ಮಿತ್ತೂರಿನ ವೇದಮೂರ್ತಿ ತಿರುಮಲೇಶ್ವರ ಭಟ್ ವೇದ ಗಣಿತದ ಪುಸ್ತಕವನ್ನು ಅನಾವರಣಗೊಳಿಸಿದರು.
ಪ್ರತಿಯೊಬ್ಬ ಮನುಷ್ಯನೂ ಸಮಯವನ್ನು ವ್ಯರ್ಥ ಮಾಡದೆ ಅಧ್ಯಯನಶೀಲನಾಗಬೇಕು. ಚಿನ್ನವಾದರೂ ಅದನ್ನು ಸಂಸ್ಕರಿಸಿದಾಗ ಮಾತ್ರ ಅದು ಆಭರಣವಾಗುತ್ತದೆ. ಹಾಗೆಯೇ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಕೊಟ್ಟರೆ ಮಾತ್ರ ಸುಸಂಸ್ಕೃತರಾಗುತ್ತಾರೆ ಎಂದು ಮಿತ್ತೂರಿನ ವೇದಮೂರ್ತಿ ತಿರುಮಲೇಶ್ವರ ಭಟ್ ಇವರು ಹೇಳಿದರು.
ಅವರು ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಬುಧವಾರ ‘ವರ್ಣಿಕ ಮತ್ತು ಗಣಿತ’ ಕಾರ್ಯಕ್ರಮವನ್ನು ಉದ್ಘಾಟಿಸಿ, ವೇದ ಗಣಿತದ ಪುಸ್ತಕವನ್ನು ಅನಾವರಣಗೊಳಿಸಿ ಮಾತನಾಡಿದರು.
ಅತಿಥಿಯಾಗಿ ಆಗಮಿಸಿದ್ದ ವಿಶ್ರಾಂತ ಮುಖ್ಯೋಪಾಧ್ಯಾಯಿನಿ ರೂಪಕಲಾ ಮಾತನಾಡಿ ಹಳೆ ಬೇರು ಹೊಸ ಚಿಗುರು ಎಂಬ ಕವಿವಾಣಿಯಂತೆ ಆಧುನಿಕ ಜ್ಞಾನ ಎಷ್ಟೇ ಬೆಳೆದರೂ ಪುರಾತನ ಜ್ಞಾನವನ್ನು ಅಡಿಪಾಯವಾಗಿ ಬಳಸಬೇಕು. ಸರಳ ಸೂತ್ರಗಳ ಮೂಲಕ ಗಣಿತ ಅಧ್ಯಯನ ಮಾಡುವ ಸುಲಭ ವಿಧಾನವನ್ನು ನಮಗೆಲ್ಲರಿಗೂ ಪರಿಚಯಿಸಿಕೊಟ್ಟವರು ಶ್ರೀ ಭಾರತೀ ಕೃಷ್ಣತೀರ್ಥರು. ಅದೇ ಸೂತ್ರಗಳ ಮುಖಾಂತರ ಸುಲಭವಾಗಿ ಗಣಿತದ ಸವಾಲುಗಳನ್ನು ಪರಿಹರಿಸಬಹುದು ಎಂದು ತಿಳಿಸಿಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಕೈಬರಹವು ಮುಖದ ಕನ್ನಡಿ ಇದ್ದಂತೆ. ಹಾಗಾಗಿ ಉತ್ತಮ ಕೈ ಬರೆಹವು ಒಬ್ಬ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿಗೆ ಸಹಾಯಕವಾಗುತ್ತದೆ ಎಂದು ನುಡಿದರು.
ಶಾಲಾ ಪ್ರಾಂಶುಪಾಲೆ ಮಾಲತಿ ಡಿ ಭಟ್ ಪ್ರಾಸ್ತವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿಗಳಾದ ಸುಧನ್ವಾ.ಕೆ ಸ್ವಾಗತಿಸಿ, ಸಾನ್ವಿ ಜಿ. ವಂದಿಸಿದರು. ಯಶ್ವೀ ಭುಟ್ ಕಾರ್ಯಕ್ರಮವನ್ನು ನಿರೂಪಿಸಿದರು.
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…
ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…