Advertisement
ಸುದ್ದಿಗಳು

ಚಳಿಗಾಲದಲ್ಲಿ ಹೃದಯದ ಕಾಳಜಿಯ ಬಗ್ಗೆ ನಿರ್ಲಕ್ಷ್ಯ ಬೇಡ- ಎಚ್ಚರಿಕೆ ಇರಲಿ

Share

ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸುವುದು ಮುಖ್ಯ ಎಂದು ಆರೋಗ್ಯ ತಜ್ಞರ ಆಭಿಪ್ರಾಯ. ಯಾಕೆಂದರೆ ಹೃದಯ ನೋವು ಬಂದರೆ ಆದು ಚಳಿಗಾಲದಲ್ಲಿ ಸರ್ವೇ ಸಾಮಾನ್ಯ ಎಂದು ಸುಮ್ಮನಾಗಬೇಡಿ. ಏಕೆಂದರೆ ಇದು ಹೃದಯಾಘಾತದ ಸಂದೇಶವೂ ಆಗಿರಬಹುದು. ಹಾಗೆಂದು ಎಲ್ಲದಕ್ಕೂ ಇದು ಹೃದಯದ ಸಮಸ್ಯೆ ಎಂದು ಗಡಿಬಿಡಿಯೂ ಆಗಬೇಡಿ. ಎಚ್ಚರಿಕೆ ಇರುವುದು ಉತ್ತಮ ಅಷ್ಟೇ.

ಬೇರೆ ಸಮಯಕ್ಕೆ ಹೋಲಿಸಿದರೆ ಚಳಿಗಾಲದಲ್ಲಿ ದೇಹವು ತನ್ನ ತಾಪಮಾನವನ್ನು ಕಾಪಾಡಿಕೊಳ್ಳಲು ರಕ್ತನಾಳಗಳನ್ನು ಸಂಕೋಚನಗೊಳಿಸುತ್ತದೆ. ಇದು ರಕ್ತದೊತ್ತಡವನ್ನು ಹೆಚ್ಚಿಸಿ, ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ.

ಈ ಹೃದಯ ಸಂಬಂಧಿ ಕಾಯಿಲೆಗಳು ಬರಲು ಮುಖ್ಯ ಕಾರಣವೆಂದರೆ ಚಳಿಗಾಲದಲ್ಲಿ ಸೂರ್ಯನ ಬೆಳಕು ಕಡಿಮೆ ಇರುವುದರ ಜೊತೆಗೆ, ಜಡಜೀವನಶೈಲಿ ವ್ಯಾಯಾಮದ ಕೊರತೆ ಮತ್ತು ಅನಾರೋಗ್ಯ ಆಹಾರ ಪದ್ಧತಿಯನ್ನು ಹೆಚ್ಚಾಗಿ ಅನುಸರಿಸುವುದರಿಂದ ಹೃದಯಕ್ಕೆ ಸಂಬಂಧಪಟ್ಟ ಆರೋಗ್ಯ ಸಮಸ್ಯೆಗಳು ಕಾಣುತ್ತದೆ. ಕೆಲವರ ಪ್ರಕಾರ ಹೃದಯಘಾತಗಳು ಆಗುವ ಮುನ್ನ ಎದೆಯಲ್ಲಿ ಅಹಿತಕರ ಅನಿಸುವುದು ಅಥವಾ ಎದೆಯಲ್ಲಿ ಆಗಾಗ ನೋವು ಬಂದು ಹೋಗುವುದು, ಉಸಿರಾಟದಲ್ಲಿ ತೊಂದರೆ, ಚಳಿಗಾಲದಲ್ಲಿಯೂ ಕೂಡ ತುಂಬಾನೇ ಬೆವರರುವುದು, ಆಗಾಗ ವಾಕರಿಕೆ ಬರುವುದು, ತಲೆನೋವು, ಕುತ್ತಿಗೆ ನೋವು ಇವೆಲ್ಲ ಲಕ್ಷಣಗಳು ಕಂಡುಬಂದರೆ ಹೃದಯಾಘತ ಎಂದು. ಈ ಮಾತು ಎಲ್ಲ ಸಮಯದಲ್ಲಿ ನಂಬಲು ಸಾಧ್ಯವಿಲ್ಲ. ಏಕೆಂದರೆ ಕೆಲವರಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ. ಬದಲಾಗಿ, ಕೆಲವರಲ್ಲಿ..

  • ಎದೆ ನೋವು ಯಾವಾಗಲೂ ಎದೆ ಭಾರ, ಎದೆ ಉರಿ, ಒತ್ತಡ ಅಥವಾ ಬಿಗಿತದ ಭಾವನೆ ಕಾಣಿಸಿಕೊಳ್ಳುತ್ತದೆ.
  • ಮೆಟ್ಟಿಲುಗಳನ್ನು ಹತ್ತುವಾಗ ಅಥವಾ ವೇಗವಾಗಿ ನಡೆಯುವಾಗ ಸ್ವಲ್ಪ ಉಸಿರಾಟದ ತೊಂದರೆ ಸಾಮಾನ್ಯವಾಘಿ ಕಂಡುಬರುತ್ತದೆ. ಆದರೆ ಇದು ದಿನ ದಿನೇ ಹೆಚ್ಚುತಿದ್ದರೆ ಅಪಾಯ.
  • ಚಳಿಗಾಲದಲ್ಲಿ ಸ್ವಲ್ಪ ಆಲಸ್ಯ ಅನುಭವಿಸುವುದು ಸಹಜ, ಆದರೆ ಸಣ್ಣ ಚಟುವಟಿಕೆಗಳು ಸಹ ನಿಮ್ಮನ್ನು ಆಯಾಸಗೊಳಿಸಿದರೆ, ಅದು ಅಪಾಯ. ಹೃದಯ ವೈಫಲ್ಯದ ಆರಂಭಿಕ ಲಕ್ಷಣವೂ ಆಗಿರಬಹುದು.
  • ಕಾಲುಗಳಲ್ಲಿ ಊತ ಕಾಣಿಸಿಕೊಳ್ಳಲು ಪ್ರಾರಂಭಿಸುತ್ತದೆ. ಇದು ಬಹುತೇಕ ಜನರು ಕಡೆಗಣಿಸುತ್ತಾರೆ. ಏಕೆಂದರೆ ಚಳಿಗಾಲದಲ್ಲಿ ಕಡಿಮೆ ನೀರು ಕುಡಿಯುವುದರಿಂದ ಕಾಲುಗಳು ಊತವನ್ನು ಕಾಣಿಸುವು ಸಾಮಾನ್ಯ ಎಂದು. ಆದರೆ ಇವೆಲ್ಲವೂ ಹೃದಯ ಸಮಸ್ಯೆಗಳ ಲಕ್ಷಣಗಳಾಗಿವೆ.
  • ಚಳಿಗಾಲದಲ್ಲಿ ಹೃದಯದ ಮೇಲಿನ ಒತ್ತಡ ಸ್ವಾಭಾವಿಕವಾಗ ಹೆಚ್ಚಾಗುತ್ತದೆ. ಆದ್ದರಿಂದ ಈ ಮೇಲಿನ ಲಕ್ಷಣಗಳು ಕಂಡುಬಂದರೆ ವೈದ್ಯರ ಬೇಟಿ ಮಾಡುವುದು ಉತ್ತಮ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

6 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

6 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

1 day ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago