Advertisement
ಅಂಬಿಕಾ ವಿದ್ಯಾಲಯ

ಸಮಯ ವ್ಯರ್ಥ ಮಾಡದೆ ಅಧ್ಯಯನಶೀಲರಾಗಬೇಕು

Share

ಪ್ರತಿಯೊಬ್ಬ ಮನುಷ್ಯನೂ ಸಮಯವನ್ನು ವ್ಯರ್ಥ ಮಾಡದೆ ಅಧ್ಯಯನಶೀಲನಾಗಬೇಕು. ಚಿನ್ನವಾದರೂ ಅದನ್ನು ಸಂಸ್ಕರಿಸಿದಾಗ ಮಾತ್ರ ಅದು ಆಭರಣವಾಗುತ್ತದೆ. ಹಾಗೆಯೇ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಕೊಟ್ಟರೆ ಮಾತ್ರ ಸುಸಂಸ್ಕೃತರಾಗುತ್ತಾರೆ ಎಂದು ಮಿತ್ತೂರಿನ ವೇದಮೂರ್ತಿ ತಿರುಮಲೇಶ್ವರ ಭಟ್ ಇವರು ಹೇಳಿದರು.

ಅವರು ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯಲ್ಲಿ ಬುಧವಾರ ‘ವರ್ಣಿಕ ಮತ್ತು ಗಣಿತ’ ಕಾರ್ಯಕ್ರಮವನ್ನು ಉದ್ಘಾಟಿಸಿ, ವೇದ ಗಣಿತದ ಪುಸ್ತಕವನ್ನು ಅನಾವರಣಗೊಳಿಸಿ ಮಾತನಾಡಿದರು.

ಅತಿಥಿಯಾಗಿ ಆಗಮಿಸಿದ್ದ ವಿಶ್ರಾಂತ ಮುಖ್ಯೋಪಾಧ್ಯಾಯಿನಿ ರೂಪಕಲಾ ಮಾತನಾಡಿ ಹಳೆ ಬೇರು ಹೊಸ ಚಿಗುರು ಎಂಬ ಕವಿವಾಣಿಯಂತೆ ಆಧುನಿಕ ಜ್ಞಾನ ಎಷ್ಟೇ ಬೆಳೆದರೂ ಪುರಾತನ ಜ್ಞಾನವನ್ನು ಅಡಿಪಾಯವಾಗಿ ಬಳಸಬೇಕು. ಸರಳ ಸೂತ್ರಗಳ ಮೂಲಕ ಗಣಿತ ಅಧ್ಯಯನ ಮಾಡುವ ಸುಲಭ ವಿಧಾನವನ್ನು ನಮಗೆಲ್ಲರಿಗೂ ಪರಿಚಯಿಸಿಕೊಟ್ಟವರು ಶ್ರೀ ಭಾರತೀ ಕೃಷ್ಣತೀರ್ಥರು. ಅದೇ ಸೂತ್ರಗಳ ಮುಖಾಂತರ ಸುಲಭವಾಗಿ ಗಣಿತದ ಸವಾಲುಗಳನ್ನು ಪರಿಹರಿಸಬಹುದು ಎಂದು ತಿಳಿಸಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಕೈಬರಹವು ಮುಖದ ಕನ್ನಡಿ ಇದ್ದಂತೆ. ಹಾಗಾಗಿ ಉತ್ತಮ ಕೈ ಬರೆಹವು ಒಬ್ಬ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿಗೆ ಸಹಾಯಕವಾಗುತ್ತದೆ ಎಂದು ನುಡಿದರು.

ಶಾಲಾ ಪ್ರಾಂಶುಪಾಲೆ ಮಾಲತಿ ಡಿ ಭಟ್ ಪ್ರಾಸ್ತವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿಗಳಾದ ಸುಧನ್ವಾ.ಕೆ ಸ್ವಾಗತಿಸಿ, ಸಾನ್ವಿ ಜಿ. ವಂದಿಸಿದರು. ಯಶ್ವೀ ಭುಟ್ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

19 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

20 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago