ಡಾ.ಡಿ.ವೀರೇಂದ್ರ ಹೆಗ್ಗಡೆ ರಾಜ್ಯಸಭೆಗೆ ನಾಮನಿರ್ದೇಶನ | ಅಡಿಕೆ ಬೆಳೆಗಾರರಿಗೆ ಸಂದ ಗೌರವ – ಕ್ಯಾಂಪ್ಕೋ ಅಧ್ಯಕ್ಷರಿಂದ ಅಭಿನಂದನೆ |

July 7, 2022
5:35 PM

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗೂ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಕ್ಯಾಂಪ್ಕೋ ಸಂಸ್ಥೆಯ ಹಿರಿಯ ಸದಸ್ಯರೂ ಹಾಗೂ ARDF ಅಧ್ಯಕ್ಷರಾಗಿ ಸಂಸ್ಥೆಯ ಮಾರ್ಗದರ್ಶಕರೂ ಆಗಿರುವ ಡಾ.ಹೆಗ್ಗಡೆ ಅವರುರಾಜ್ಯಸಭೆಗೆ ನಾಮನಿರ್ದೆಶನಗೊಂಡಿರುವುದು ಸಮಸ್ತ ಅಡಿಕೆ ಬೆಳೆಗಾರರಿಗೆ ಸಂತಸ ತಂದಿದೆ ಮತ್ತು ಈ ಗೌರವ  ಎಲ್ಲಾ ಅಡಿಕೆ ಬೆಳೆಗಾರರಿಗೆ ಸಂದಿದೆ ಎಂದು ಕಿಶೋರ್‌ ಕುಮಾರ್‌ ಕೊಡ್ಗಿ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ಪ್ರಧಾನಮಂತ್ರಿಗಳಿಗೆ ಪತ್ರ ಬರೆದು ಅಡಿಕೆ ಆಮದು ತಡೆ ಮತ್ತು ಅಡಿಕೆಗೆ ಕನಿಷ್ಟಆಮದು ಬೆಲೆಯನ್ನು 360 ರೂಪಾಯಿಗೆ ನಿಗದಿಪಡಿಸಬೇಕು ಹಾಗೂ ಅಡಿಕೆ ಬೆಳೆ ಸಂಶೋಧನೆಗೆ ಅನುವು ಮಾಡಿಕೊಡಬೇಕೆಂದು ಆಗ್ರಹಿಸಿದ್ದರು. ಈಗ ರಾಜ್ಯಸಭೆಯಲ್ಲಿ ಅಡಿಕೆ ಬೆಳೆಗಾರರ ಧ್ವನಿಯಾಗಿ ನಮ್ಮ ಕೃಷಿಕರ ಶಕ್ತಿಯಾಗಿ ಡಾ. ಹೆಗ್ಗಡೆಯವರು ಇರುವುದು ನಮಗೆಲ್ಲರಿಗೂ ಹೆಮ್ಮೆ. ಹೀಗಾಗಿ ಸಮಸ್ತ ಕ್ಯಾಂಪ್ಕೋ ಸದಸ್ಯರ ಮತ್ತು ಅಡಿಕೆ ಬೆಳೆಗಾರರ ಪರವಾಗಿ ಅಭಿನಂದನೆ ಸಲ್ಲಿಸುತ್ತಿದ್ದೇವೆ ಎಂದು ಕ್ಯಾಂಪ್ಕೋ ಅಧ್ಯಕ್ಷರು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ
March 6, 2026
4:13 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror