Advertisement
ಸುದ್ದಿಗಳು

ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಜಯಂತಿ ಭಾರತ ಕಂಡ ಶ್ರೇಷ್ಟ ನಾಯಕ

Share

ಏಪ್ರಿಲ್ 14 ರಂದು ಭಾರತದ ಸಂವಿಧಾನ ಶಿಲ್ಪಿ, ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರಾದ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನ. ಭಾರತೀಯರ ಪವಿತ್ರ ಗ್ರಂಥವಾದ ದೇಶದ ಆತ್ಮವೆಂದೇ ಕರೆಯಬಹುದಾದ ಸಂವಿಧಾನ ರಚನೆಯ ಹಿಂದಿನ ದೊಡ್ಡ ಶಕ್ತಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್.

ಅಂಬೇಡ್ಕರ್ ಅವರ ಬದುಕು, ತತ್ವ, ಆದರ್ಶಗಳು ಭಾರತೀಯರ ಪಾಲಿಗೆ ಸಾರ್ವಕಾಲಿಕ ಸಕಾಲಿಕ ಎನ್ನಬಹುದು. ಸಮಾನತೆ, ಪ್ರಗತಿಯ ಕನಸು ಕಂಡ ಮೇರು ನಾಯಕ. ಇವರ ಆದರ್ಶ ಎಲ್ಲರ ಜೀವನಕ್ಕೆ ದಾರಿ. ಬಾಬಾ ಸಾಹೇಬರ ಚಿಂತೆನೆಗಳು ಇಂದಿಗೂ ಯುವಜನೆತೆಗೆ ಸ್ಫೂರ್ತಿ ನೀಡುತ್ತಲೇ ಇದೆ.

ಅಂಬೇಡ್ಕರ್ ಅವರ ಹುಟ್ಟು, ಬಾಲ್ಯ, ವಿದ್ಯಾಭ್ಯಾಸ: ಡಾ. ಭೀಮರಾವ್ ಅಂಬೇಡ್ಕರ್ ಅವರು ಮಧ್ಯಪ್ರದೇಶದ ಮೋವ್‌ನಲ್ಲಿ 1891 ರ ಏಪ್ರಿಲ್ 14 ರಂದು ಜನಿಸಿದರು. ಅವರು 1908ರಲ್ಲಿ ಎಲ್ಫಿನ್ ಸ್ಟೋನ್ ಹೈಸ್ಕೂಲ್‌ನಿಂದ ಮೆಟ್ರಿಕ್ಯೂಲೇಶನ್ ಪಾಸ್ ಮಾಡಿದರು. ಉನ್ನತ ಶಿಕ್ಷಣವನ್ನು ನ್ಯೂಯಾರ್ಕ್ ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದರು.

1927 ರ ಜೂನ್‌ 8 ರಂದು ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದರು. ಅವರು ತಮ್ಮ ಜೀವನದಲ್ಲಿ ಮುಖ್ಯವಾಗಿ ಹೋರಾಟ ನಡೆಸಿದ್ದು ಜಾತಿ ತಾರತಮ್ಯ ಮತ್ತು ಅಸ್ಪೃಶ್ಯತೆ ವಿರುದ್ಧ. 1920 ರಲ್ಲಿ ಬಿ. ಆರ್. ಅಂಬೇಡ್ಕರ್ ಅವರು ‘ಮೂಕನಾಯಕ’ ಎಂಬ ಪತ್ರಿಕೆಯನ್ನು ಆರಂಭಿಸಿದರು. ಸ್ವತಂತ್ರ ಭಾರತದ ಮೊದಲ ಕಾನೂನು ಸಚಿವರಾಗಿ ನೇಮಕಗೊಂಡಿದ್ದರು. ಅಂಬೇಡ್ಕರ್ ಅವರು ಸಂವಿಧಾನ ರಚನೆಯ ಕರಡು ಸಮಿತಿಯ ಅಧ್ಯಕ್ಷರಾಗಿದ್ದರು. ಭಾರತದ ಬೃಹತ್ ಸಂವಿಧಾನಕ್ಕೆ ಅಪಾರ ಕೊಡುಗೆ, ಶ್ರಮ ಹಾಕಿದ್ದ ಇವರನ್ನು ಭಾರತೀಯ ಸಂವಿಧಾನ ಶಿಲ್ಪಿ ಎಂದೇ ಕರೆಯಲಾಗುತ್ತದೆ.

ಅಂಬೇಡ್ಕರ್ ಅವರು ದೆಹಲಿಯ ತಮ್ಮ ನಿವಾಸದಲ್ಲಿ ಡಿಸೆಂಬರ್ 6, 1956 ರಂದು ತಮ್ಮ 65ನೇ ವಯಸ್ಸಿನಲ್ಲಿ ನಿಧನರಾದರು. 1935 ರಲ್ಲಿ ಯೌಲ್ಲ ಸಮ್ಮೇಳನದಲ್ಲಿ ಅಂಬೇಡ್ಕರ್ ರವರು ತಾನೂ ಹಿಂದು ಧರ್ಮದಲ್ಲಿ ಇರುವುದಿಲ್ಲ, ನಾನು ಹಿಂದುವಾಗಿ ಹುಟ್ಟಿದ್ದು ಅನಿಶ್ಚಿತವಾಗಿ, ಆದರೆ ಹಿಂದುವಾಗಿ ಸಾಯುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. “ಹಿಂದೂ ರಾಜ್ ಸತ್ಯವಾದರೆ, ಅದು ಈ ದೇಶಕ್ಕೆ ದೊಡ್ಡ ವಿಪತ್ತಾಗುವುದರಲ್ಲಿ ಸಂದೇಹವಿಲ್ಲ” ಎಂದು ಹೇಳಿದ್ದರು.

ಅವರು ಬೌದ್ಧ ಧರ್ಮದ ಅನುಯಾಯಿಯಾಗಿದ್ದರು. ಅಂಬೇಡ್ಕರ್ ಅವರಿಗೆ 1990 ರಲ್ಲಿ ಭಾರತ ಸರ್ಕಾರ ಮರಣೋತ್ತರ ‘ಭಾರತ ರತ್ನ’ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

7 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

9 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

15 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

15 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

23 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

23 hours ago