ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸುವುದು ಮುಖ್ಯ ಎಂದು ಆರೋಗ್ಯ ತಜ್ಞರ ಆಭಿಪ್ರಾಯ. ಯಾಕೆಂದರೆ ಹೃದಯ ನೋವು ಬಂದರೆ ಆದು ಚಳಿಗಾಲದಲ್ಲಿ ಸರ್ವೇ ಸಾಮಾನ್ಯ ಎಂದು ಸುಮ್ಮನಾಗಬೇಡಿ. ಏಕೆಂದರೆ ಇದು ಹೃದಯಾಘಾತದ ಸಂದೇಶವೂ ಆಗಿರಬಹುದು. ಹಾಗೆಂದು ಎಲ್ಲದಕ್ಕೂ ಇದು ಹೃದಯದ ಸಮಸ್ಯೆ ಎಂದು ಗಡಿಬಿಡಿಯೂ ಆಗಬೇಡಿ. ಎಚ್ಚರಿಕೆ ಇರುವುದು ಉತ್ತಮ ಅಷ್ಟೇ.
ಬೇರೆ ಸಮಯಕ್ಕೆ ಹೋಲಿಸಿದರೆ ಚಳಿಗಾಲದಲ್ಲಿ ದೇಹವು ತನ್ನ ತಾಪಮಾನವನ್ನು ಕಾಪಾಡಿಕೊಳ್ಳಲು ರಕ್ತನಾಳಗಳನ್ನು ಸಂಕೋಚನಗೊಳಿಸುತ್ತದೆ. ಇದು ರಕ್ತದೊತ್ತಡವನ್ನು ಹೆಚ್ಚಿಸಿ, ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ.
ಈ ಹೃದಯ ಸಂಬಂಧಿ ಕಾಯಿಲೆಗಳು ಬರಲು ಮುಖ್ಯ ಕಾರಣವೆಂದರೆ ಚಳಿಗಾಲದಲ್ಲಿ ಸೂರ್ಯನ ಬೆಳಕು ಕಡಿಮೆ ಇರುವುದರ ಜೊತೆಗೆ, ಜಡಜೀವನಶೈಲಿ ವ್ಯಾಯಾಮದ ಕೊರತೆ ಮತ್ತು ಅನಾರೋಗ್ಯ ಆಹಾರ ಪದ್ಧತಿಯನ್ನು ಹೆಚ್ಚಾಗಿ ಅನುಸರಿಸುವುದರಿಂದ ಹೃದಯಕ್ಕೆ ಸಂಬಂಧಪಟ್ಟ ಆರೋಗ್ಯ ಸಮಸ್ಯೆಗಳು ಕಾಣುತ್ತದೆ. ಕೆಲವರ ಪ್ರಕಾರ ಹೃದಯಘಾತಗಳು ಆಗುವ ಮುನ್ನ ಎದೆಯಲ್ಲಿ ಅಹಿತಕರ ಅನಿಸುವುದು ಅಥವಾ ಎದೆಯಲ್ಲಿ ಆಗಾಗ ನೋವು ಬಂದು ಹೋಗುವುದು, ಉಸಿರಾಟದಲ್ಲಿ ತೊಂದರೆ, ಚಳಿಗಾಲದಲ್ಲಿಯೂ ಕೂಡ ತುಂಬಾನೇ ಬೆವರರುವುದು, ಆಗಾಗ ವಾಕರಿಕೆ ಬರುವುದು, ತಲೆನೋವು, ಕುತ್ತಿಗೆ ನೋವು ಇವೆಲ್ಲ ಲಕ್ಷಣಗಳು ಕಂಡುಬಂದರೆ ಹೃದಯಾಘತ ಎಂದು. ಈ ಮಾತು ಎಲ್ಲ ಸಮಯದಲ್ಲಿ ನಂಬಲು ಸಾಧ್ಯವಿಲ್ಲ. ಏಕೆಂದರೆ ಕೆಲವರಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ. ಬದಲಾಗಿ, ಕೆಲವರಲ್ಲಿ..
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…