Advertisement
MIRROR FOCUS

ವ್ಯಾಪ್ತಿ ಮೀರಿ ಕಬ್ಬು ಕಟಾವು ಮಾಡಬಾರದು | ಮಂಡ್ಯ ರೈತರಿಗೆ ಜಿಲ್ಲಾಧಿಕಾರಿ ಎಚ್ಚರಿಕೆ

Share

ಮಂಡ್ಯ(Mandya) ಜಿಲ್ಲೆಯಲ್ಲಿರುವ ಎಲ್ಲಾ ಸಕ್ಕರೆ ಕಾರ್ಖಾನೆಗಳು(Sugarcane Industry) ಮ್ಯಾಪಿಂಗ್ ಆಗಿರುವ ಪ್ರದೇಶವನ್ನು ಹೊರತುಪಡಿಸಿ ಬೇರೆ ಪ್ರದೇಶದ ಕಬ್ಬನ್ನು ಕಟಾವು(Sugar cane crop) ಮಾಡಬಾರದು. ಈ ಕುರಿತಂತೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಇದೇ ಮರುಕಳಿಸಿದರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಜಿಲ್ಲಾಧಿಕಾರಿ(DC) ಡಾ ಕುಮಾರ ಅವರು ಎಚ್ಚರಿಕೆ  ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಂಡ್ಯ ಜಿಲ್ಲೆಯ 2024 ನೇ ಸಾಲಿನ ಸಕ್ಕರೆ ಕಾರ್ಖಾನೆಗಳ ಪ್ರಗತಿ ಪರಿಶೀಲನೆ ಹಾಗೂ ಇತರೆ ವಿಷಯಗಳ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 2024 – 25 ನೇ ಸಾಲಿನ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲೆಯಲ್ಲಿರುವ 5 ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ಅರೆಯುವ ಪ್ರಕ್ರಿಯೆ ನಡೆಯುತ್ತಿದೆ. ಕಾರ್ಖಾನೆಗಳು ತಮ್ಮ ವ್ಯಾಪ್ತಿ ಮೀರಿ ಕಬ್ಬನ್ನು ಖರೀದಿ ಮಾಡುತ್ತಿರುವ ಬಗ್ಗೆ ಸಾಕಷ್ಟು ದೂರು ಕೇಳಿ ಬರುತ್ತಿವೆ ಎಂದರು.

ಜಿಲ್ಲೆಯ 5 ಸಕ್ಕರೆ ಕಾರ್ಖಾನೆಗಳು ಒಗ್ಗೂಡಿ ಸಾಮರಸ್ಯದಿಂದ ಕಾರ್ಯ ನಿರ್ವಹಿಸಿ. ಜೊತೆಗೆ ರೈತರಿಗೆ ಸಕಾಲದಲ್ಲಿ ಎಫ್‌ಆರ್‌ಪಿ ಪ್ರಕಾರವೇ 14 ದಿನದೊಳಗಾಗಿ ಕಬ್ಬು ಖರೀದಿ ವೆಚ್ಚವನ್ನು ಪಾವತಿಸಿ ಎಂದರು. ಮಂಡ್ಯ ಜಿಲ್ಲೆಗೆ ಹೊರ ಜಿಲ್ಲೆಯಿಂದ ಕಬ್ಬು ಕಟಾವು ಮಾಡಲು ಬರುವ ಕೂಲಿ ಕಾರ್ಮಿಕರಿಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಕಾರ್ಖಾನೆಯ ಮಾಲೀಕರ ಕರ್ತವ್ಯವಾಗಿದ್ದು, ಅವರಿಗೆ ಮೂಲಭೂತ ವ್ಯವಸ್ಥೆ ಕಲ್ಪಿಸಿ ಎಂದರು. ಮೈಶುಗರ್ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಡಾ: ಹೆಚ್ ಎಲ್ ನಾಗರಾಜು ಅವರು ಮಾತನಾಡಿ ಮೈಶುಗರ್ ಸಕ್ಕರೆ ಕಾರ್ಖಾನೆ ಸರ್ಕಾರಿ ಸೌಮ್ಯದ ಕಾರ್ಖಾನೆಯಾಗಿದ್ದು, ಸೇವಾ ವಲಯದಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ.

ಸೆಪ್ಟೆಂಬರ್ ಅಂತ್ಯದೊಳಗೆ 2.50 ಲಕ್ಷ ಟನ್ ಕಬ್ಬು ಅರೆಯುವ ಗುರಿ ಹೊಂದಲಾಗಿದೆ. ಈ ಕಬ್ಬು ಅರಿದ ನಂತರ ಉಳಿದರೆ ಮೈಶುಗರ್ ವ್ಯಾಪ್ತಿಯ ಕಬ್ಬನ್ನು ಬೇರೆ ಆಸಕ್ತ ಕಬ್ಬು ಕಾರ್ಖಾನೆಗೆ ನೀಡಲಾಗುವುದು ಎಂದರು. ಇದಕ್ಕೆ ಪ್ರತಿಕ್ರಯಿಸಿದ ಜಿಲ್ಲಾಧಿಕಾರಿಗಳು ಐ.ಸಿ.ಎಲ್, ಚಾಮ್ ಶುಗರ್ ಸೇರಿದಂತೆ ಬೇರೆ ಕಾರ್ಖಾನೆಯ ಕಬ್ಬು ಜಟಾವು ಕಾರ್ಮಿಕರು ಒಟ್ಟು 100 ಬ್ಯಾಚನ್ನು 15 ದಿನಗಳ ಕಾಲ ಮೈಶುಗರ್ ಕಬ್ಬು ಕಟಾವಿಗೆ ನಿಯೋಜಿಸಿಕೊಡುವಂತೆ ತಿಳಿಸಿದರು.

ಸಭೆಯಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್  ಸರಬರಾಜು ನಿಗಮ ನಿಯಮಿತ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣದ ಶಾಸಕ ಎ ಬಿ ರಮೇಶ್ ಬಂಡಿಸಿದ್ದೇಗೌಡ, ಮೈಸೂರು ಸಕ್ಕರೆ ಕಂಪನಿ ನಿಯಮಿತದ ಅಧ್ಯಕ್ಷ ಸಿ ಡಿ ಗಂಗಾಧರ,ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಖ್ ತನ್ವಿರ್ ಆಸೀಫ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಕೃಷ್ಣಕುಮಾರ್ ಇನ್ನಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

11 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

13 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

14 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

14 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

14 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

23 hours ago