Advertisement
ಸುದ್ದಿಗಳು

ಬಣ್ಣ ಲೋಕದಲ್ಲಿ ಕಾಣಿಸಿಕೊಳ್ಳಲಿರುವ ಡಾ.ವೀರೇಂದ್ರ ಹೆಗ್ಗಡೆ | ಫೋಟೋ ವೈರಲ್

Share

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಚಿತ್ರವೊಂದರಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಎಸ್‌.ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ವೀರ ಕಂಬಳ’ ಸಿನಿಮಾ ಚಿತ್ರೀಕರಣ ಭರದಿಂದ ಸಾಗಿದೆ. ಈ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರು ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ತುಳುನಾಡಿನ ಹೆಮ್ಮೆಯ ಕಂಬಳ ಸ್ಪರ್ಧೆಯನ್ನು ಕೇಂದ್ರವಾಗಿಟ್ಟುಕೊಂಡು ಈ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು, ಹಿಂದಿ ಹಾಗೂ ತುಳು ಭಾಷೆಗಳಲ್ಲಿ ‘ವೀರ ಕಂಬಳ’ ಸಿನಿಮಾ ತೆರೆಗೆ ಬರಲಿದೆ. ಇನ್ನೂ ತುಳು ಭಾಷೆಯಲ್ಲಿ ‘ಬಿರ್ದ್‌ದ ಕಂಬಳ’ ಹೆಸರಿನಲ್ಲಿ ಸಿನಿಮಾ ಮೂಡಿ ಬರ್ತಿದೆ. 7 ವರ್ಷಗಳ ಕಾಲ ಸಂಶೋಧನೆ ನಡೆಸಿ ಸಿನಿಮಾದ ಕಥೆ, ಚಿತ್ರಕಥೆ ಹೆಣೆಯಲಾಗಿದೆ.

“ವೀರ ಕಂಬಳ” ಸಿನಿಮಾಕ್ಕೆ ಅರುಣ್ ರೈ ತೋಡಾರ್ ಬಂಡವಾಳ ಹೂಡುತ್ತಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆ ಬಣ್ಣ ಹಚ್ಚಿ ಚಿತ್ರೀಕರಣದಲ್ಲಿ ಭಾಗಿ ಆಗಿದ್ದಾರೆ. ಅವರು ಮೇಕಪ್ ಹಾಕಿಕೊಳ್ಳುತ್ತಿರುವ ಫೋಟೊ ವೈರಲ್ ಆಗಿದೆ.

ತುಳುನಾಡಿನ ಪ್ರಸಿದ್ಧ ರಂಗಭೂಮಿ ಕಲಾವಿದರ ಜೊತೆಗೆ ಪ್ರಕಾಶ್ ರಾಜ್, ಆರ್ಮುಗ ರವಿಶಂಕರ್‌ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

2 hours ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

1 day ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

1 day ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

2 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

2 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

3 days ago