ಈಶಾನ್ಯ ರಾಜ್ಯದ ಮೂಲಕ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಭಾರೀ ಪ್ರಮಾಣದ ವಿದೇಶಿ ಅಡಿಕೆಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಗುವಾಹಟಿ ಪ್ರಾದೇಶಿಕ ಘಟಕದ ಅಧಿಕಾರಿಗಳು ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಸುಮಾರು 60,000 ಕೆಜಿ ಅಕ್ರಮ ವಿದೇಶಿ ಅಡಿಕೆ ಜಪ್ತಿ ಮಾಡಿದ್ದಾರೆ. ಈ ಸಂಬಂಧ ಐವರನ್ನು ಬಂಧಿಸಲಾಗಿದೆ ಎಂದು ಹಣಕಾಸು ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ ಎಂದು ಸುದ್ದಿಸಂಸ್ಥೆ ಪಿಟಿಐ ತಿಳಿಸಿದೆ.
ಗುಪ್ತಚರ ಮಾಹಿತಿಯ ಆಧಾರದ ಮೇಲೆ ಮಿಜೋರಾಂ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಡಿಆರ್ಐ ಅಧಿಕಾರಿಗಳು ವಿಶೇಷ ಕಾರ್ಯಾಚರಣೆ ನಡೆಸಿದ್ದರು. ಪ್ರಾಥಮಿಕ ತನಿಖೆಯಲ್ಲಿ, ಈ ವಿದೇಶೀ ಅಡಿಕೆಗಳನ್ನು ಮ್ಯಾನ್ಮಾರ್-ಮಿಜೋರಾಂ ಗಡಿಯ ಮೂಲಕ ಭಾರತಕ್ಕೆ ಕಳ್ಳಸಾಗಣೆ ಮಾಡಲಾಗಿದೆ ಎಂಬುದು ಬೆಳಕಿಗೆ ಬಂದಿದೆ.
ಒಂದು ಕಾರ್ಯಾಚರಣೆಯಲ್ಲಿ ಅಸ್ಸಾಂ ರೈಫಲ್ಸ್ನ 38ನೇ ಬಟಾಲಿಯನ್ ಸಹ ಡಿಆರ್ಐಗೆ ಸಹಕಾರ ನೀಡಿತ್ತು. ಅಧಿಕಾರಿಗಳು ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಭಾರೀ ಪ್ರಮಾಣದ ಅಕ್ರಮ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ.
ನೆರೆಯ ದೇಶಗಳಿಂದ ಆಗುತ್ತಿರುವ ಅಕ್ರಮ ಅಡಿಕೆ ಆಮದು ದೇಶೀಯ ಅಡಿಕೆ ಬೆಳೆಗಾರರಿಗೆ ಭಾರೀ ಆರ್ಥಿಕ ಹೊಡೆತ ನೀಡುತ್ತಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ. ಗಡಿ ಭಾಗಗಳ ಆರ್ಥಿಕ ಭದ್ರತೆಗೂ ಇದರಿಂದ ಧಕ್ಕೆಯಾಗುತ್ತಿದೆ ಎಂಬ ಆತಂಕ ವ್ಯಕ್ತವಾಗಿದೆ.
ಇತ್ತೀಚಿನ ವರ್ಷಗಳಲ್ಲಿ ಈಶಾನ್ಯ ರಾಜ್ಯಗಳ ಮೂಲಕ ವಿದೇಶೀ ಅಡಿಕೆ ಕಳ್ಳಸಾಗಣೆ ಪ್ರಕರಣಗಳು ಹೆಚ್ಚುತ್ತಿರುವುದು ಗಮನಾರ್ಹವಾಗಿದೆ. ವಿಶೇಷವಾಗಿ ಈಶಾನ್ಯ ರಾಜ್ಯಗಳ ಗಡಿ ಭಾಗಗಳನ್ನು ಬಳಸಿಕೊಂಡು ವಿದೇಶಿ ಅಡಿಕೆ ಭಾರತಕ್ಕೆ ಪ್ರವೇಶಿಸುತ್ತಿದೆ ಎಂಬ ಆರೋಪಗಳು ಹಿಂದಿನಿಂದಲೂ ಕೇಳಿಬರುತ್ತಿವೆ. ಅಡಿಕೆ ಬೆಲೆ ಹಾಗೂ ದೇಶೀಯ ಮಾರುಕಟ್ಟೆ ಮೇಲೆ ಇದರ ಪರಿಣಾಮದ ಬಗ್ಗೆ ಕೃಷಿ ವಲಯದಲ್ಲಿ ಚರ್ಚೆ ನಡೆಯುತ್ತಿದೆ.
ಅಕ್ರಮ ವಿದೇಶಿ ಅಡಿಕೆ ದೇಶೀಯ ಅಡಿಕೆ ಬೆಳೆಗಾರರಿಗೆ ದೊಡ್ಡ ಹೊಡೆತ ನೀಡುತ್ತಿದೆ ಎಂದು ಬೆಳೆಗಾರರು ಆರೋಪಿಸುತ್ತಿದ್ದಾರೆ. ಕಡಿಮೆ ದರದಲ್ಲಿ ಬರುತ್ತಿರುವ ವಿದೇಶಿ ಅಡಿಕೆ ಮಾರುಕಟ್ಟೆ ಬೆಲೆಗೆ ಒತ್ತಡ ತರುತ್ತಿದೆ ಎಂಬ ಮಾತು ಕೃಷಿ ವಲಯದಲ್ಲಿ ಕೇಳಿಬರುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಡಿಆರ್ಐ ಅಧಿಕಾರಿಗಳು ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದು, ಈ ಜಾಲದ ಹಿಂದೆ ಇರುವ ಪ್ರಮುಖ ಆರೋಪಿಗಳನ್ನು ಪತ್ತೆಹಚ್ಚಲು ಕ್ರಮ ಕೈಗೊಂಡಿದ್ದಾರೆ.
ಕಳೆದ ಎರಡು ವಾರಗಳಿಂದ ಅಡಿಕೆ ಮಾರುಕಟ್ಟೆಯ ವ್ಯತ್ಯಾಸದ ಬಗ್ಗೆ “ದ ರೂರಲ್ ಮಿರರ್.ಕಾಂ” ವಿಶೇಷ ವರದಿ ಪ್ರಕಟ ಮಾಡಿತ್ತು. ಈ ಮೂಲಕ ಅಕ್ರಮ ಅಡಿಕೆ ಸಾಗಾಟ, ಅಡಿಕೆ ದಾಸ್ತಾನು ಬಗ್ಗೆ ವಿಶೇಷ ವರದಿ ಪ್ರಕಟವಾಗಿತ್ತು. ಅಡಿಕೆ ಬೆಳೆಗಾರರಿಗೆ ಮಾಹಿತಿ ಹಾಗೂ ಜಾಗೃತಿಗೆ ಪ್ರಯತ್ನ ಮಾಡಿತ್ತು. ಇದೀಗ ಅಕ್ರಮ ಆಮದು ಸುದ್ದಿಗಳ ಖಚಿತವಾಗಿದೆ. ಹಿಂದಿನ ಸುದ್ದಿಗಳ ಲಿಂಕ್ ಇಲ್ಲಿದೆ………
The Directorate of Revenue Intelligence (DRI), Guwahati Regional Unit, seized around 60,000 kg of smuggled foreign supari in two major operations conducted in the Northeast region. Officials suspect the arecanut was illegally brought into India through border routes. The seizure has raised concerns among Indian arecanut growers over the impact of cheap foreign imports on domestic market prices.
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…
ರಾಜ್ಯದಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗಿದ್ದು, ಮೇ ಅಂತ್ಯದವರೆಗೂ ಜೋರು ಮಳೆಯ ಸಾಧ್ಯತೆ ಕಡಿಮೆ…
ಕಾಕ್ರೋಚ್ ಜನತಾ ಪಾರ್ಟಿ ಎಂಬ ವ್ಯಂಗ್ಯಾತ್ಮಕ ಸಾಮಾಜಿಕ ಜಾಲತಾಣ ಚಳವಳಿ 60 ಲಕ್ಷಕ್ಕೂ…
ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…
ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…