ನವಿ ಮುಂಬೈನ ಜವಾಹರಲಾಲ್ ನೆಹರು ಪೋರ್ಟ್ ನಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) 32.31 ಕೋಟಿ ಮೌಲ್ಯದ 371 ಟನ್ ಅಡಿಕೆಯನ್ನು ವಶಪಡಿಸಿಕೊಂಡಿದೆ. ಕಳ್ಳಸಾಗಣಿಕೆಯ ಮೂಲಕ ಈ ಅಡಿಕೆ ಮುಂಬಯಿಗೆ ಬಂದಿತ್ತು.
ಕಂಟೈನರ್ಗಳಲ್ಲಿ ಕ್ಯಾಲ್ಸಿಯಂ ನೈಟ್ರೇಟ್ ಎಂದು ನಮೂದಾಗಿತ್ತು. ಗುಪ್ತಚರ ಮಾಹಿತಿಯ ಮೇರೆಗೆ ಇಲಾಖಾ ಅಧಿಕಾರಿಗಳು ತಪಾಸಣೆ ನಡೆಸಿದ್ದರು, ಈ ಸಂದರ್ಭ ತೆರಿಗೆ ತಪ್ಪಿಸಿ , ತಪ್ಪು ಮಾಹಿತಿ ನೀಡಿ ಅಡಿಕೆಯನ್ನು ದೇಶಕ್ಕೆ ಆಮದು ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.14 ಕಂಟೈನರ್ಗಳಲ್ಲಿ ಅಡಿಕೆ ಕಳ್ಳಸಾಗಾಣಿಕೆ ಆಗಿತ್ತು
ಕಳೆದ ತಿಂಗಳು ಕೂಡಾ ಡಿಆರ್ಐ ಅಕ್ರಮ ಅಡಿಕೆ ಕಳ್ಳಸಾಗಣಿಕೆಯನ್ನು ಪತ್ತೆ ಮಾಡಿತ್ತು. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 50 ಮೆಟ್ರಿಕ್ ಟನ್ ಕಳ್ಳಸಾಗಣೆ ಅಡಿಕೆಗಳನ್ನು ವಶಪಡಿಸಿಕೊಂಡಿದೆ. ಇದು ಸುಮಾರು ₹ 4.43 ಕೋಟಿ ಎಂದು ಅಂದಾಜಿಸಲಾಗಿದೆ. . ದುಬೈ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ನಿಂದ ಕ್ಯಾಲ್ಸಿಯಂ ನೈಟ್ರೇಟ್ ಮತ್ತು ಜಿಪ್ಸಮ್ ಪೌಡರ್ ಹೆಸರಿನಲ್ಲಿ ಅಡಿಕೆಗಳನ್ನು ಕಳ್ಳಸಾಗಣೆ ಮಾಡಲಾಗಿತ್ತು.
ಮಾತು ವ್ಯಕ್ತಿತ್ವದ ಪ್ರತಿಬಿಂಬವಾಗಿದ್ದರೆ, ಮೌನ ಅದರ ಪರಿಪಕ್ವತೆಯ ಸಂಕೇತವಾಗಿದೆ. ಕೃತಜ್ಞತೆ, ಸಂಯಮ ಮತ್ತು…
ಪರಿಸರ ಸಂರಕ್ಷಣೆ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿದಾಗ ಮಾತ್ರ ಹಸಿರು ಭವಿಷ್ಯ ನಿರ್ಮಾಣ…
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಸಾಧಾರಣ ಮಳೆಯ ಮುನ್ಸೂಚನೆ…
ಭಾನುವಾರ ಧರ್ಮಸ್ಥಳದಲ್ಲಿ ಭಕ್ತರ ಸಂಖ್ಯೆ ಹೆಚ್ಚಳ ಕಂಡುಬಂದವು.
ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಬಿ.ವೈ. ವಿಜಯೇಂದ್ರ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆವಿಮೆ…