ಆಮವಾತ.. ಇದು ಸ್ವಯಂ ನಿರೋಧಕ ಕಾಯಿಲೆ #AutoimmuneDisorder. ರಕ್ತದಲ್ಲಿ ಸೋಂಕು ಉಂಟಾಗಿ ದೇಹದ ಗಂಟುಗಳ ಮೇಲೆ ದಾಳಿ ಮಾಡುವುದರಿಂದ ತೀವ್ರತರವಾದ ಕೀಲು ನೋವು ಉಂಟಾಗುತ್ತದೆ. ಇದಕ್ಕೆ ನಿಖರವಾದ ಕಾರಣ ತಿಳಿದಿಲ್ಲ. ಇದು ಅನುವಂಶಿಕವಾಗಿಯೂ ಸಹ ಬರುತ್ತದೆ. ಕೀಲುಗಳಲ್ಲಿ ಊತ ನೋವು,ಹಾಗೂ ಗಡಸುತನ ಉಂಟು ಮಾಡುವುದಲ್ಲದೆ ಸ್ನಾಯುಗಳ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತದೆ. ಕೀಲುಗಳು ವಿರೂಪಗೊಂಡು #JointsDeformity ಸರಿಯಾಗಿ ಕೆಲಸ ಮಾಡಲು ಸಾಧ್ಯ ಆಗುವುದಿಲ್ಲ ಈ ಕಾಯಿಲೆಗೆ ಸರಿಯಾದ ಚಿಕಿತ್ಸೆ ನೀಡದೇ ಹೋದಲ್ಲಿ ಹೃದಯ, ಶ್ವಾಸಕೋಶ, ಕಣ್ಣು ಮತ್ತು ಮೆದುಳು ಹಾಗೂ ಇತರ ದೇಹದ ಅಂಗಗಳ ಮೇಲೆ ಕೆಟ್ಟ ಪರಿಣಾಮ ಬೀರಬಹುದು.
ಸಾಮಾನ್ಯವಾಗಿ ಆಮವಾತ ಮಣಿಗಂಟು, ಕೈಕಾಲುಗಳ ಮೇಲೆ ಮೊದಲು ಪರಿಣಾಮ ಬೀರಬಹುದು ಅನಂತರ ನಿಧಾನವಾಗಿ ಕತ್ತು, ಭುಜ ಸೊಂಟ ಮೊಣಕಾಲು ಹಿಮ್ಮಡಿ ಮತ್ತು ದೇಹದ ಇತರ ಕೀಲುಗಳ ಮೇಲೆ ಪರಿಣಾಮ ಬೀರಬಹುದು. ಈ ನೋವು ಬೆಳಿಗ್ಗೆ ಗಂಭೀರವಾಗಿರಬಹುದು ಹಾಗೂ ಗಂಟುಗಳಲ್ಲಿ ಗಡಸುತನ ಇರುತ್ತದೆ. ಗಂಟುಗಳಲ್ಲಿ ನೋವಿನ ಜೊತೆಗೆ ಜ್ವರದ ಲಕ್ಷಣವೂ ಕೂಡ ಕಾಣಿಸಿಕೊಳ್ಳಬಹುದು. ಇಂತ ಲಕ್ಷಣಗಳು ಕಾಣಿಸಿಕೊಂಡಾಗ ನಿರ್ಲಕ್ಷ ಮಾಡದೆ ತಕ್ಷಣ ವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆ ತೆಗೆದುಕೊಳ್ಳುವುದು ಉತ್ತಮ. ಆಮವಾತ ಸಂಪೂರ್ಣ ಗುಣಮುಖ ಪಡಿಸಲು ಸಾಧ್ಯವಿಲ್ಲದಿದ್ದರೂ ಸಹ ಸಾಕಷ್ಟು ವಿಶ್ರಾಂತಿ ಹಾಗೂ ನಿಯಮಿತ ವ್ಯಾಯಾಮಗಳನ್ನು ಮಾಡುವುದರಿಂದ ತಡೆಗಟ್ಟಬಹುದು.
ಆಯುರ್ವೇದ ಪರಿಹಾರ:
ಆರೋಗ್ಯಕರ ಆಹಾರದ ಜೊತೆಗೆ ಸಾಕಷ್ಟು ಸೂರ್ಯನ ಬೆಳಕಿಗೆ ದೇಹವನ್ನು ಒಡ್ಡುವುದರಿಂದ ದೇಹಕ್ಕೆ ವಿಟಮಿನ್ ಡಿ ಪೋಷಕಾಂಶ ದೊರೆತು ಕೀಲುಗಳನ್ನು ಸದೃಢವನ್ನಾಗಿರುಸುತ್ತದೆ. ದಿನವಿಡೀ ಬೆಚ್ಚಗಿನ ನೀರಿನ ಸೇವನೆ ಮಾಡುವುದರಿಂದ ಕೀಲುಗಳಿನ ಊತ ಕಡಿಮೆಯಾಗುವುದು ಶುಂಠಿ ಮತ್ತು ಜೀರಿಗೆಯನ್ನು ಹಾಕಿ ಬಿಸಿ ನೀರನ್ನು ಕುಡಿಯುವುದರಿಂದ ದೇಹದಲ್ಲಿ ಜೀರ್ಣಶಕ್ತಿ ಹೆಚ್ಚಿಸಿ ಆಮವನ್ನು ಹೊರಹಾಕಲಾಗುವುದು.
ಟೊಮೆಟೊ, ಮೊಸರು, ಬೇಕರಿ ಪದಾರ್ಥ ಕರಿದ ಹಾಗೂ ಶೀತ ಪದಾರ್ಥ ಇವುಗಳನ್ನು ತ್ಯಜಿಸುವುದು ಒಳ್ಳೆಯದು.
ಆಮವಾತದ ಪ್ರಾರಂಭದ ಸಮಯದಲ್ಲಿ ವಾತ ದೋಷವನ್ನು ಸಮತೋಲನದಲ್ಲಿಗೊಳಿಸುವುದರ ಮೇಲೆ ಕೇಂದ್ರೀಕರಿಸಿಬೇಕು ಊತ ಕಡಿಮೆ ಮಾಡಲು ಹಾಗೂ ಆಮ ಹೊರಗೆ ಹಾಕಲು ಆಯುರ್ವೇದ ಗಿಡಮೂಲಿಕೆ ಔಷಧಿಗಳನ್ನು ಬಳಸುವುದರಿಂದ ಅಸ್ಥಿ ಹಾಗೂ ಮಚ್ಚಾ ಧಾತುಗಳನ್ನು ಪುನರ್ಜೀವನಗೊಳಿಸಬಹುದು.
ಉತ್ತಮ ಫಲಿತಾಂಶಕ್ಕಾಗಿ ಪಂಚಕರ್ಮ ಚಿಕಿತ್ಸೆಯನ್ನು ಮಾಡಬಹುದು ( ಬಸ್ತಿ ತೆರಪಿ, ವಿರೇಚನ ರೂಕ್ಷಸ್ವೇಧನ –ಮರಳಿನಿಂದ ಶಾಖ ( valuka sweda ) ಮೊದಲಾದ ಪಂಚಕರ್ಮ ಚಿಕಿತ್ಸೆ ಆಯುರ್ವೇದ ಔಷಧಿಗಳು, ಆರೋಗ್ಯಕರ ಆಹಾರ ಹಾಗೂ ಉತ್ತಮ ಜೀವನ ಶೈಲಿ, ಸೂಕ್ತವಾದ ಪಂಚ ಕರ್ಮ ಚಿಕಿತ್ಸೆ ಇವುಗಳನ್ನು ವೈದ್ಯರ ಸಲಹೆ ಮೇರೆಗೆ ತೆಗೆದುಕೊಳ್ಳುವುದರಿಂದ ಆಮವಾತ ತಡೆಗಟ್ಟಬಹುದು.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…