Advertisement
ಸುದ್ದಿಗಳು

ಕರುಳಿನ ಸೋಂಕುವಿನ ಬಗ್ಗೆ ನಿರ್ಲಕ್ಷಿಸಬೇಡಿ

Share

ಸಾಮಾನ್ಯವಾಗಿ ನಾವು ಸೇವಿಸುವ ಆಹಾರ ಪದಾರ್ಥಗಳು ಜೀರ್ಣಕ್ರಿಯೆಯ ಪ್ರಕ್ರಿಯೆಗೆ ಒಳಪಡದಿದ್ದಾಗ ಅಂದರೆ ಹೊಟ್ಟೆಯಲ್ಲಿ ಸರಿಯಾಗಿ ಜೀರ್ಣವಾಗಿ, ತ್ಯಾಜ್ಯವೆಲ್ಲಾ ಮಲದ ರೂಪದಲ್ಲಿ ಹೊರ ಹೋಗದಿದ್ದಾಗ ಕರುಳಿಗೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಈ ಸಮಸ್ಯೆ ಕಾಣಿಸಿಕೊಂಡಾಗ ಮೊದಲಿಗೆ ಸಣ್ಣ ಪ್ರಮಾಣ ಹೊಟ್ಟೆ ನೋವು ಅಥವಾ ಕಿಬ್ಬೊಟ್ಟೆಯ ನೋವು ಕಾಣಿಸಿಕೊಳ್ಳಲು ಶುರುಆಗುತ್ತದೆ. ಅಲ್ಲದೇ ಸರಿಯಾಗಿ ಹಸಿವಾಗದೆ ಇರುವುದು, ಅಥವಾ ಆಹಾರ ಸರಿಯಾಗಿ ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುವುದು, ಕೊನೆಗೆ ಇದರಿಂದಾಗಿ ಆಗಾಗ ಹೊಟ್ಟೆಉಬ್ಬರ ಕಾಣಿಸಿಕೊಳ್ಳುವುದು.

ಕರುಳಿನ ಸೋಂಕಿಗೆ ಕಾರಣಗಳೇನು? : ಸರಿಯಾಗಿ ನೀರು ಕುಡಿಯದೇ ಇರುವುದು, ಕಲುಷಿತ ಆಹಾರ ಸೇವನೆ, ಕೈಗಳನ್ನು ಸ್ವಚ್ಛಗೊಳಿಸದೆ ಆಹಾರ ಸೇವನೆ, ಹೆಚ್ಚು ಜಂಕ್ ಫುಡ್ ತಿನ್ನುವುದು, ಮತ್ತು ಒತ್ತಡದ ಜೀವನಶೈಲಿಯಿಂದಾಗಿ ಈ ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.

ಕರುಳಿನ ಆರೋಗ್ಯ ಕಾಪಾಡುವುದು ಹೇಗೆ? :

  • ಮಜ್ಜಿಗೆ ಸೇವನೆ: ಮಜ್ಜಿಗೆ ಸೇವನೆಯಿಂದ ಕರುಳಿನ ಸೋಂಕುವನ್ನು ದೂರ ಮಾಡಬಹುದು. ಹೇಗೆಂದರೆ, ಇದರಲ್ಲಿ ಇಂಗು ಮತ್ತು ಜೀರಿಗೆಯನ್ನು ಬೆರೆಸಿರುವುದರಿಂದ ಕರುಳಿನ ಬ್ಯಾಕ್ಟೀರಿಯಾಗಳು ನಾಶವಾಗುತ್ತದೆ.
  • ದಾಳಿಂಬೆ: ರಸವನ್ನು ಕುಡಿಯುವುದರಿಂದ ಕರುಳುಗಳು ಸರಿಯಾಗಿ ಕಾರ್ಯ ನಿರ್ವಹಿಸಲು ಸಹಾಯ ಮಾಡುತ್ತದೆ. ಇದು ಕರುಳಿನ ಸೋಂಕುಗಳನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇನ್ನೂ ಕರುಳು ಸ್ನೇಹಿ ಆಹಾರಗಳಾದ ಪ್ರೋಬಯಾಟಿಕ್ ಆಹಾರ ಅಂದರೆ ಮೊಸರು ಮಜ್ಜಿಗೆ, ಹಣ್ಣು ತರಕಾರಿಗಳು, ನಾರಿನಾಂಶ ಇರುವು ಆಹಾರಗಳನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳುವುದು ಉತ್ತಮ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

8 minutes ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

9 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

9 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

11 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

14 hours ago