ಪ್ರವಾಸಿಗರೇ, ಯಾತ್ರಿಕರೇ ಎಚ್ಚರ ಇರಲಿ. ಕುಕ್ಕೆ ಸುಬ್ರಹ್ಮಣ್ಯದ ಆಸುಪಾಸು ಹಾಗೂ ಕುಮಾರಧಾರಾ ನದಿಗೆ ತ್ಯಾಜ್ಯ, ಪ್ಲಾಸ್ಟಿಕ್ ಎಸೆದರೆ ದಂಡ ಖಚಿತ. ಕೆಲವು ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿಗೆ ತ್ಯಾಜ್ಯ ಎಸೆದು ತೆರಳಿದ ಪ್ರವಾಸಿಗರನ್ನು ಪತ್ತೆ ಹಚ್ಚಿ ಬೆಂಗಳೂರಿನಿಂದಲೇ ದಂಡ ಪಾವತಿ ಮಾಡಿಸಿರುವ ಘಟನೆ ನಡೆದಿದೆ.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದಿದ್ದ ಯಾತ್ರಾರ್ಥಿಗಳು ತೀರ್ಥಕ್ಷೇತ್ರ ಭೇಟಿ ಮುಗಿಸಿ ವಾಪಾಸ್ ಬೆಳಗ್ಗೆ ಕಾರಿನಲ್ಲಿ ಮರಳಿ ಹೋಗುವಾಗ ತ್ಯಾಜ್ಯದ ಕಟ್ಟನ್ನು ನದಿಗೆ ಎಸೆದು ಹೋಗಿದ್ದರು. ಇದನ್ನು ಗಮನಿಸುತ್ತಿದ್ದ ಸ್ಥಳೀಯರು ಮೊಬೈಲ್ನಲ್ಲಿ ಚಿತ್ರೀಕರಿಸಿ ಪಂಚಾಯತ್ಗೆ ದೂರು ಸಲ್ಲಿಸಿದ್ದರು. ಪಂಚಾಯತ್ ಅಧಿಕಾರಿಗಳು ವೀಡಿಯೋವನ್ನು ಪೊಲೀಸರಿಗೆ ಹಸ್ತಾಂತರಿಸಿದ್ದು, ಅವರು ವಾಹನ ನೋಂದಣಿ ಸಂಖ್ಯೆಯ ಆಧಾರದಲ್ಲಿ ವಾಹನದ ಮಾಲಕರನ್ನು ಪತ್ತೆಹಚ್ಚಿದರು. ವಾಹನವು ಬೆಂಗಳೂರಿನ ಮುರಳಿ ಎಂಬವರಿಗೆ ಸೇರಿತ್ತು. ಪಂಚಾಯತ್ನಿಂದ ಅವರನ್ನು ಸಂಪರ್ಕಿಸಿ 5,000 ರೂ. ದಂಡ ಪಾವತಿಸುವಂತೆ ಸೂಚಿಸಿತು. ಮುರಳಿ ಅವರು ಕ್ಷಮೆ ಯಾಚಿಸಿದ ಬಳಿಕ ದಂಡದ ಮೊತ್ತವನ್ನು 2,000 ರೂ.ಗೆ ಇಳಿಸಲಾಯಿತು. ಬಳಿಕ ಅವರು ಆನ್ಲೈನ್ ಮೂಲಕ ದಂಡ ಪಾವತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…