ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಚಿತ್ರವೊಂದರಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಎಸ್.ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ವೀರ ಕಂಬಳ’ ಸಿನಿಮಾ ಚಿತ್ರೀಕರಣ ಭರದಿಂದ ಸಾಗಿದೆ. ಈ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರು ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ತುಳುನಾಡಿನ ಹೆಮ್ಮೆಯ ಕಂಬಳ ಸ್ಪರ್ಧೆಯನ್ನು ಕೇಂದ್ರವಾಗಿಟ್ಟುಕೊಂಡು ಈ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು, ಹಿಂದಿ ಹಾಗೂ ತುಳು ಭಾಷೆಗಳಲ್ಲಿ ‘ವೀರ ಕಂಬಳ’ ಸಿನಿಮಾ ತೆರೆಗೆ ಬರಲಿದೆ. ಇನ್ನೂ ತುಳು ಭಾಷೆಯಲ್ಲಿ ‘ಬಿರ್ದ್ದ ಕಂಬಳ’ ಹೆಸರಿನಲ್ಲಿ ಸಿನಿಮಾ ಮೂಡಿ ಬರ್ತಿದೆ. 7 ವರ್ಷಗಳ ಕಾಲ ಸಂಶೋಧನೆ ನಡೆಸಿ ಸಿನಿಮಾದ ಕಥೆ, ಚಿತ್ರಕಥೆ ಹೆಣೆಯಲಾಗಿದೆ.
“ವೀರ ಕಂಬಳ” ಸಿನಿಮಾಕ್ಕೆ ಅರುಣ್ ರೈ ತೋಡಾರ್ ಬಂಡವಾಳ ಹೂಡುತ್ತಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆ ಬಣ್ಣ ಹಚ್ಚಿ ಚಿತ್ರೀಕರಣದಲ್ಲಿ ಭಾಗಿ ಆಗಿದ್ದಾರೆ. ಅವರು ಮೇಕಪ್ ಹಾಕಿಕೊಳ್ಳುತ್ತಿರುವ ಫೋಟೊ ವೈರಲ್ ಆಗಿದೆ.
ತುಳುನಾಡಿನ ಪ್ರಸಿದ್ಧ ರಂಗಭೂಮಿ ಕಲಾವಿದರ ಜೊತೆಗೆ ಪ್ರಕಾಶ್ ರಾಜ್, ಆರ್ಮುಗ ರವಿಶಂಕರ್ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…