#Arecanut | 32.31 ಕೋಟಿ ರೂಪಾಯಿ ಮೌಲ್ಯದ 371 ಟನ್ ಅಡಿಕೆ ವಶ |

September 11, 2023
8:16 PM
ಮುಂಬಯಿ ಬಂದರಿನಲ್ಲಿ 32.31 ಕೋಟಿ ಮೌಲ್ಯದ 371 ಟನ್ ಅಡಿಕೆಯನ್ನು ಡಿಆರ್‌ಐ ವಶಪಡಿಸಿಕೊಂಡಿದೆ. 

ನವಿ ಮುಂಬೈನ ಜವಾಹರಲಾಲ್ ನೆಹರು ಪೋರ್ಟ್ ನಲ್ಲಿ  ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ)  32.31 ಕೋಟಿ ಮೌಲ್ಯದ 371 ಟನ್ ಅಡಿಕೆಯನ್ನು ವಶಪಡಿಸಿಕೊಂಡಿದೆ.  ಕಳ್ಳಸಾಗಣಿಕೆಯ ಮೂಲಕ ಈ ಅಡಿಕೆ ಮುಂಬಯಿಗೆ ಬಂದಿತ್ತು.

ಕಂಟೈನರ್‌ಗಳಲ್ಲಿ ಕ್ಯಾಲ್ಸಿಯಂ ನೈಟ್ರೇಟ್ ಎಂದು ನಮೂದಾಗಿತ್ತು. ಗುಪ್ತಚರ ಮಾಹಿತಿಯ ಮೇರೆಗೆ ಇಲಾಖಾ ಅಧಿಕಾರಿಗಳು ತಪಾಸಣೆ ನಡೆಸಿದ್ದರು,  ಈ ಸಂದರ್ಭ ತೆರಿಗೆ ತಪ್ಪಿಸಿ , ತಪ್ಪು ಮಾಹಿತಿ ನೀಡಿ ಅಡಿಕೆಯನ್ನು ದೇಶಕ್ಕೆ ಆಮದು ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.14 ಕಂಟೈನರ್‌ಗಳಲ್ಲಿ ಅಡಿಕೆ ಕಳ್ಳಸಾಗಾಣಿಕೆ ಆಗಿತ್ತು

ಕಳೆದ ತಿಂಗಳು ಕೂಡಾ ಡಿಆರ್‌ಐ ಅಕ್ರಮ ಅಡಿಕೆ ಕಳ್ಳಸಾಗಣಿಕೆಯನ್ನು ಪತ್ತೆ ಮಾಡಿತ್ತು. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 50 ಮೆಟ್ರಿಕ್ ಟನ್ ಕಳ್ಳಸಾಗಣೆ ಅಡಿಕೆಗಳನ್ನು ವಶಪಡಿಸಿಕೊಂಡಿದೆ. ಇದು ಸುಮಾರು ₹ 4.43 ಕೋಟಿ ಎಂದು ಅಂದಾಜಿಸಲಾಗಿದೆ. . ದುಬೈ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ ಕ್ಯಾಲ್ಸಿಯಂ ನೈಟ್ರೇಟ್‌ ಮತ್ತು ಜಿಪ್ಸಮ್ ಪೌಡರ್ ಹೆಸರಿನಲ್ಲಿ ಅಡಿಕೆಗಳನ್ನು ಕಳ್ಳಸಾಗಣೆ ಮಾಡಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಾತು ವ್ಯಕ್ತಿತ್ವವನ್ನು ತೋರಿಸುತ್ತದೆ, ಮೌನ ಅದನ್ನು ಎತ್ತುತ್ತದೆ..!
June 21, 2026
3:51 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಎಳೆಯ ಮನಸುಗಳಲ್ಲಿ ಪರಿಸರ ಜಾಗೃತಿ ಮೂಡಿದರೆ ಮಾತ್ರ ಸ್ವಚ್ಛ ಭವಿಷ್ಯ ನಿರ್ಮಾಣ
June 21, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-06-2026 | ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿಕೆ – ಜೂನ್ 26ರಿಂದ ಮಳೆ ಚೇತರಿಕೆಯ ನಿರೀಕ್ಷೆ
June 21, 2026
3:00 PM
by: ಸಾಯಿಶೇಖರ್ ಕರಿಕಳ
ಧರ್ಮಸ್ಥಳದಲ್ಲಿ ಭಕ್ತಸಾಗರ – ರಸ್ತೆಗಳಲ್ಲಿ ವಾಹನ ದಟ್ಟಣೆ
June 21, 2026
2:52 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror