ನವಿ ಮುಂಬೈನ ಜವಾಹರಲಾಲ್ ನೆಹರು ಪೋರ್ಟ್ ನಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) 32.31 ಕೋಟಿ ಮೌಲ್ಯದ 371 ಟನ್ ಅಡಿಕೆಯನ್ನು ವಶಪಡಿಸಿಕೊಂಡಿದೆ. ಕಳ್ಳಸಾಗಣಿಕೆಯ ಮೂಲಕ ಈ ಅಡಿಕೆ ಮುಂಬಯಿಗೆ ಬಂದಿತ್ತು.
ಕಂಟೈನರ್ಗಳಲ್ಲಿ ಕ್ಯಾಲ್ಸಿಯಂ ನೈಟ್ರೇಟ್ ಎಂದು ನಮೂದಾಗಿತ್ತು. ಗುಪ್ತಚರ ಮಾಹಿತಿಯ ಮೇರೆಗೆ ಇಲಾಖಾ ಅಧಿಕಾರಿಗಳು ತಪಾಸಣೆ ನಡೆಸಿದ್ದರು, ಈ ಸಂದರ್ಭ ತೆರಿಗೆ ತಪ್ಪಿಸಿ , ತಪ್ಪು ಮಾಹಿತಿ ನೀಡಿ ಅಡಿಕೆಯನ್ನು ದೇಶಕ್ಕೆ ಆಮದು ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.14 ಕಂಟೈನರ್ಗಳಲ್ಲಿ ಅಡಿಕೆ ಕಳ್ಳಸಾಗಾಣಿಕೆ ಆಗಿತ್ತು
ಕಳೆದ ತಿಂಗಳು ಕೂಡಾ ಡಿಆರ್ಐ ಅಕ್ರಮ ಅಡಿಕೆ ಕಳ್ಳಸಾಗಣಿಕೆಯನ್ನು ಪತ್ತೆ ಮಾಡಿತ್ತು. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 50 ಮೆಟ್ರಿಕ್ ಟನ್ ಕಳ್ಳಸಾಗಣೆ ಅಡಿಕೆಗಳನ್ನು ವಶಪಡಿಸಿಕೊಂಡಿದೆ. ಇದು ಸುಮಾರು ₹ 4.43 ಕೋಟಿ ಎಂದು ಅಂದಾಜಿಸಲಾಗಿದೆ. . ದುಬೈ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ನಿಂದ ಕ್ಯಾಲ್ಸಿಯಂ ನೈಟ್ರೇಟ್ ಮತ್ತು ಜಿಪ್ಸಮ್ ಪೌಡರ್ ಹೆಸರಿನಲ್ಲಿ ಅಡಿಕೆಗಳನ್ನು ಕಳ್ಳಸಾಗಣೆ ಮಾಡಲಾಗಿತ್ತು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…