಷ ಟನ್ ಕಬ್ಬು ಅರೆಯುವ ಗುರಿ ಹೊಂದಲಾಗಿದೆ. ಈ ಕಬ್ಬು ಅರಿದ ನಂತರ ಉಳಿದರೆ ಮೈಶುಗರ್ ವ್ಯಾಪ್ತಿಯ ಕಬ್ಬನ್ನು ಬೇರೆ ಆಸಕ್ತ ಕಬ್ಬು ಕಾರ್ಖಾನೆಗೆ ನೀಡಲಾಗುವುದು ಎಂದರು. ಇದಕ್ಕೆ ಪ್ರತಿಕ್ರಯಿಸಿದ ಜಿಲ್ಲಾಧಿಕಾರಿಗಳು ಐ.ಸಿ.ಎಲ್, ಚಾಮ್ ಶುಗರ್ ಸೇರಿದಂತೆ ಬೇರೆ ಕಾರ್ಖಾನೆಯ ಕಬ್ಬು ಜಟಾವು ಕಾರ್ಮಿಕರು ಒಟ್ಟು 100 ಬ್ಯಾಚನ್ನು 15 ದಿನಗಳ ಕಾಲ ಮೈಶುಗರ್ ಕಬ್ಬು ಕಟಾವಿಗೆ ನಿಯೋಜಿಸಿಕೊಡುವಂತೆ ತಿಳಿಸಿದರು.

ಸಭೆಯಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್  ಸರಬರಾಜು ನಿಗಮ ನಿಯಮಿತ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣದ ಶಾಸಕ ಎ ಬಿ ರಮೇಶ್ ಬಂಡಿಸಿದ್ದೇಗೌಡ, ಮೈಸೂರು ಸಕ್ಕರೆ ಕಂಪನಿ ನಿಯಮಿತದ ಅಧ್ಯಕ್ಷ ಸಿ ಡಿ ಗಂಗಾಧರ,ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಖ್ ತನ್ವಿರ್ ಆಸೀಫ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಕೃಷ್ಣಕುಮಾರ್ ಇನ್ನಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

4 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

12 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

15 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

20 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

2 days ago