Advertisement
ಅಂಬಿಕಾ ವಿದ್ಯಾಲಯ

ಸಮಯ ವ್ಯರ್ಥ ಮಾಡದೆ ಅಧ್ಯಯನಶೀಲರಾಗಬೇಕು

Share

ಪ್ರತಿಯೊಬ್ಬ ಮನುಷ್ಯನೂ ಸಮಯವನ್ನು ವ್ಯರ್ಥ ಮಾಡದೆ ಅಧ್ಯಯನಶೀಲನಾಗಬೇಕು. ಚಿನ್ನವಾದರೂ ಅದನ್ನು ಸಂಸ್ಕರಿಸಿದಾಗ ಮಾತ್ರ ಅದು ಆಭರಣವಾಗುತ್ತದೆ. ಹಾಗೆಯೇ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಕೊಟ್ಟರೆ ಮಾತ್ರ ಸುಸಂಸ್ಕೃತರಾಗುತ್ತಾರೆ ಎಂದು ಮಿತ್ತೂರಿನ ವೇದಮೂರ್ತಿ ತಿರುಮಲೇಶ್ವರ ಭಟ್ ಇವರು ಹೇಳಿದರು.

ಅವರು ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯಲ್ಲಿ ಬುಧವಾರ ‘ವರ್ಣಿಕ ಮತ್ತು ಗಣಿತ’ ಕಾರ್ಯಕ್ರಮವನ್ನು ಉದ್ಘಾಟಿಸಿ, ವೇದ ಗಣಿತದ ಪುಸ್ತಕವನ್ನು ಅನಾವರಣಗೊಳಿಸಿ ಮಾತನಾಡಿದರು.

ಅತಿಥಿಯಾಗಿ ಆಗಮಿಸಿದ್ದ ವಿಶ್ರಾಂತ ಮುಖ್ಯೋಪಾಧ್ಯಾಯಿನಿ ರೂಪಕಲಾ ಮಾತನಾಡಿ ಹಳೆ ಬೇರು ಹೊಸ ಚಿಗುರು ಎಂಬ ಕವಿವಾಣಿಯಂತೆ ಆಧುನಿಕ ಜ್ಞಾನ ಎಷ್ಟೇ ಬೆಳೆದರೂ ಪುರಾತನ ಜ್ಞಾನವನ್ನು ಅಡಿಪಾಯವಾಗಿ ಬಳಸಬೇಕು. ಸರಳ ಸೂತ್ರಗಳ ಮೂಲಕ ಗಣಿತ ಅಧ್ಯಯನ ಮಾಡುವ ಸುಲಭ ವಿಧಾನವನ್ನು ನಮಗೆಲ್ಲರಿಗೂ ಪರಿಚಯಿಸಿಕೊಟ್ಟವರು ಶ್ರೀ ಭಾರತೀ ಕೃಷ್ಣತೀರ್ಥರು. ಅದೇ ಸೂತ್ರಗಳ ಮುಖಾಂತರ ಸುಲಭವಾಗಿ ಗಣಿತದ ಸವಾಲುಗಳನ್ನು ಪರಿಹರಿಸಬಹುದು ಎಂದು ತಿಳಿಸಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಕೈಬರಹವು ಮುಖದ ಕನ್ನಡಿ ಇದ್ದಂತೆ. ಹಾಗಾಗಿ ಉತ್ತಮ ಕೈ ಬರೆಹವು ಒಬ್ಬ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿಗೆ ಸಹಾಯಕವಾಗುತ್ತದೆ ಎಂದು ನುಡಿದರು.

ಶಾಲಾ ಪ್ರಾಂಶುಪಾಲೆ ಮಾಲತಿ ಡಿ ಭಟ್ ಪ್ರಾಸ್ತವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿಗಳಾದ ಸುಧನ್ವಾ.ಕೆ ಸ್ವಾಗತಿಸಿ, ಸಾನ್ವಿ ಜಿ. ವಂದಿಸಿದರು. ಯಶ್ವೀ ಭುಟ್ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

8 hours ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

9 hours ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

17 hours ago

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

22 hours ago

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ

ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್‌ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…

22 hours ago

ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…

23 hours ago