Advertisement
MIRROR FOCUS

ರಾಜ್ಯದಲ್ಲಿ ಮಂಕಿ ಪಾಕ್ಸ್ ಆತಂಕ ಬೇಡ | ಮಂಕಿ ಫಾಕ್ಸ್ ತಡೆಗೆ ಅಗತ್ಯ ಕ್ರಮ | ವಿಮಾನ ನಿಲ್ದಾಣ ಸೇರಿ ಹಲವೆಡೆ ಮುನ್ನೆಚ್ಚರಿಕೆ | ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್

Share

ಆಫ್ರಿಕಾ ಖಂಡದಲ್ಲಿ ಮಂಕಿ ಪಾಕ್ಸ್ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯು ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದೆ. ಆದರೂ, ಈ ಸೋಂಕು ಭಾರತದಲ್ಲಿ ಹರಡುವ ಅಪಾಯ ಕಡಿಮೆ. ಹೀಗಾಗಿ ಯಾರೊಬ್ಬರು ಆತಂಕಕ್ಕೆ ಒಳಗಾಗಬಾರದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.…..ಮುಂದೆ ಓದಿ….

ರಾಜ್ಯದಲ್ಲಿ ಮಂಕಿ ಫಾಕ್ಸ್ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಬೆಂಗಳೂರಿನಲ್ಲಿ ಸಭೆ  ನಡೆಸಿದರು. ಸೋಂಕನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ-ಎನ್ಸಿಡಿಸಿ ಇದರ ಹರಡುವಿಕೆ ಅಪಾಯದ ಮೌಲ್ಯಮಾಪನ ನಡೆಸುತ್ತಿದೆ. ಒಂದು ವೇಳೆ ಪ್ರಕರಣಗಳಿದ್ದರೆ ತಕ್ಷಣವೇ ಎಚ್ಚರಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕು ಪರೀಕ್ಷಿಸುವ ಸೌಲಭ್ಯವಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯಲ್ಲಿ 50 ಹಾಸಿಗೆಗಳ ಹಾಗೂ 5 ಐಸಿಯು ಘಟಕಗಳ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಸಚಿವರು ಹೇಳಿದರು. ರಾಜ್ಯದಲ್ಲಿ ಮಂಕಿ ಫಾಕ್ಸ್ ತಡೆಗಟ್ಟಲು ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾಗಿದೆ. ವಿಮಾನ ನಿಲ್ದಾಣ, ಬಂದರು ಸೇರಿದಂತೆ ಮತ್ತಿತರ ಕಡೆ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಜನರಿಗೆ ಈ ಸೋಂಕಿನ ಬಗ್ಗೆ ಭಯ ಬೇಡ ಎಂದು ಹೇಳಿದರು.ದೇಶದಲ್ಲಿ ಇದುವರೆಗೂ ಮಂಕಿ ಫಾಕ್ಸ್ ಕಂಡುಬಂದಿಲ್ಲ. ಒಂದು ವೇಳೆ ಪ್ರಕರಣಗಳು ಕಂಡುಬಂದರೆ ಆರಂಭದ ಹಂತದಲ್ಲೇ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು.

Victoria Hospital in Bangalore is equipped with an infection testing facility. In a proactive step, the hospital has arranged for 50 beds and 5 ICU units, as stated by the Minister of Medical Education, Dr. Sharanprakash Patil.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

4 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

9 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

16 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

17 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

17 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

1 day ago