Advertisement
Opinion

ಆಮವಾತವನ್ನು ನಿರ್ಲಕ್ಷಿಸದಿರಿ | ಸಾಕಷ್ಟು ವಿಶ್ರಾಂತಿ ಹಾಗೂ ನಿಯಮಿತ ವ್ಯಾಯಾಮ ಅಗತ್ಯ

Share

ಆಮವಾತ.. ಇದು ಸ್ವಯಂ ನಿರೋಧಕ ಕಾಯಿಲೆ #AutoimmuneDisorder. ರಕ್ತದಲ್ಲಿ ಸೋಂಕು ಉಂಟಾಗಿ ದೇಹದ ಗಂಟುಗಳ ಮೇಲೆ ದಾಳಿ ಮಾಡುವುದರಿಂದ ತೀವ್ರತರವಾದ ಕೀಲು ನೋವು ಉಂಟಾಗುತ್ತದೆ. ಇದಕ್ಕೆ ನಿಖರವಾದ ಕಾರಣ ತಿಳಿದಿಲ್ಲ. ಇದು ಅನುವಂಶಿಕವಾಗಿಯೂ ಸಹ ಬರುತ್ತದೆ. ಕೀಲುಗಳಲ್ಲಿ ಊತ ನೋವು,ಹಾಗೂ ಗಡಸುತನ ಉಂಟು ಮಾಡುವುದಲ್ಲದೆ ಸ್ನಾಯುಗಳ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತದೆ. ಕೀಲುಗಳು ವಿರೂಪಗೊಂಡು #JointsDeformity ಸರಿಯಾಗಿ ಕೆಲಸ ಮಾಡಲು ಸಾಧ್ಯ ಆಗುವುದಿಲ್ಲ ಈ ಕಾಯಿಲೆಗೆ ಸರಿಯಾದ ಚಿಕಿತ್ಸೆ ನೀಡದೇ ಹೋದಲ್ಲಿ ಹೃದಯ, ಶ್ವಾಸಕೋಶ, ಕಣ್ಣು ಮತ್ತು ಮೆದುಳು ಹಾಗೂ ಇತರ ದೇಹದ ಅಂಗಗಳ ಮೇಲೆ ಕೆಟ್ಟ ಪರಿಣಾಮ ಬೀರಬಹುದು.

ಸಾಮಾನ್ಯವಾಗಿ ಆಮವಾತ ಮಣಿಗಂಟು, ಕೈಕಾಲುಗಳ ಮೇಲೆ ಮೊದಲು ಪರಿಣಾಮ ಬೀರಬಹುದು ಅನಂತರ ನಿಧಾನವಾಗಿ ಕತ್ತು, ಭುಜ ಸೊಂಟ ಮೊಣಕಾಲು ಹಿಮ್ಮಡಿ ಮತ್ತು ದೇಹದ ಇತರ ಕೀಲುಗಳ ಮೇಲೆ ಪರಿಣಾಮ ಬೀರಬಹುದು. ಈ ನೋವು ಬೆಳಿಗ್ಗೆ ಗಂಭೀರವಾಗಿರಬಹುದು ಹಾಗೂ ಗಂಟುಗಳಲ್ಲಿ ಗಡಸುತನ ಇರುತ್ತದೆ. ಗಂಟುಗಳಲ್ಲಿ ನೋವಿನ ಜೊತೆಗೆ ಜ್ವರದ ಲಕ್ಷಣವೂ ಕೂಡ ಕಾಣಿಸಿಕೊಳ್ಳಬಹುದು. ಇಂತ ಲಕ್ಷಣಗಳು ಕಾಣಿಸಿಕೊಂಡಾಗ ನಿರ್ಲಕ್ಷ ಮಾಡದೆ ತಕ್ಷಣ ವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆ ತೆಗೆದುಕೊಳ್ಳುವುದು ಉತ್ತಮ. ಆಮವಾತ ಸಂಪೂರ್ಣ ಗುಣಮುಖ ಪಡಿಸಲು ಸಾಧ್ಯವಿಲ್ಲದಿದ್ದರೂ ಸಹ ಸಾಕಷ್ಟು ವಿಶ್ರಾಂತಿ ಹಾಗೂ ನಿಯಮಿತ ವ್ಯಾಯಾಮಗಳನ್ನು ಮಾಡುವುದರಿಂದ ತಡೆಗಟ್ಟಬಹುದು.

ಆಯುರ್ವೇದ ಪರಿಹಾರ:

ಆರೋಗ್ಯಕರ ಆಹಾರದ ಜೊತೆಗೆ ಸಾಕಷ್ಟು ಸೂರ್ಯನ ಬೆಳಕಿಗೆ ದೇಹವನ್ನು ಒಡ್ಡುವುದರಿಂದ ದೇಹಕ್ಕೆ ವಿಟಮಿನ್ ಡಿ ಪೋಷಕಾಂಶ ದೊರೆತು ಕೀಲುಗಳನ್ನು ಸದೃಢವನ್ನಾಗಿರುಸುತ್ತದೆ. ದಿನವಿಡೀ ಬೆಚ್ಚಗಿನ ನೀರಿನ ಸೇವನೆ ಮಾಡುವುದರಿಂದ ಕೀಲುಗಳಿನ ಊತ ಕಡಿಮೆಯಾಗುವುದು ಶುಂಠಿ ಮತ್ತು ಜೀರಿಗೆಯನ್ನು ಹಾಕಿ ಬಿಸಿ ನೀರನ್ನು ಕುಡಿಯುವುದರಿಂದ ದೇಹದಲ್ಲಿ ಜೀರ್ಣಶಕ್ತಿ ಹೆಚ್ಚಿಸಿ ಆಮವನ್ನು ಹೊರಹಾಕಲಾಗುವುದು.

ಟೊಮೆಟೊ, ಮೊಸರು, ಬೇಕರಿ ಪದಾರ್ಥ ಕರಿದ ಹಾಗೂ ಶೀತ ಪದಾರ್ಥ ಇವುಗಳನ್ನು ತ್ಯಜಿಸುವುದು ಒಳ್ಳೆಯದು.
ಆಮವಾತದ ಪ್ರಾರಂಭದ ಸಮಯದಲ್ಲಿ ವಾತ ದೋಷವನ್ನು ಸಮತೋಲನದಲ್ಲಿಗೊಳಿಸುವುದರ ಮೇಲೆ ಕೇಂದ್ರೀಕರಿಸಿಬೇಕು ಊತ ಕಡಿಮೆ ಮಾಡಲು ಹಾಗೂ ಆಮ ಹೊರಗೆ ಹಾಕಲು ಆಯುರ್ವೇದ ಗಿಡಮೂಲಿಕೆ ಔಷಧಿಗಳನ್ನು ಬಳಸುವುದರಿಂದ ಅಸ್ಥಿ ಹಾಗೂ ಮಚ್ಚಾ ಧಾತುಗಳನ್ನು ಪುನರ್ಜೀವನಗೊಳಿಸಬಹುದು.

ಉತ್ತಮ ಫಲಿತಾಂಶಕ್ಕಾಗಿ ಪಂಚಕರ್ಮ ಚಿಕಿತ್ಸೆಯನ್ನು ಮಾಡಬಹುದು ( ಬಸ್ತಿ ತೆರಪಿ, ವಿರೇಚನ ರೂಕ್ಷಸ್ವೇಧನ –ಮರಳಿನಿಂದ ಶಾಖ ( valuka sweda ) ಮೊದಲಾದ ಪಂಚಕರ್ಮ ಚಿಕಿತ್ಸೆ ಆಯುರ್ವೇದ ಔಷಧಿಗಳು, ಆರೋಗ್ಯಕರ ಆಹಾರ ಹಾಗೂ ಉತ್ತಮ ಜೀವನ ಶೈಲಿ, ಸೂಕ್ತವಾದ ಪಂಚ ಕರ್ಮ ಚಿಕಿತ್ಸೆ ಇವುಗಳನ್ನು ವೈದ್ಯರ ಸಲಹೆ ಮೇರೆಗೆ ತೆಗೆದುಕೊಳ್ಳುವುದರಿಂದ ಆಮವಾತ ತಡೆಗಟ್ಟಬಹುದು.

ಬರಹ :
ಡಾ. ಜ್ಯೋತಿ, ಆಯುರ್ವೇದ ವೈದ್ಯರು, ಮಂಗಳೂರು, 94481 68053
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

54 minutes ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

11 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

12 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

16 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago