ಜೀವಂತ ಪ್ರಮಾಣ ಪತ್ರವನ್ನು ಇ ವಿದ್ಯುನ್ಮಾನ ಆಡಳಿತ ಅಡಿಯಲ್ಲಿ ಕೇಂದ್ರೀಕೃತ ವ್ಯವಸ್ಥೆಯ ಮೂಲಕ ಪಿಂಚಣಿದಾರರ ಮನೆ ಬಾಗಿಲಿಗೆ ಒದಗಿಸಲು ಕ್ರಮ ವಹಿಸಲಾಗಿದೆ ಎಂದು ಖಜಾನೆ ಇಲಾಖೆ ಅಪರ ನಿರ್ದೇಶಕಿ ಡಾ.ಭಾಗ್ಯಲಕ್ಷ್ಮಿ ತಿಳಿಸಿದರು.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಖಜಾನೆ ಇಲಾಖೆ ಮತ್ತು ಭಾರತೀಯ ಅಂಚೆ ಇಲಾಖೆಯ ನಡುವೆ ಆಗಿರುವ ಒಪ್ಪಂದದಂತೆ ಜೀವಂತ ಪ್ರಮಾಣ ಪತ್ರವನ್ನು ಇ ವಿದ್ಯುನ್ಮಾನ ಆಡಳಿತ ಅಡಿಯಲ್ಲಿ ಕೇಂದ್ರೀಕೃತ ವ್ಯವಸ್ಥೆಯ ಮೂಲಕ ಪಿಂಚಣಿದಾರರ ಮನೆ ಬಾಗಿಲಿಗೆ ಸೇವೆ ಒದಗಿಸಲು ಕ್ರಮ ವಹಿಸಲಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ 5 ಲಕ್ಷಕ್ಕೂ ಹೆಚ್ಚು ಪಿಂಚಣಿದಾರರಿದ್ದು, ಪ್ರತಿ ವರ್ಷ ನವೆಂಬರ್ ಮತ್ತು ಡಿಸೆಂಬರ್ ತಿಂಗಳುಗಳಲ್ಲಿ ಜೀವಂತ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ.
ಇನ್ನು ಮುಂದೆ ಜೀವಂತ ಪ್ರಮಾಣ ಪತ್ರಗಳನ್ನು ಡಿಜಿಟಲ್ ಆಗಿ ಸಲ್ಲಿಸುವ ವ್ಯವಸ್ಥೆಯನ್ನು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಒದಗಿಸುತ್ತದೆ. ರಾಜ್ಯ ಸರ್ಕಾರದ ಪಿಂಚಣಿದಾರರಿಗೆ ಈ ಸೇವೆ ವಿಸ್ತರಿಸಲು ಖಜಾನೆ ಇಲಾಖೆ ಮತ್ತು ಭಾರತೀಯ ಅಂಚೆ ಇಲಾಖೆ ಸಹಯೋಗಯೊಂದಿಗೆ ಸೌಲಭ್ಯವನ್ನು ಒದಗಿಸಲು ಉದ್ದೇಶಿಸಲಾಗಿದೆ. ಇ ಜೀವಂತ ಪ್ರಮಾಣ ಪತ್ರ ಪಡೆಯಲು ಪಿಂಚಣಿದಾರರು ತಮ್ಮ ಹೆಸರು, ಪಿಪಿಓ ಸಂಖ್ಯೆ, ಬ್ಯಾಂಕು ಖಾತೆಯ ವಿವರ, ವಿಳಾಸ, ಪಿನ್ ಕೋಡ್ ಆಧಾರ್ ಸಂಖ್ಯೆ, ಮೊಬೈಲು ಸಂಖ್ಯೆಯ ವಿವರಗಳನ್ನು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕಿಗೆ ಒದಗಿಸಬೇಕು ಎಂದು ಹೇಳಿದ್ದಾರೆ.
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ…
ಈಗಿನಂತೆ ಎಪ್ರಿಲ್ 26ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…
ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ. ಏಕೆಂದರೆ ಈಗ ಕರ್ಕಾಟಕ…
ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490