ಜೀವಂತ ಪ್ರಮಾಣ ಪತ್ರವನ್ನು ಇ ವಿದ್ಯುನ್ಮಾನ ಆಡಳಿತ ಅಡಿಯಲ್ಲಿ ಕೇಂದ್ರೀಕೃತ ವ್ಯವಸ್ಥೆಯ ಮೂಲಕ ಪಿಂಚಣಿದಾರರ ಮನೆ ಬಾಗಿಲಿಗೆ ಒದಗಿಸಲು ಕ್ರಮ ವಹಿಸಲಾಗಿದೆ ಎಂದು ಖಜಾನೆ ಇಲಾಖೆ ಅಪರ ನಿರ್ದೇಶಕಿ ಡಾ.ಭಾಗ್ಯಲಕ್ಷ್ಮಿ ತಿಳಿಸಿದರು.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಖಜಾನೆ ಇಲಾಖೆ ಮತ್ತು ಭಾರತೀಯ ಅಂಚೆ ಇಲಾಖೆಯ ನಡುವೆ ಆಗಿರುವ ಒಪ್ಪಂದದಂತೆ ಜೀವಂತ ಪ್ರಮಾಣ ಪತ್ರವನ್ನು ಇ ವಿದ್ಯುನ್ಮಾನ ಆಡಳಿತ ಅಡಿಯಲ್ಲಿ ಕೇಂದ್ರೀಕೃತ ವ್ಯವಸ್ಥೆಯ ಮೂಲಕ ಪಿಂಚಣಿದಾರರ ಮನೆ ಬಾಗಿಲಿಗೆ ಸೇವೆ ಒದಗಿಸಲು ಕ್ರಮ ವಹಿಸಲಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ 5 ಲಕ್ಷಕ್ಕೂ ಹೆಚ್ಚು ಪಿಂಚಣಿದಾರರಿದ್ದು, ಪ್ರತಿ ವರ್ಷ ನವೆಂಬರ್ ಮತ್ತು ಡಿಸೆಂಬರ್ ತಿಂಗಳುಗಳಲ್ಲಿ ಜೀವಂತ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ.
ಇನ್ನು ಮುಂದೆ ಜೀವಂತ ಪ್ರಮಾಣ ಪತ್ರಗಳನ್ನು ಡಿಜಿಟಲ್ ಆಗಿ ಸಲ್ಲಿಸುವ ವ್ಯವಸ್ಥೆಯನ್ನು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಒದಗಿಸುತ್ತದೆ. ರಾಜ್ಯ ಸರ್ಕಾರದ ಪಿಂಚಣಿದಾರರಿಗೆ ಈ ಸೇವೆ ವಿಸ್ತರಿಸಲು ಖಜಾನೆ ಇಲಾಖೆ ಮತ್ತು ಭಾರತೀಯ ಅಂಚೆ ಇಲಾಖೆ ಸಹಯೋಗಯೊಂದಿಗೆ ಸೌಲಭ್ಯವನ್ನು ಒದಗಿಸಲು ಉದ್ದೇಶಿಸಲಾಗಿದೆ. ಇ ಜೀವಂತ ಪ್ರಮಾಣ ಪತ್ರ ಪಡೆಯಲು ಪಿಂಚಣಿದಾರರು ತಮ್ಮ ಹೆಸರು, ಪಿಪಿಓ ಸಂಖ್ಯೆ, ಬ್ಯಾಂಕು ಖಾತೆಯ ವಿವರ, ವಿಳಾಸ, ಪಿನ್ ಕೋಡ್ ಆಧಾರ್ ಸಂಖ್ಯೆ, ಮೊಬೈಲು ಸಂಖ್ಯೆಯ ವಿವರಗಳನ್ನು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕಿಗೆ ಒದಗಿಸಬೇಕು ಎಂದು ಹೇಳಿದ್ದಾರೆ.
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…