Advertisement
ಸುದ್ದಿಗಳು

ವಿದೇಶದಿಂದ ಬಂದರು ಮೂಲಕ ಆಗಮನವಾದ 8.61 ಕೋಟಿ ರೂ ಮೌಲ್ಯದ ಅಡಿಕೆ ಆಮದಿಗೆ ತಡೆ | ಮಣಿಪುರದಲ್ಲಿ 18.72 ಲಕ್ಷ ರೂಪಾಯಿ ಮೌಲ್ಯ ಅಡಿಕೆ ಕಳ್ಳಸಾಗಾಣಿಕೆಗೆ ತಡೆ |

Share

ಕಳೆದ ಕೆಲವು ಸಮಯಗಳಿಂದ ಅಡಿಕೆಯು ಅಸ್ಸಾಂ ಮೂಲಕ ವಾಹನಗಳಲ್ಲಿ ಕಳ್ಳಸಾಗಾಣಿಕೆಯಾಗಿ ಭಾರತದ ಮಾರುಕಟ್ಟೆಗೆ ಪ್ರವೇಶ ಮಾಡುತ್ತಿತ್ತು, ಇದೀಗ ಬೃಹತ್‌ ಪ್ರಮಾಣದ ಅಡಿಕೆ ಬಂದರು ಮೂಲಕ ಆಗಮಿಸುತ್ತಿರುವುದು  ಬೆಳಕಿಗೆ ಬಂದಿದೆ. ಸುಮಾರು 8.61 ಕೋಟಿ ರೂಪಾಯಿ ಮೌಲ್ಯದ ಒಟ್ಟು 114.372 ಮೆಟ್ರಿಕ್‌ ಟನ್‌ಗಳಷ್ಟು  ಅಡಿಕೆಯನ್ನು ಡಿಆರ್‌ಐ ವಶಪಡಿಸಿಕೊಂಡಿವೆ. ಇದೇ ವೇಳೆ ಮಣಿಪುರದ ಸೇನಾಪತಿ ಜಿಲ್ಲೆಯಿಂದ ನಾಗಾಲ್ಯಾಂಡ್‌ನ ವಾಣಿಜ್ಯ ಕೇಂದ್ರವಾದ ದಿಮಾಪುರ್‌ಗೆ  ಸಾಗಿಸಬೇಕಿದ್ದ ಸುಮಾರು 18.72 ಲಕ್ಷ ರೂಪಾಯಿ ಮೌಲ್ಯದ 2880 ಕೆಜಿ ಅಡಿಕೆಯನ್ನುಯ ವಶಪಡಿಸಿಕೊಳ್ಳಲಾಗಿದೆ. ಹೀಗಾಗಿ ಅಡಿಕೆ ಆಮದು ತಂಡ ಮತ್ತೆ ಸಕ್ರಿಯವಾಗಿರುವುದು  ಬೆಳಕಿಗೆ ಬಂದಿದೆ.

ವಿವಿಧ ಕಡೆಗಳಿಂದ ಕಂಟೈನರ್‌ಗಳಲ್ಲಿ ಬೃಹತ್ ಪ್ರಮಾಣದಲ್ಲಿ  ಅಡಿಕೆಯನ್ನು ಭಾರತಕ್ಕೆ ಅಕ್ರಮವಾಗಿ ಆಮದು ಮಾಡಿಕೊಳ್ಳಲಾಗುತ್ತಿದೆ ಎಂಬ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಡಿಆರ್‌ ಐ ಕಾರ್ಯಾಚರಣೆ ನಡೆಸಿತ್ತು. ಬಾರ್ಲಿ, ಪ್ರಾಣಿ ಆಹಾರ ಎಂದು ತಪ್ಪಾಗಿ ನಮೂದಿಸಿ ಅಡಿಕೆ ಸಾಗಾಣಿಕೆ ಮಾಡಲಾಗುತ್ತಿತ್ತು. ಟ್ಯುಟಿಕೋರಿನ್ ಮತ್ತು ಚೆನ್ನೈ ಬಂದರಿನ ಮೂಲಕ ಒಟ್ಟು ಐದು ಕಂಟೈನರ್‌ಗಳನ್ನು ತಡೆಹಿಡಿದು ತನಿಖೆ ನಡೆಸುತ್ತಿದ್ದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಒಟ್ಟು 114.372 ಮೆಟ್ರಿಕ್‌ ಟನ್‌ಗಳಷ್ಟು ಕಳ್ಳಸಾಗಣೆ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ. ಎಲ್ಲಾ 5 ಕಂಟೈನರ್‌ಗಳ ಆಮದು ಚೆನ್ನೈ ಮೂಲದ ವ್ಯಕ್ತಿಯಿಂದ ಮಾಡಲ್ಪಟ್ಟಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಈ ಹಿಂದೆ‌ ಡಿಆರ್‌ಐಯು ಇಂಡೋನೇಷ್ಯಾದಿಂದ ಆಮದು ಮಾಡಿಕೊಳ್ಳಲಾಗುತ್ತಿದ್ದ 232.349 ಮೆಟ್ರಿಕ್‌ ಟನ್ ಅಡಿಕೆಯನ್ನು ವಶಪಡಿಸಿಕೊಂಡಿದೆ. 2022-23ರಲ್ಲಿ 143 ಕೋಟಿ ಮೌಲ್ಯದ ಸುಮಾರು 3670.19 ಮೆ.ಟನ್ ಅಡಿಕೆಯನ್ನು ಡಿಆರ್‌ಐನ ವಿವಿಧ ಘಟಕಗಳು ವಶಪಡಿಸಿಕೊಂಡಿವೆ.

ಇದೇ ವೇಳೆ ಮಣಿಪುರದ ಸೇನಾಪತಿ ಜಿಲ್ಲೆಯಿಂದ ನಾಗಾಲ್ಯಾಂಡ್‌ನ ವಾಣಿಜ್ಯ ಕೇಂದ್ರವಾದ ದಿಮಾಪುರ್‌ಗೆ ಸಾಗಿಸಬೇಕಿದ್ದ  ಸುಮಾರು 18.72 ಲಕ್ಷ ರೂಪಾಯಿ ಮೌಲ್ಯದ 2880 ಕೆಜಿ ಅಡಿಕೆಯ ಅಕ್ರಮ ಸಾಗಣೆಯನ್ನು ಅಸ್ಸಾಂ ರೈಫಲ್ಸ್ ಪತ್ತೆ ಮಾಡಿದೆ. ಅಸ್ಸಾಂ ಗಡಿ ತಲುಪಿದ ಬಳಿಕ ತಲೆ ಹೊರೆ ಹಾಗೂ ಸಣ್ಣ ವಾಹನಗಳ ಮೂಲಕ ಭಾರತದ ಮಾರುಕಟ್ಟೆಗೆ ಅಡಿಕೆ ಸಾಗಾಟ ಮಾಡಲಾಗುತ್ತಿತ್ತು, ಈ ಪ್ರಕರಣವನ್ನು ಅಸ್ಸಾಂ ರೈಫಲ್ಸ್‌ ಪತ್ತೆ ಮಾಡಿದೆ. ಜನವರಿ 12 ರಂದು ಮಣಿಪುರದಲ್ಲಿ ಸುಮಾರು 66.30 ಲಕ್ಷ ರೂಪಾಯಿ ಮೌಲ್ಯದ 5 ಟ್ರಕ್‌ಗಳ ಅಡಿಕೆ ವಶಪಡಿಸಿಕೊಳ್ಳುವುದರೊಂದಿಗೆ 10 ಜನರನ್ನು ವಶಕ್ಕೆ ತೆಗೆದುಕೊಂಡಿತ್ತು. ಇದೀಗ ಮತ್ತೆ ನಡೆಸಿದ ಕಾರ್ಯಾಚರಣೆಯಲ್ಲಿ 2880 ಕೆಜಿ ಅಡಿಕೆಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

3 hours ago

ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್

ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…

3 hours ago

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?

E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…

8 hours ago

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…

9 hours ago

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

1 day ago