Advertisement
ಸುದ್ದಿಗಳು

ಚಳಿಗಾಲದಲ್ಲಿ ಹೃದಯದ ಕಾಳಜಿಯ ಬಗ್ಗೆ ನಿರ್ಲಕ್ಷ್ಯ ಬೇಡ- ಎಚ್ಚರಿಕೆ ಇರಲಿ

Share

ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸುವುದು ಮುಖ್ಯ ಎಂದು ಆರೋಗ್ಯ ತಜ್ಞರ ಆಭಿಪ್ರಾಯ. ಯಾಕೆಂದರೆ ಹೃದಯ ನೋವು ಬಂದರೆ ಆದು ಚಳಿಗಾಲದಲ್ಲಿ ಸರ್ವೇ ಸಾಮಾನ್ಯ ಎಂದು ಸುಮ್ಮನಾಗಬೇಡಿ. ಏಕೆಂದರೆ ಇದು ಹೃದಯಾಘಾತದ ಸಂದೇಶವೂ ಆಗಿರಬಹುದು. ಹಾಗೆಂದು ಎಲ್ಲದಕ್ಕೂ ಇದು ಹೃದಯದ ಸಮಸ್ಯೆ ಎಂದು ಗಡಿಬಿಡಿಯೂ ಆಗಬೇಡಿ. ಎಚ್ಚರಿಕೆ ಇರುವುದು ಉತ್ತಮ ಅಷ್ಟೇ.

ಬೇರೆ ಸಮಯಕ್ಕೆ ಹೋಲಿಸಿದರೆ ಚಳಿಗಾಲದಲ್ಲಿ ದೇಹವು ತನ್ನ ತಾಪಮಾನವನ್ನು ಕಾಪಾಡಿಕೊಳ್ಳಲು ರಕ್ತನಾಳಗಳನ್ನು ಸಂಕೋಚನಗೊಳಿಸುತ್ತದೆ. ಇದು ರಕ್ತದೊತ್ತಡವನ್ನು ಹೆಚ್ಚಿಸಿ, ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ.

ಈ ಹೃದಯ ಸಂಬಂಧಿ ಕಾಯಿಲೆಗಳು ಬರಲು ಮುಖ್ಯ ಕಾರಣವೆಂದರೆ ಚಳಿಗಾಲದಲ್ಲಿ ಸೂರ್ಯನ ಬೆಳಕು ಕಡಿಮೆ ಇರುವುದರ ಜೊತೆಗೆ, ಜಡಜೀವನಶೈಲಿ ವ್ಯಾಯಾಮದ ಕೊರತೆ ಮತ್ತು ಅನಾರೋಗ್ಯ ಆಹಾರ ಪದ್ಧತಿಯನ್ನು ಹೆಚ್ಚಾಗಿ ಅನುಸರಿಸುವುದರಿಂದ ಹೃದಯಕ್ಕೆ ಸಂಬಂಧಪಟ್ಟ ಆರೋಗ್ಯ ಸಮಸ್ಯೆಗಳು ಕಾಣುತ್ತದೆ. ಕೆಲವರ ಪ್ರಕಾರ ಹೃದಯಘಾತಗಳು ಆಗುವ ಮುನ್ನ ಎದೆಯಲ್ಲಿ ಅಹಿತಕರ ಅನಿಸುವುದು ಅಥವಾ ಎದೆಯಲ್ಲಿ ಆಗಾಗ ನೋವು ಬಂದು ಹೋಗುವುದು, ಉಸಿರಾಟದಲ್ಲಿ ತೊಂದರೆ, ಚಳಿಗಾಲದಲ್ಲಿಯೂ ಕೂಡ ತುಂಬಾನೇ ಬೆವರರುವುದು, ಆಗಾಗ ವಾಕರಿಕೆ ಬರುವುದು, ತಲೆನೋವು, ಕುತ್ತಿಗೆ ನೋವು ಇವೆಲ್ಲ ಲಕ್ಷಣಗಳು ಕಂಡುಬಂದರೆ ಹೃದಯಾಘತ ಎಂದು. ಈ ಮಾತು ಎಲ್ಲ ಸಮಯದಲ್ಲಿ ನಂಬಲು ಸಾಧ್ಯವಿಲ್ಲ. ಏಕೆಂದರೆ ಕೆಲವರಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ. ಬದಲಾಗಿ, ಕೆಲವರಲ್ಲಿ..

  • ಎದೆ ನೋವು ಯಾವಾಗಲೂ ಎದೆ ಭಾರ, ಎದೆ ಉರಿ, ಒತ್ತಡ ಅಥವಾ ಬಿಗಿತದ ಭಾವನೆ ಕಾಣಿಸಿಕೊಳ್ಳುತ್ತದೆ.
  • ಮೆಟ್ಟಿಲುಗಳನ್ನು ಹತ್ತುವಾಗ ಅಥವಾ ವೇಗವಾಗಿ ನಡೆಯುವಾಗ ಸ್ವಲ್ಪ ಉಸಿರಾಟದ ತೊಂದರೆ ಸಾಮಾನ್ಯವಾಘಿ ಕಂಡುಬರುತ್ತದೆ. ಆದರೆ ಇದು ದಿನ ದಿನೇ ಹೆಚ್ಚುತಿದ್ದರೆ ಅಪಾಯ.
  • ಚಳಿಗಾಲದಲ್ಲಿ ಸ್ವಲ್ಪ ಆಲಸ್ಯ ಅನುಭವಿಸುವುದು ಸಹಜ, ಆದರೆ ಸಣ್ಣ ಚಟುವಟಿಕೆಗಳು ಸಹ ನಿಮ್ಮನ್ನು ಆಯಾಸಗೊಳಿಸಿದರೆ, ಅದು ಅಪಾಯ. ಹೃದಯ ವೈಫಲ್ಯದ ಆರಂಭಿಕ ಲಕ್ಷಣವೂ ಆಗಿರಬಹುದು.
  • ಕಾಲುಗಳಲ್ಲಿ ಊತ ಕಾಣಿಸಿಕೊಳ್ಳಲು ಪ್ರಾರಂಭಿಸುತ್ತದೆ. ಇದು ಬಹುತೇಕ ಜನರು ಕಡೆಗಣಿಸುತ್ತಾರೆ. ಏಕೆಂದರೆ ಚಳಿಗಾಲದಲ್ಲಿ ಕಡಿಮೆ ನೀರು ಕುಡಿಯುವುದರಿಂದ ಕಾಲುಗಳು ಊತವನ್ನು ಕಾಣಿಸುವು ಸಾಮಾನ್ಯ ಎಂದು. ಆದರೆ ಇವೆಲ್ಲವೂ ಹೃದಯ ಸಮಸ್ಯೆಗಳ ಲಕ್ಷಣಗಳಾಗಿವೆ.
  • ಚಳಿಗಾಲದಲ್ಲಿ ಹೃದಯದ ಮೇಲಿನ ಒತ್ತಡ ಸ್ವಾಭಾವಿಕವಾಗ ಹೆಚ್ಚಾಗುತ್ತದೆ. ಆದ್ದರಿಂದ ಈ ಮೇಲಿನ ಲಕ್ಷಣಗಳು ಕಂಡುಬಂದರೆ ವೈದ್ಯರ ಬೇಟಿ ಮಾಡುವುದು ಉತ್ತಮ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

8 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

8 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

1 day ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago