Advertisement
Opinion

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ | ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ |

Share

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ ನೀರಿಲ್ಲ ಎಂದು ತಲೆಮೇಲೆ ಮೇಲ ಕೈ ಹೊತ್ತು ಕುಳಿತುಕೊಳ್ಳುವ ಮಂದಿ ಅದಕ್ಕೆ ಬೇಕಾದ ಮುಂಜಾಗೃತ ಕ್ರಮಗಳನ್ನು(Precaution) ತೆಗೆದುಕೊಳ್ಳುವುದಿಲ್ಲ. ಪ್ರತಿ ವರ್ಷ ಬೀಳುವ ಮಳೆಯ ನೀರನ್ನು(Rain water) ಹಿಡಿದಿಡಿಯುವ ಕ್ರಮಗಳನ್ನು ಕೈಗೊಂಡರೆ ಈ ಯಾವ ಸಮಸ್ಯೆಗಳು ಎದುರಾಗುವುದಿಲ್ಲ.

ನಗರಗಳೆಲ್ಲ ಕಾಂಕ್ರೀಟ್‌ ಮಯವಾಗಿ ಮಳೆ ನೀರು ಅಂತರ್ಜಲ(Underground water) ಸೇರಲು ಯಾವ ಮಾರ್ಗಗಳು ಇಲ್ಲ. ನೆಲಕ್ಕೆ ಬಿದ್ದ ನೀರೆಲ್ಲಾ ಸುಮ್ಮನೆ ಹರಿದು ಚರಂಡಿ(Drainage) ಸೇರುತ್ತದೆ. ಮಳೆ ಕೊಯ್ಲು ಮುಖ್ಯವಾದ ಕ್ರಮ. ಆದರೆ ಅದನ್ನು ಅನುಸರಿಸುವವರು ಕೇವಲ ಬೆರಳೆಣೀಕೆ ಮಂದಿ ಮಾತ್ರ. ಅದೇ ರೀತಿ ಜಮೀನುಗಳಲ್ಲಿ ಮಳೆ ನೀರನ್ನು ಹಿಡಿದಿಡುಯುವ ಕಾರ್ಯವನ್ನು ಮಾಡಿದರೆ ರೈತರಿಗೆ(Farmer) ಬರಗಾಲದಂತ ಸಮಸ್ಯೆಗಳಿಂದ ಅರ್ದದಷ್ಟು ತಪ್ಪಿಸಿಕೊಳ್ಳಬಹುದು. ಈ ಬಗ್ಗೆ  ಡಾ. ಎಂ. ಬಿ. ಪಟ್ಟಣಶೆಟ್ಟಿ, ವಿಜಯಪುರ ಒಂದೊಳ್ಳೆ ವಿವರವನ್ನು ನೀಡುತ್ತಾರೆ.

ಒಂದು ಮಿಲಿ ಮೀಟರ್ (mm) ಮಳೆಯಾದರೆ, ಒಂದು ಎಕರೆ ಪ್ರದೇಶದಲ್ಲಿ ಸುಮಾರು 4,000 ಲೀಟರ್ ನೀರು ಬಂದಂತಾಯ್ತು (ಒಂದು ಎಕರೆ ಅಂದರೆ 4000 ಚದುರ ಮೀಟರ್). ನಮ್ಮ ವಿಜಯಪುರ ಜಿಲ್ಲೆಯ ಸರಾಸರಿ ವಾರ್ಷಿಕ ಮಳೆ ಪ್ರಮಾಣ 570 mm, ಅಂದರೆ, ಒಂದು ಎಕರೆ ಪ್ರದೇಶದಲ್ಲಿ ಸುಮಾರು 22,80,000 ಲೀಟರ್ ನೀರು ಮಳೆಯಿಂದ ದೊರೆಯತ್ತದೆ.

ಆದರೆ, ಸರಾಸರಿ ಸುಮಾರು ಶೇಕಡಾ 50 ರಷ್ಟು ನೀರು, ಸರಿಯಾದ ಮಣ್ಣು & ನೀರಿನ ಸಂರಕ್ಷಣಾ ಕ್ರಮಗಳಿಲ್ಲದ ಕಾರಣ ಜಮೀನ ಹೊರಗಡೆ ಹರಿದುಹೋಗುತ್ತದೆ. ಅದರ ಜೊತೆಗೆ ಅಪಾರ ಪ್ರಮಾಣದಲ್ಲಿ ಫಲವತ್ತಾದ ಮಣ್ಣೂ ಸಹ ಕೊಚ್ಚಿಕೊಂಡು ಹೋಗಿ, ಕಾಲಕ್ರಮೇಣ ಭೂಮಿ ಬರಡಾಗುತ್ತದೆ. ಶೇಕಡಾ 25 ರಷ್ಟು ನೀರು ಆವಿಯಾಗಿ ಹೋಗುತ್ತದೆ. ಇನ್ನು ನಮ್ಮ ಬೆಳೆಗಳಿಗೆ ಮತ್ತು ಅಂತರಜಲ ಮರುಪೂರಣಕ್ಕೆ ದೊರೆಯುವದು ಒಟ್ಟು ಬಿದ್ದ ಮಳೆಯಲ್ಲಿ ಕೇವಲ ಶೇಕಡಾ 25 ರಷ್ಟು ಮಾತ್ರ. ಆದ್ದರಿಂದಲೇ ಅಂತರಜಲದ ಮಟ್ಟ ದಿನೆದಿನೇ ಕುಸಿಯುತ್ತಿರುವುದು ಮತ್ತು ಬೋರವೆಲ್ ಗಳು & ಬಾವಿಗಳು ಒಣಗುತ್ತಿರುವುದು.

ಬಿದ್ದ ಮಳೆನೀರನ್ನು ಅಲ್ಲಿಯೇ ಹೆಚ್ಚಿನ ಪ್ರಮಾಣದಲ್ಲಿ ಹಿಡಿದಿಟ್ಟುಕೊಳ್ಳುವದು ಬಹಳ ಅವಶ್ಯಕ. ಬಿದ್ದ ಮಳೆಯಲ್ಲೇ ನಾವು ಕೃಷಿ ಮಾಡುವದು ಅನಿವಾರ್ಯ. ಆದ್ದರಿಂದ, ಮಣ್ಣು ಮತ್ತು ನೀರಿನ ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳುವದು ಅತ್ಯವಶ್ಯಕವಾಗಿದೆ. (ಮೇಲೆ ತಿಳಿಸಿದ ಪ್ರಮಾಣಗಳು ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಸ್ವಲ್ಪ ಹೆಚ್ಚುಕಡಿಮೆ ಆಗಬಹುದು).

ಬರಹ :
ಡಾ. ಎಂ. ಬಿ. ಪಟ್ಟಣಶೆಟ್ಟಿ
, ವಿಜಯಪುರ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

4 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

5 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

14 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

2 days ago