Opinion

ಆಮವಾತವನ್ನು ನಿರ್ಲಕ್ಷಿಸದಿರಿ | ಸಾಕಷ್ಟು ವಿಶ್ರಾಂತಿ ಹಾಗೂ ನಿಯಮಿತ ವ್ಯಾಯಾಮ ಅಗತ್ಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆಮವಾತ.. ಇದು ಸ್ವಯಂ ನಿರೋಧಕ ಕಾಯಿಲೆ #AutoimmuneDisorder. ರಕ್ತದಲ್ಲಿ ಸೋಂಕು ಉಂಟಾಗಿ ದೇಹದ ಗಂಟುಗಳ ಮೇಲೆ ದಾಳಿ ಮಾಡುವುದರಿಂದ ತೀವ್ರತರವಾದ ಕೀಲು ನೋವು ಉಂಟಾಗುತ್ತದೆ. ಇದಕ್ಕೆ ನಿಖರವಾದ ಕಾರಣ ತಿಳಿದಿಲ್ಲ. ಇದು ಅನುವಂಶಿಕವಾಗಿಯೂ ಸಹ ಬರುತ್ತದೆ. ಕೀಲುಗಳಲ್ಲಿ ಊತ ನೋವು,ಹಾಗೂ ಗಡಸುತನ ಉಂಟು ಮಾಡುವುದಲ್ಲದೆ ಸ್ನಾಯುಗಳ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತದೆ. ಕೀಲುಗಳು ವಿರೂಪಗೊಂಡು #JointsDeformity ಸರಿಯಾಗಿ ಕೆಲಸ ಮಾಡಲು ಸಾಧ್ಯ ಆಗುವುದಿಲ್ಲ ಈ ಕಾಯಿಲೆಗೆ ಸರಿಯಾದ ಚಿಕಿತ್ಸೆ ನೀಡದೇ ಹೋದಲ್ಲಿ ಹೃದಯ, ಶ್ವಾಸಕೋಶ, ಕಣ್ಣು ಮತ್ತು ಮೆದುಳು ಹಾಗೂ ಇತರ ದೇಹದ ಅಂಗಗಳ ಮೇಲೆ ಕೆಟ್ಟ ಪರಿಣಾಮ ಬೀರಬಹುದು.

Advertisement

ಸಾಮಾನ್ಯವಾಗಿ ಆಮವಾತ ಮಣಿಗಂಟು, ಕೈಕಾಲುಗಳ ಮೇಲೆ ಮೊದಲು ಪರಿಣಾಮ ಬೀರಬಹುದು ಅನಂತರ ನಿಧಾನವಾಗಿ ಕತ್ತು, ಭುಜ ಸೊಂಟ ಮೊಣಕಾಲು ಹಿಮ್ಮಡಿ ಮತ್ತು ದೇಹದ ಇತರ ಕೀಲುಗಳ ಮೇಲೆ ಪರಿಣಾಮ ಬೀರಬಹುದು. ಈ ನೋವು ಬೆಳಿಗ್ಗೆ ಗಂಭೀರವಾಗಿರಬಹುದು ಹಾಗೂ ಗಂಟುಗಳಲ್ಲಿ ಗಡಸುತನ ಇರುತ್ತದೆ. ಗಂಟುಗಳಲ್ಲಿ ನೋವಿನ ಜೊತೆಗೆ ಜ್ವರದ ಲಕ್ಷಣವೂ ಕೂಡ ಕಾಣಿಸಿಕೊಳ್ಳಬಹುದು. ಇಂತ ಲಕ್ಷಣಗಳು ಕಾಣಿಸಿಕೊಂಡಾಗ ನಿರ್ಲಕ್ಷ ಮಾಡದೆ ತಕ್ಷಣ ವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆ ತೆಗೆದುಕೊಳ್ಳುವುದು ಉತ್ತಮ. ಆಮವಾತ ಸಂಪೂರ್ಣ ಗುಣಮುಖ ಪಡಿಸಲು ಸಾಧ್ಯವಿಲ್ಲದಿದ್ದರೂ ಸಹ ಸಾಕಷ್ಟು ವಿಶ್ರಾಂತಿ ಹಾಗೂ ನಿಯಮಿತ ವ್ಯಾಯಾಮಗಳನ್ನು ಮಾಡುವುದರಿಂದ ತಡೆಗಟ್ಟಬಹುದು.

ಆಯುರ್ವೇದ ಪರಿಹಾರ:

ಆರೋಗ್ಯಕರ ಆಹಾರದ ಜೊತೆಗೆ ಸಾಕಷ್ಟು ಸೂರ್ಯನ ಬೆಳಕಿಗೆ ದೇಹವನ್ನು ಒಡ್ಡುವುದರಿಂದ ದೇಹಕ್ಕೆ ವಿಟಮಿನ್ ಡಿ ಪೋಷಕಾಂಶ ದೊರೆತು ಕೀಲುಗಳನ್ನು ಸದೃಢವನ್ನಾಗಿರುಸುತ್ತದೆ. ದಿನವಿಡೀ ಬೆಚ್ಚಗಿನ ನೀರಿನ ಸೇವನೆ ಮಾಡುವುದರಿಂದ ಕೀಲುಗಳಿನ ಊತ ಕಡಿಮೆಯಾಗುವುದು ಶುಂಠಿ ಮತ್ತು ಜೀರಿಗೆಯನ್ನು ಹಾಕಿ ಬಿಸಿ ನೀರನ್ನು ಕುಡಿಯುವುದರಿಂದ ದೇಹದಲ್ಲಿ ಜೀರ್ಣಶಕ್ತಿ ಹೆಚ್ಚಿಸಿ ಆಮವನ್ನು ಹೊರಹಾಕಲಾಗುವುದು.

ಟೊಮೆಟೊ, ಮೊಸರು, ಬೇಕರಿ ಪದಾರ್ಥ ಕರಿದ ಹಾಗೂ ಶೀತ ಪದಾರ್ಥ ಇವುಗಳನ್ನು ತ್ಯಜಿಸುವುದು ಒಳ್ಳೆಯದು.
ಆಮವಾತದ ಪ್ರಾರಂಭದ ಸಮಯದಲ್ಲಿ ವಾತ ದೋಷವನ್ನು ಸಮತೋಲನದಲ್ಲಿಗೊಳಿಸುವುದರ ಮೇಲೆ ಕೇಂದ್ರೀಕರಿಸಿಬೇಕು ಊತ ಕಡಿಮೆ ಮಾಡಲು ಹಾಗೂ ಆಮ ಹೊರಗೆ ಹಾಕಲು ಆಯುರ್ವೇದ ಗಿಡಮೂಲಿಕೆ ಔಷಧಿಗಳನ್ನು ಬಳಸುವುದರಿಂದ ಅಸ್ಥಿ ಹಾಗೂ ಮಚ್ಚಾ ಧಾತುಗಳನ್ನು ಪುನರ್ಜೀವನಗೊಳಿಸಬಹುದು.

ಉತ್ತಮ ಫಲಿತಾಂಶಕ್ಕಾಗಿ ಪಂಚಕರ್ಮ ಚಿಕಿತ್ಸೆಯನ್ನು ಮಾಡಬಹುದು ( ಬಸ್ತಿ ತೆರಪಿ, ವಿರೇಚನ ರೂಕ್ಷಸ್ವೇಧನ –ಮರಳಿನಿಂದ ಶಾಖ ( valuka sweda ) ಮೊದಲಾದ ಪಂಚಕರ್ಮ ಚಿಕಿತ್ಸೆ ಆಯುರ್ವೇದ ಔಷಧಿಗಳು, ಆರೋಗ್ಯಕರ ಆಹಾರ ಹಾಗೂ ಉತ್ತಮ ಜೀವನ ಶೈಲಿ, ಸೂಕ್ತವಾದ ಪಂಚ ಕರ್ಮ ಚಿಕಿತ್ಸೆ ಇವುಗಳನ್ನು ವೈದ್ಯರ ಸಲಹೆ ಮೇರೆಗೆ ತೆಗೆದುಕೊಳ್ಳುವುದರಿಂದ ಆಮವಾತ ತಡೆಗಟ್ಟಬಹುದು.

ಬರಹ :
ಡಾ. ಜ್ಯೋತಿ, ಆಯುರ್ವೇದ ವೈದ್ಯರು, ಮಂಗಳೂರು, 94481 68053
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೆಲವು ವಿಶೇಷ ಯೋಗಗಳು ಮತ್ತು ಗ್ರಹಗಳ ಸಂಯೋಜನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 hour ago

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…

9 hours ago

ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…

10 hours ago

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

19 hours ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

20 hours ago

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…

22 hours ago