ಏಪ್ರಿಲ್ 14 ರಂದು ಭಾರತದ ಸಂವಿಧಾನ ಶಿಲ್ಪಿ, ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರಾದ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನ. ಭಾರತೀಯರ ಪವಿತ್ರ ಗ್ರಂಥವಾದ ದೇಶದ ಆತ್ಮವೆಂದೇ ಕರೆಯಬಹುದಾದ ಸಂವಿಧಾನ ರಚನೆಯ ಹಿಂದಿನ ದೊಡ್ಡ ಶಕ್ತಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್.
ಅಂಬೇಡ್ಕರ್ ಅವರ ಬದುಕು, ತತ್ವ, ಆದರ್ಶಗಳು ಭಾರತೀಯರ ಪಾಲಿಗೆ ಸಾರ್ವಕಾಲಿಕ ಸಕಾಲಿಕ ಎನ್ನಬಹುದು. ಸಮಾನತೆ, ಪ್ರಗತಿಯ ಕನಸು ಕಂಡ ಮೇರು ನಾಯಕ. ಇವರ ಆದರ್ಶ ಎಲ್ಲರ ಜೀವನಕ್ಕೆ ದಾರಿ. ಬಾಬಾ ಸಾಹೇಬರ ಚಿಂತೆನೆಗಳು ಇಂದಿಗೂ ಯುವಜನೆತೆಗೆ ಸ್ಫೂರ್ತಿ ನೀಡುತ್ತಲೇ ಇದೆ.
ಅಂಬೇಡ್ಕರ್ ಅವರ ಹುಟ್ಟು, ಬಾಲ್ಯ, ವಿದ್ಯಾಭ್ಯಾಸ: ಡಾ. ಭೀಮರಾವ್ ಅಂಬೇಡ್ಕರ್ ಅವರು ಮಧ್ಯಪ್ರದೇಶದ ಮೋವ್ನಲ್ಲಿ 1891 ರ ಏಪ್ರಿಲ್ 14 ರಂದು ಜನಿಸಿದರು. ಅವರು 1908ರಲ್ಲಿ ಎಲ್ಫಿನ್ ಸ್ಟೋನ್ ಹೈಸ್ಕೂಲ್ನಿಂದ ಮೆಟ್ರಿಕ್ಯೂಲೇಶನ್ ಪಾಸ್ ಮಾಡಿದರು. ಉನ್ನತ ಶಿಕ್ಷಣವನ್ನು ನ್ಯೂಯಾರ್ಕ್ ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದರು.
1927 ರ ಜೂನ್ 8 ರಂದು ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದರು. ಅವರು ತಮ್ಮ ಜೀವನದಲ್ಲಿ ಮುಖ್ಯವಾಗಿ ಹೋರಾಟ ನಡೆಸಿದ್ದು ಜಾತಿ ತಾರತಮ್ಯ ಮತ್ತು ಅಸ್ಪೃಶ್ಯತೆ ವಿರುದ್ಧ. 1920 ರಲ್ಲಿ ಬಿ. ಆರ್. ಅಂಬೇಡ್ಕರ್ ಅವರು ‘ಮೂಕನಾಯಕ’ ಎಂಬ ಪತ್ರಿಕೆಯನ್ನು ಆರಂಭಿಸಿದರು. ಸ್ವತಂತ್ರ ಭಾರತದ ಮೊದಲ ಕಾನೂನು ಸಚಿವರಾಗಿ ನೇಮಕಗೊಂಡಿದ್ದರು. ಅಂಬೇಡ್ಕರ್ ಅವರು ಸಂವಿಧಾನ ರಚನೆಯ ಕರಡು ಸಮಿತಿಯ ಅಧ್ಯಕ್ಷರಾಗಿದ್ದರು. ಭಾರತದ ಬೃಹತ್ ಸಂವಿಧಾನಕ್ಕೆ ಅಪಾರ ಕೊಡುಗೆ, ಶ್ರಮ ಹಾಕಿದ್ದ ಇವರನ್ನು ಭಾರತೀಯ ಸಂವಿಧಾನ ಶಿಲ್ಪಿ ಎಂದೇ ಕರೆಯಲಾಗುತ್ತದೆ.
ಅಂಬೇಡ್ಕರ್ ಅವರು ದೆಹಲಿಯ ತಮ್ಮ ನಿವಾಸದಲ್ಲಿ ಡಿಸೆಂಬರ್ 6, 1956 ರಂದು ತಮ್ಮ 65ನೇ ವಯಸ್ಸಿನಲ್ಲಿ ನಿಧನರಾದರು. 1935 ರಲ್ಲಿ ಯೌಲ್ಲ ಸಮ್ಮೇಳನದಲ್ಲಿ ಅಂಬೇಡ್ಕರ್ ರವರು ತಾನೂ ಹಿಂದು ಧರ್ಮದಲ್ಲಿ ಇರುವುದಿಲ್ಲ, ನಾನು ಹಿಂದುವಾಗಿ ಹುಟ್ಟಿದ್ದು ಅನಿಶ್ಚಿತವಾಗಿ, ಆದರೆ ಹಿಂದುವಾಗಿ ಸಾಯುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. “ಹಿಂದೂ ರಾಜ್ ಸತ್ಯವಾದರೆ, ಅದು ಈ ದೇಶಕ್ಕೆ ದೊಡ್ಡ ವಿಪತ್ತಾಗುವುದರಲ್ಲಿ ಸಂದೇಹವಿಲ್ಲ” ಎಂದು ಹೇಳಿದ್ದರು.
ಅವರು ಬೌದ್ಧ ಧರ್ಮದ ಅನುಯಾಯಿಯಾಗಿದ್ದರು. ಅಂಬೇಡ್ಕರ್ ಅವರಿಗೆ 1990 ರಲ್ಲಿ ಭಾರತ ಸರ್ಕಾರ ಮರಣೋತ್ತರ ‘ಭಾರತ ರತ್ನ’ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…