Advertisement
ಸುದ್ದಿಗಳು

ಬಣ್ಣ ಲೋಕದಲ್ಲಿ ಕಾಣಿಸಿಕೊಳ್ಳಲಿರುವ ಡಾ.ವೀರೇಂದ್ರ ಹೆಗ್ಗಡೆ | ಫೋಟೋ ವೈರಲ್

Share

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಚಿತ್ರವೊಂದರಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಎಸ್‌.ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ವೀರ ಕಂಬಳ’ ಸಿನಿಮಾ ಚಿತ್ರೀಕರಣ ಭರದಿಂದ ಸಾಗಿದೆ. ಈ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರು ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ತುಳುನಾಡಿನ ಹೆಮ್ಮೆಯ ಕಂಬಳ ಸ್ಪರ್ಧೆಯನ್ನು ಕೇಂದ್ರವಾಗಿಟ್ಟುಕೊಂಡು ಈ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು, ಹಿಂದಿ ಹಾಗೂ ತುಳು ಭಾಷೆಗಳಲ್ಲಿ ‘ವೀರ ಕಂಬಳ’ ಸಿನಿಮಾ ತೆರೆಗೆ ಬರಲಿದೆ. ಇನ್ನೂ ತುಳು ಭಾಷೆಯಲ್ಲಿ ‘ಬಿರ್ದ್‌ದ ಕಂಬಳ’ ಹೆಸರಿನಲ್ಲಿ ಸಿನಿಮಾ ಮೂಡಿ ಬರ್ತಿದೆ. 7 ವರ್ಷಗಳ ಕಾಲ ಸಂಶೋಧನೆ ನಡೆಸಿ ಸಿನಿಮಾದ ಕಥೆ, ಚಿತ್ರಕಥೆ ಹೆಣೆಯಲಾಗಿದೆ.

“ವೀರ ಕಂಬಳ” ಸಿನಿಮಾಕ್ಕೆ ಅರುಣ್ ರೈ ತೋಡಾರ್ ಬಂಡವಾಳ ಹೂಡುತ್ತಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆ ಬಣ್ಣ ಹಚ್ಚಿ ಚಿತ್ರೀಕರಣದಲ್ಲಿ ಭಾಗಿ ಆಗಿದ್ದಾರೆ. ಅವರು ಮೇಕಪ್ ಹಾಕಿಕೊಳ್ಳುತ್ತಿರುವ ಫೋಟೊ ವೈರಲ್ ಆಗಿದೆ.

ತುಳುನಾಡಿನ ಪ್ರಸಿದ್ಧ ರಂಗಭೂಮಿ ಕಲಾವಿದರ ಜೊತೆಗೆ ಪ್ರಕಾಶ್ ರಾಜ್, ಆರ್ಮುಗ ರವಿಶಂಕರ್‌ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

5 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

11 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

21 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

1 day ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago