Advertisement
MIRROR FOCUS

ಬೇಸಗೆಯ ಕಾವು ಹೆಚ್ಚಾಯ್ತು | ನೀರಿನ ಬಗ್ಗೆ ಇರಲಿ ಎಚ್ಚರ | ಕುಡಿಯುವ ನೀರಿಗೂ ತತ್ತ್ವಾರ ಬಂದಿದೆ ಎಚ್ಚರವಾಗಿ..!!

Share

ನೀರು(Water) ಜೀವ ಜಲ. ಈಗಲೇ ಎಚ್ಚರವಾಗಿ, ಹಲವು ಕಡೆ ನೀರಿಗೆ ಹಾಹಾಕಾರವೆದ್ದಿದೆ(Water Crisis). ಕೆಲವು ಕಡೆ ನೀರಿಲ್ಲದೆ ಪರದಾಟ ಶುರುವಾಗಿದೆ. ನೀರಿನ ಮೂಲ(Water source) ಮಾರ್ಚ್ ಮೊದಲರ್ಧದಲ್ಲೇ ಈ ಬಾರಿ ಬರಿದಾಗಿದೆ. ಇನ್ನು ಸ್ವಲ್ಪ ದಿನಗಳಲ್ಲಿ ಬೆಂಗಳೂರಿಗೆ(Bengaluru) ನೀರುಣಿಸುವ KRS ಕೂಡಾ ಬರಿದಾಗಲಿದೆ. ಪ್ರಕೃತಿ ಮುನಿಸಿಕೊಂಡು ಮಳೆಯ(Rain) ಕೃಪೆ ತೋರದೇ ಇದ್ದರೆ ಜೀವನದ ಸಂಕಷ್ಟ ಹೇಳತೀರದಂತಾಗಲಿದೆ, ಕುಡಿಯುವ ನೀರಿಗೂ(Drinking water) ಸಂಕಷ್ಟ ಎದುರಾಗಲಿದೆ. ಗುಳೇ(Migration) ಹೋಗುವ ಪರಿಸ್ಥಿತಿ ಬಂದರೂ ಬರಬಹುದು. ಇದಕ್ಕಾಗಿ ಈಗಲೇ ಎಚ್ಚರವಾಗಿ ನೀರಿನ ಬಗ್ಗೆ ಇರಲಿ ಎಚ್ಚರ.

ಇದು ಎಚ್ಚರಿಕೆ ಕರೆಗಂಟೆ, ಪ್ರತಿಯೊಬ್ಬರೂ ನೀರಿನ ಮಿತಬಳಕೆ ಬಗ್ಗೆ ಯೋಚಿಸಿ, ತಮ್ಮ ತಮ್ಮ ಮನೆ, ಅಪಾರ್ಟ್ಮೆಂಟ್ನಲ್ಲಿ ನೀರುಳಿಸುವ ಪ್ರಯತ್ನ ಪಡಬೇಕಾದ ಅತ್ಯವಶ್ಯಕತೆ ಇದೆ.ಕೃಷಿಯಲ್ಲೂ ಯಥೇಚ್ಛವಾಗಿ ನೀರು ಬಳಕೆ ಮಾಡಬೇಡಿ. ಅಗತ್ಯಕ್ಕೆ ಎಷ್ಟು ಬೇಕೋ ಅಷ್ಟನ್ನು ಬಳಕೆ ಮಾಡಿ. ಕೊಳವೆಬಾವಿಯಿಂದ ಬೇಕಾಬಿಟ್ಟಿಯಾಗಿ ನೀರೆತ್ತಬೇಡಿ, ಉಚಿತ ವಿದ್ಯುತ್‌ ನೆಪದಲ್ಲಿ ಕೊಳವೆಬಾವಿಯನ್ನೇ ಬರಿದು ಮಾಡಬೇಡಿ. ಈ ಪರಿಸರ, ಸಮಾಜದ ಮೇಲೂ ಕಾಳಜಿ ಇರಲಿ. ನೀರು ಉಳಿಸಲು ಈಗ ಹೀಗೆ ಮಾಡಿ…

ಎಚ್ಚರಿಕೆಗಳು ಹೀಗೆ ಇರಲಿ:

  • ನೀರನ್ನು ಆದಷ್ಟು ಮರುಬಳಕೆ ಮಾಡಿ.
  • ಕುಡಿಯಲು ಹಾಹಾಕಾರ ಇರುವ ಸಂದರ್ಭದಲ್ಲಿ, ವಾಹನಗಳನ್ನು ತೊಳೆಯುವ ನೀರನ್ನು ಉಳಿಸಿ-ತೊಳೆಯದೇ ಇದ್ದರೂ ಪರವಾಗಿಲ್ಲ.
  • ಟಾಯ್ಲೆಟ್ ಫ್ಲಶ್ ಮಾಡುವಾಗ ಎಚ್ಚರ ವಹಿಸಿ, ಮಿತ ಬಳಕೆ ಮಾಡಿ!.
  • ಕಡಿಮೆ ನೀರಿನಲ್ಲಿ ಸ್ನಾನ ಮುಗಿಸಿ, ನೀರು ಉಳಿಸಿ. ಸ್ನಾನಕ್ಕೆ ಬಕೆಟ್ ಬಳಸಿ.
  • ಶವರ್ ಬಳಕೆ ಕಡ್ಡಾಯ ನಿಲ್ಲಿಸಿ.
  • ಟೆರೇಸ್ ಗಾರ್ಡನ್, ನಿಮ್ಮ ಅಪಾರ್ಟ್ಮೆಂಟ್ ಗಿಡಗಳ ನೀರುಣಿಸುವಿಕೆ ಮಿತಗೊಳಿಸಿ, ಪೋಲಾಗುವುದನ್ನು ತಪ್ಪಿಸಿ. ಪಾತ್ರೆ ತೊಳೆದ ನೀರನ್ನು ಗಿಡಗಳಿಗೆ ಬಳಸಿ.
  • ಬ್ರಶ್ ಮತ್ತು ಶೇವ್ ಮಾಡುವಾಗ ನಲ್ಲಿಯನ್ನು ತೆರೆದಿಡಬೇಡಿ.
  • ಕುಡಿಯುವ ನೀರಿನ ಬಾಟಲಿಗಳಲ್ಲಿ ಅರ್ಧ ನೀರು ಪೋಲು ಮಾಡಿ ಬಿಸಾಕಬೇಡಿ.
  • ನಲ್ಲಿಯ ಲೀಕೇಜ್ ಗಳನ್ನು ಕೂಡಲೆ ಸರಿಪಡಿಸಿ.
  • ನೀರು ಬಂಗಾರಕ್ಕಿಂತ ಸಾವಿರ ಪಾಲು ಮಿಗಿಲು.‌ ನಿಮ್ಮ ಒಡವೆಗಳಿಗೆ ಕೊಡುವ ಗಮನ ನೀರಿಗೂ ಕೊಡಿ.
  • ಮಕ್ಕಳು ನೀರು ಪೋಲು‌ಮಾಡದಂತೆ, ಓವರ್ ಟ್ಯಾಂಕ್ ಗಳು ತುಂಬಿ ಹರಿಯದಂತೆ ಎಚ್ಚರ ವಹಿಸಿ. ನಾನೊಬ್ಬ ಮಿತ ಬಳಕೆ ಮಾಡಿದರಾಯಿತೆ ಎಂಬ ವಿತಂಡವಾದ ಬೇಡ. ಎಲ್ಲ ಬೆಂಗಳೂರಿಗರು ತಲೆಗೊಬ್ಬರಂತೆ ದಿನಕ್ಕೆ 2.5 ಲೀಟರ್ ನೀರು ಉಳಿಸಿದರೆ, 22 ದಿನಗಳಲ್ಲಿ ಒಂದು ಅಲಸೂರು ಕೆರೆಯನ್ನು ತುಂಬಿಸಬಲ್ಲುದು! ಯೋಚಿಸಿ, ನೀರು ಉಳಿಸಿ
  • ಕೃಷಿಕರೂ ಅಷ್ಟೇ, ಕೊಳವೆಬಾವಿಯಿಂದ ದಿನಕ್ಕೆ ಅಗತ್ಯವಾದರೆ ಮಾತ್ರಾ ತೋಟಕ್ಕೆ ನೀರುಣಿಸಿ
  • ಕೆರೆ, ಹೊಳೆಗಳು ಇದ್ದರೆ ಅದರಿಂದಲೇ ನೀರನ್ನು ಬಳಕೆ ಮಾಡಿ
  • ಅಂತರ್ಜಲಮಟ್ಟ ಕಾಪಾಡಿಕೊಂಡರೆ ಕೆರೆ, ಬಾವಿಗಳಲ್ಲೂ ನೀರು ಉಳಿಯಲು ಸಾಧ್ಯವಿದೆ.
  • ತೋಟಗಳಿಗೆ ಅಗತ್ಯಕ್ಕೆ ತಕ್ಕಷ್ಟೇ ಈಗ ನೀರು ಬಳಕೆ ಮಾಡಲು ಅಭ್ಯಾಸ ಮಾಡಿರಿ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

15 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 day ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago