MIRROR FOCUS

ಹೊಸ ಮದ್ಯದಂಗಡಿಗಳಿಗೆ ಪರವಾನಿಗೆ ಪ್ರಸ್ತಾಪ | ಗ್ಯಾರಂಟಿಗಳಿಂದ ಬಂದ ಮರ್ಯಾದಿ ಮದ್ಯದಂಗಡಿ ಪರವಾನಿಗೆ ಮೂಲಕ ಕಳೆದುಕೊಳ್ಳದಿರಿ | ಸರ್ಕಾರಕ್ಕೆ ಮಹಿಳಾ ಸಂಘಟನೆಗಳ ಮನವಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಳ್ಳಿ ಹಳ್ಳಿಗಳ ದಿನಸಿ ಅಂಗಡಿ ಸೇರಿದಂತೆ ಎಲ್ಲಿ ಬೇಕಾದರು ಮದ್ಯ ಮಾರಾಟಕ್ಕೆ ಅನುಮತಿ ನೀಡುವ ನೀಚಗೇಡಿತನದ ಕೆಲಸವನ್ನು ಮಾಡಲು ಹೊರಟಿದೆ ಕಾಂಗ್ರೆಸ್‌ ಸರ್ಕಾರ. ಇದನ್ನು ವಿರೋಧಿಸಿ ಇಂದು “ನೂತನ ರಾಜ್ಯ ಸರಕಾರ ಮಹಿಳೆಯರಿಗೆ ಕೆಲವು ಗ್ಯಾರಂಟಿ ಯೋಜನೆಗಳ ಮೂಲಕ ಖುಷಿ ನೀಡಿತ್ತು. ಆದರೆ ಇದೀಗ ಆ ಖುಷಿಯನ್ನು ಹೊಸ ಮದ್ಯದಂಗಡಿಗಳಿಗೆ ಪರವಾನಿಗೆ ನೀಡುವ ಮೂಲಕ ಕಸಿಯಲು ಹೊರಟಿರುವುದು ಆಘಾತಕಾರಿ” ಎಂದು ದ.ಕ. ಜಿಲ್ಲೆಯ ಮದ್ಯನಿಷೇಧ ಆಂದೋಲನದಡಿ ಜಿಲ್ಲೆಯ ವಿವಿಧ ಸಂಘಟನೆಗಳ ಮಹಿಳಾ ಪ್ರತಿನಿಧಿಗಳು ರಾಜ್ಯ ಸರಕಾರಕ್ಕೆ ಭಾವನಾತ್ಮಕ ಮನವಿ ಮಾಡಿದ್ದಾರೆ.

Advertisement

ಮಂಗಳೂರಿನ ಪುರಭವನದ ಸಮೀಪದ ರಾಜಾಜೀ ಪಾರ್ಕ್‌ನಲ್ಲಿ ನಡೆದ ಜಿಲ್ಲಾ ಮಟ್ಟದ ಗಾಂಧಿ ಜಯಂತಿ ಕಾರ್ಯಕ್ರಮದ ಸಂದರ್ಭ ಮಹಿಳಾ ಹೋರಾಟಗಾರರ ಗುಂಪೊಂದು ಜಿಲ್ಲಾ ಮಟ್ಟದ ಅಧಿಕಾರಿಗಳ ಮೂಲಕ ರಾಜ್ಯ ಸರಕಾರಕ್ಕೆ ಮನವಿಯನ್ನು ಸಲ್ಲಿಸಿತು. ”ಯಾವುದೇ ಸರಕಾರ ಮದ್ಯ ಮಾರಾಟದಿಂದ ಬರುವ ಆದಾಯವನ್ನು ಕಲ್ಯಾಣ ಕಾರ್ಯಕ್ರಮಗಳಿಗೆ ಬಳಸುವುದು ಅಪರಾಧ ಎಂದು ಗಾಂಧೀಜಿ ಹೇಳಿದ್ದರು. ಆದರೆ ಸರಕಾರ ಅಕ್ರಮ ಮದ್ಯ ಮಾರಾಟ ತಡೆಗಟ್ಟಲು 600 ಗ್ರಾಮ ಪಂಚಾಯತ್ ಸೇರಿದಂತೆ 1000 ಹೊಸ ಮದ್ಯದಂಗಡಿಗೆ ಪರವಾನಿಗೆ ನೀಡುವ ಪ್ರಸ್ತಾವನೆ ಮುಂದಿಟ್ಟಿರುವುದು ತಿಳಿದು ಆಘಾತಗೊಂಡಿದ್ದೇವೆ” ಎಂದು ಮದ್ಯ ನಿಷೇಧ ಆಂದೋಲನ, ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ, ಯುವ ಮುನ್ನಡೆ ಮಂಗಳೂರು, ಪ್ರಜ್ಞಾ ಸಲಹಾ ಕೇಂದ್ರ, ಕರಾವಳಿ ಲೇಖಕಿಯರ ವಾಚಕಿಯರ ಸಂಘ, ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆ, ಕರ್ನಾಟಕ ರಾಜ್ಯ ರೈತ ಸಂಘಗಳನ್ನು ಒಳಗೊಂಡ ಪ್ರತಿನಿಧಿಗಳು ಮನವಿಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಮದ್ಯ ನಿಷೇಧ ಆಂದೋಲನದ ಮಹಿಳೆಯರು 2015ರಿಂದಲೂ ಹೈಕೋರ್ಟ್‌ನ ಆದೇಶದಂತೆ ಅಕ್ರಮ ಮದ್ಯ ಮಾರಾಟ ನಿಲ್ಲಿಸಲು ಕ್ರಮ ಕೈಗೊಳ್ಳಬೇಕು. ಅಕ್ರಮ ಮಾರಾಟಗಾರರ ಮೇಲೆ ಕಠಿಣ ಕ್ರಮ ವಹಿಸಬೇಕು. ಕರ್ನಾಟಕ ಪಂಚಾಯತ್‌ರಾಜ್ ಕಾನೂನಿನ ಅನ್ವಯ (73ನೆ ತಿದ್ದುಪಡಿ) ಗ್ರಾಮಸಭೆಗೆ ಪರಮಾಧಿಕಾರ ನೀಡುವ ಆದೇಶ ಹೊರಡಿಸಬೇಕು. ಮಹಾರಾಷ್ಟ್ರ, ಹರಿಯಾಣ ರಾಜ್ಯಗಳಂತೆ ಶೇ. 10ರಷ್ಟು ಮಹಿಳೆಯರು ಆಯಾ ಪಂಚಾಯತ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ಪರವಾನಿಗೆ ನೀಡಬಾರದು ಎಂಬುದಾಗಿ ಗ್ರಾಮ ಸಭೆಯಲ್ಲಿ ನಿರ್ಧರಿಸಿದ್ದಲ್ಲಿ ಆ ಠರಾವನ್ನು ಸರಕಾರ ಎತ್ತಿ ಹಿಡಿಯಬೇಕು ಎಂಬ ತಮ್ಮ ಹಕ್ಕೊತ್ತಾಯವನ್ನು ಪುನರುಚ್ಚರಿಸುತ್ತಿದ್ದೇವೆ. ಮಾತ್ರವಲ್ಲದೆ ಸರಕಾರ ಹೊರತಾಗಿ ಮದ್ಯದಂಗಡಿಗಳಿಗೆ ಪರವಾನಿಗೆ ನೀಡುವ, ಮಾಲ್ ಸೂಪರ್ ಮಾರುಕಟ್ಟೆಗಳಲ್ಲಿ ಹಾಗೂ ಆನ್‌ಲೈನ್ ಮಾರಾಟ ಮಾಡುವ ಪ್ರಸ್ತಾವನೆ ಕೈಬಿಡಬೇಕು” ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…

6 hours ago

ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ

ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…

6 hours ago

ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ

ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…

6 hours ago

ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ

ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…

6 hours ago

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…

6 hours ago

ಚಾಲಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣ | ಗಂಭೀರವಾಗಿ ಪರಿಗಣಿಸಿದ ಆರೋಗ್ಯ ಇಲಾಖೆ

ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಕುರಿತಂತೆ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗಿದೆ ಎಂದು ಆರೋಗ್ಯ…

6 hours ago