ನವಿ ಮುಂಬೈನ ಜವಾಹರಲಾಲ್ ನೆಹರು ಪೋರ್ಟ್ ನಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) 32.31 ಕೋಟಿ ಮೌಲ್ಯದ 371 ಟನ್ ಅಡಿಕೆಯನ್ನು ವಶಪಡಿಸಿಕೊಂಡಿದೆ. ಕಳ್ಳಸಾಗಣಿಕೆಯ ಮೂಲಕ ಈ ಅಡಿಕೆ ಮುಂಬಯಿಗೆ ಬಂದಿತ್ತು.
ಕಂಟೈನರ್ಗಳಲ್ಲಿ ಕ್ಯಾಲ್ಸಿಯಂ ನೈಟ್ರೇಟ್ ಎಂದು ನಮೂದಾಗಿತ್ತು. ಗುಪ್ತಚರ ಮಾಹಿತಿಯ ಮೇರೆಗೆ ಇಲಾಖಾ ಅಧಿಕಾರಿಗಳು ತಪಾಸಣೆ ನಡೆಸಿದ್ದರು, ಈ ಸಂದರ್ಭ ತೆರಿಗೆ ತಪ್ಪಿಸಿ , ತಪ್ಪು ಮಾಹಿತಿ ನೀಡಿ ಅಡಿಕೆಯನ್ನು ದೇಶಕ್ಕೆ ಆಮದು ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.14 ಕಂಟೈನರ್ಗಳಲ್ಲಿ ಅಡಿಕೆ ಕಳ್ಳಸಾಗಾಣಿಕೆ ಆಗಿತ್ತು
ಕಳೆದ ತಿಂಗಳು ಕೂಡಾ ಡಿಆರ್ಐ ಅಕ್ರಮ ಅಡಿಕೆ ಕಳ್ಳಸಾಗಣಿಕೆಯನ್ನು ಪತ್ತೆ ಮಾಡಿತ್ತು. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 50 ಮೆಟ್ರಿಕ್ ಟನ್ ಕಳ್ಳಸಾಗಣೆ ಅಡಿಕೆಗಳನ್ನು ವಶಪಡಿಸಿಕೊಂಡಿದೆ. ಇದು ಸುಮಾರು ₹ 4.43 ಕೋಟಿ ಎಂದು ಅಂದಾಜಿಸಲಾಗಿದೆ. . ದುಬೈ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ನಿಂದ ಕ್ಯಾಲ್ಸಿಯಂ ನೈಟ್ರೇಟ್ ಮತ್ತು ಜಿಪ್ಸಮ್ ಪೌಡರ್ ಹೆಸರಿನಲ್ಲಿ ಅಡಿಕೆಗಳನ್ನು ಕಳ್ಳಸಾಗಣೆ ಮಾಡಲಾಗಿತ್ತು.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…